ಮಾದಿಗರಿಗೆ ಸಿಗದ ಸಚಿವ ಸ್ಥಾನ: ಮಾಜಿ ಸಚಿವ ಆಂಜನೇಯ ಆಕ್ರೋಶ
ಬೆಂಗಳೂರು, ಸೆಪ್ಟೆಂಬರ್ 29: ಕರ್ನಾಟಕದ ಇತಿಹಾಸದಲ್ಲಿ ಈವರೆಗೂ ರಚನೆಯಾಗಿರುವ ಎಲ್ಲಾ ಸರ್ಕಾರಗಳಲ್ಲಿ ಪರಿಶಿಷ್ಟ ಪಂಗಡದ ಎಡ ಸಮುದಾಯಗಳ ಪೈಕಿ ಮಾದಿಗ ಸಮುದಾಯದ ಒಬ್ಬರು ಸಚಿವರಾಗಿರುತ್ತಿದ್ದರು.
ಇದೇ ಮೊದಲ ಬಾರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಮಾದಿಗರಿಗೆ ಸ್ಥಾನ ಕೊಡದೆ ಅನ್ಯಾಯವೆಸಗಲಾಗಿದೆ ಎಂದು ಮಾಜಿ ಸಚಿವ ಎಚ್ ಆಂಜನೇಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರೆಸ್ಕ್ಲಬ್ನಲ್ಲಿ ರಾಜ್ಯಸಭಾ ಸದಸ್ಯ ಎಲ್ ಹನುಮಂತಯ್ಯ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಮಾದಿಗರಿಗೆ ಈ ಬಾರಿ ಅವಕಾಶವನ್ನು ಕೊಡಲೇ ಬೇಕು, ರಾಜ್ಯದಲ್ಲಿ 40 ಲಕ್ಷಕ್ಕೂ ಅಧಿಕ ಮಾದಿಗರಿದ್ದಾರೆ.

ಇಷ್ಟು ಜನಸಂಖ್ಯೆಯುಳ್ಳ ಸಮುದಾಯಕ್ಕೆ ಪ್ರಾತಿನಿಧ್ಯ ಇಲ್ಲದಿರುವುದು ಇದೇ ಮೊದಲ ಬಾರಿ, ಈ ಅನ್ಯಾಯವನ್ನು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಹೈಮಾಂಡ್ ಸರಿಪಡಿಸುತ್ತದೆ ಎಂಬ ವಿಶ್ವಾಸವಿದೆ ಇಲ್ಲದಿದ್ದರೆ ನಮ್ಮ ಸಮುದಾಯದ ಜನರಿಗೆ ಅನ್ಯಾಯವಾಗುತ್ತದೆ ಎಂದರು.
ರಾಜ್ಯಸಭಾ ಸದಸ್ಯ ಎನ್ ಹನುಮಂತಯ್ಯ ಮಾತನಾಡಿ, ಸಚಿವ ಸಂಪುಟದಲ್ಲಿ ರೂಪಾ ಶಶಿಧರ್ ಅವರಿಗೆ ಅವಕಾಶ ನೀಡಬೇಕು ಅದರಿಂದ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದಂತಾಗುತ್ತದೆ ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ ರಾಜ್ಯಸರ್ಕಾರ ಸದಾಶಿವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications