ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾದಿಗರಿಗೆ ಸಿಗದ ಸಚಿವ ಸ್ಥಾನ: ಮಾಜಿ ಸಚಿವ ಆಂಜನೇಯ ಆಕ್ರೋಶ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 29: ಕರ್ನಾಟಕದ ಇತಿಹಾಸದಲ್ಲಿ ಈವರೆಗೂ ರಚನೆಯಾಗಿರುವ ಎಲ್ಲಾ ಸರ್ಕಾರಗಳಲ್ಲಿ ಪರಿಶಿಷ್ಟ ಪಂಗಡದ ಎಡ ಸಮುದಾಯಗಳ ಪೈಕಿ ಮಾದಿಗ ಸಮುದಾಯದ ಒಬ್ಬರು ಸಚಿವರಾಗಿರುತ್ತಿದ್ದರು.

ಅಳೆದು ತೂಗಿ ದಸರೆಗೂ ಮುನ್ನ ನಡೆಯಲಿದೆ ಸಂಪುಟ ವಿಸ್ತರಣೆ ಅಳೆದು ತೂಗಿ ದಸರೆಗೂ ಮುನ್ನ ನಡೆಯಲಿದೆ ಸಂಪುಟ ವಿಸ್ತರಣೆ

ಇದೇ ಮೊದಲ ಬಾರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಮಾದಿಗರಿಗೆ ಸ್ಥಾನ ಕೊಡದೆ ಅನ್ಯಾಯವೆಸಗಲಾಗಿದೆ ಎಂದು ಮಾಜಿ ಸಚಿವ ಎಚ್‌ ಆಂಜನೇಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಸಂಪುಟ ಸೇರುವ ಕಾಂಗ್ರೆಸ್ ಶಾಸಕರ ಪಟ್ಟಿ ಕುಮಾರಸ್ವಾಮಿ ಸಂಪುಟ ಸೇರುವ ಕಾಂಗ್ರೆಸ್ ಶಾಸಕರ ಪಟ್ಟಿ

ಪ್ರೆಸ್‌ಕ್ಲಬ್‌ನಲ್ಲಿ ರಾಜ್ಯಸಭಾ ಸದಸ್ಯ ಎಲ್ ಹನುಮಂತಯ್ಯ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಮಾದಿಗರಿಗೆ ಈ ಬಾರಿ ಅವಕಾಶವನ್ನು ಕೊಡಲೇ ಬೇಕು, ರಾಜ್ಯದಲ್ಲಿ 40 ಲಕ್ಷಕ್ಕೂ ಅಧಿಕ ಮಾದಿಗರಿದ್ದಾರೆ.

Coalition should face caste census and Sadashiva commission issues

ಇಷ್ಟು ಜನಸಂಖ್ಯೆಯುಳ್ಳ ಸಮುದಾಯಕ್ಕೆ ಪ್ರಾತಿನಿಧ್ಯ ಇಲ್ಲದಿರುವುದು ಇದೇ ಮೊದಲ ಬಾರಿ, ಈ ಅನ್ಯಾಯವನ್ನು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಹೈಮಾಂಡ್ ಸರಿಪಡಿಸುತ್ತದೆ ಎಂಬ ವಿಶ್ವಾಸವಿದೆ ಇಲ್ಲದಿದ್ದರೆ ನಮ್ಮ ಸಮುದಾಯದ ಜನರಿಗೆ ಅನ್ಯಾಯವಾಗುತ್ತದೆ ಎಂದರು.

ಸಚಿವ ಸಂಪುಟ ವಿಸ್ತರಣೆಗೆ ಸಿದ್ದರಾಮಯ್ಯ 4 ಸೂತ್ರಗಳು! ಸಚಿವ ಸಂಪುಟ ವಿಸ್ತರಣೆಗೆ ಸಿದ್ದರಾಮಯ್ಯ 4 ಸೂತ್ರಗಳು!

ರಾಜ್ಯಸಭಾ ಸದಸ್ಯ ಎನ್ ಹನುಮಂತಯ್ಯ ಮಾತನಾಡಿ, ಸಚಿವ ಸಂಪುಟದಲ್ಲಿ ರೂಪಾ ಶಶಿಧರ್ ಅವರಿಗೆ ಅವಕಾಶ ನೀಡಬೇಕು ಅದರಿಂದ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದಂತಾಗುತ್ತದೆ ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ ರಾಜ್ಯಸರ್ಕಾರ ಸದಾಶಿವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟರು.

English summary
Pressure may build on state coalition government about disclose recommendations of Sadashiva commission report and caste census.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X