ಜ.21, 22ರಂದು ಬೆಂಗ್ಳೂರಿನಲ್ಲಿ ಕರಾವಳಿಗರ ನಮ್ಮೂರ ಹಬ್ಬ
ಬೆಂಗಳೂರು. ಜನವರಿ. 20 : ಅಭಿನಂದನ ಸಾಂಸ್ಕೃತಿಕ ಟ್ರಸ್ಟ್ ಬೆಂಗಳೂರು ಇದರ ನಾಲ್ಕನೇ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸುತ್ತಿರುವ "ನಮ್ಮೂರ ಹಬ್ಬ-2017" ಜನವರಿ 21 ನೇ ಶನಿವಾರ ಹಾಗೂ ಜನವರಿ 22ನೇ ಭಾನುವಾರ ಬೆಳಿಗ್ಗೆ 10 ರಿಂದ ರಾತ್ರಿ 10 ಗಂಟೆಯವರೆಗೆ ಜಯನಗರದ 5ನೇ ಹಂತದಲ್ಲಿರುವ ಚಂದ್ರಗುಪ್ತ ಮೌರ್ಯ ಕ್ರೀಡಾಂಗಣದಲ್ಲಿ (ಶಾಲಿನಿ ಗ್ರೌಂಡ್) ನಡೆಯಲಿದೆ.
ಶಿವರಾಜ್ ಕುಮಾರ್ ಕಳೆದ ಬಾರಿ ಈ ನಮ್ಮೂರ ಹಬ್ಬದ ಮುಖ್ಯ ಅತಿಥಿಗಳಾಗಿದ್ದರು. ಈ ಬಾರಿಯ ನಮ್ಮೂರ ಹಬ್ಬದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಇದು ಕರ್ನಾಟಕ ಕರಾವಳಿ ಭಾಗದ ಸಂಸ್ಕೃತಿ, ಜನಪದ ಆಚರಣೆ, ಕ್ರೀಡೆ, ಜೀವನ ಶೈಲಿಯ ಶ್ರೀಮಂತಿಕೆ ಮತ್ತು ಕರಾವಳಿಯ ಖಾದ್ಯಗಳ ವೈವಿಧ್ಯತೆಯನ್ನು ಬೆಂಗಳೂರಿಗರಿಗೆ ಪರಿಚಯಿಸುವುದರ ಜತೆಗೆ ಇಲ್ಲಿ ನೆಲೆಸಿರುವ ಕರಾವಳಿಗರ ಅಪರೂಪದ ಸಮ್ಮಿಲನಕ್ಕೆ ವೇದಿಕೆ ಕಲ್ಪಿಸುವ ಉತ್ಸವವಾಗಿದೆ.

ಇಂದು ಬೆಂಗಳೂರಿನಲ್ಲಿ ಸರಿಸುಮಾರು 15 ಲಕ್ಷದಷ್ಟು ಕರಾವಳಿಯ ಜನರಿದ್ದು ಕರಾವಳಿಯ ತಾಯಿಬೇರಿನ ಜೊತೆಗಿನ ಅನುಬಂಧವನ್ನು ಕಡಿದುಕೊಳ್ಳದೆ ಜತನದಿಂದ ಕಾಪಿಟ್ಟುಕೊಂಡಿದ್ದಾರೆ.
ಇವರೆಲ್ಲರನ್ನೂ ಒಂದೇ ಸೂರಿನಡಿ ನೋಡುವ, ಅಪರೂಪದ ಕಲಾವಿದರಿಗೆ ವೇದಿಕೆ ಕೊಡುವ, ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಮೆಲುಕು ಹಾಕುವ ಹಾಗೂ ಸಂಸ್ಕೃತಿ ವಿನಿಮಯದಂತಹ ಸದುದ್ದೇಶವನ್ನು ನಮ್ಮೂರ ಹಬ್ಬ ಹೊಂದಿದೆ.

ಬೆಂಗಳೂರಿಗರಿಗೆ ಕರಾವಳಿ ಖಾದ್ಯಗಳ ಪರಿಚಯ: ಕರ್ನಾಟಕ ಕರಾವಳಿ ಭಾಗದ ಸಂಸ್ಕೃತಿ, ಜನಪದ ಆಚರಣೆ, ಕ್ರೀಡೆ ಮತ್ತು ಕರಾವಳಿ ಖಾದ್ಯಗಳ ವೈವಿಧ್ಯತೆಯನ್ನು ಬೆಂಗಳೂರಿಗೆ ಪರಿಚಯಿಸುವ ಉತ್ಸವ ಇದಾಗಿದೆ.
ಈ ಎಲ್ಲ ಮನೋರಂಜನೆಗಳ ಜೊತೆಗೆ ಕರಾವಳಿಯಿಂದ ಬರುವ ನುರಿತ ಬಾಣಸಿಗರು ಸ್ಥಳದಲ್ಲೇ ತಯಾರಿಸುವ ನೀರುದೋಸೆ, ಹಾಲುಬಾಯಿ, ಕಾಯಿ ಕಡುಬು, ಗೋಲಿಬಜೆ, ಪತ್ರೊಡೆ, ಉದ್ದಿನ ದೋಸೆ, ಕಡಲ ಏಡಿಯ ಸುಕ್ಕ, ಕೋರಿ ರೊಟ್ಟಿ, ಮೀನು ಹಾಗೂ ಸಿಗಡಿ ಬಳಸಿ ತಯಾರಿಸಿದ ಅಪರೂಪದ ಖಾದ್ಯಗಳು ಈ ಬಾರಿಯ ನಮ್ಮೂರ ಹಬ್ಬದ ವಿಶೇಷವಾಗಿರುತ್ತದೆ.
ನಮ್ಮೂರ ಹಬ್ಬದ ವಿಶೇಷ ಆಕರ್ಷಣೆ ಏನು? ಗಾಳಿಪಟ ಉತ್ಸವ,ಫೊಟೋ ಸಂತೆ ಮತ್ತು ಕಾರ್ಟೂನ್ ಹಬ್ಬವು ಈ ಬಾರಿಯ ವಿಶೇಷ ಆಕರ್ಷಣೆಯಾಗಲಿವೆ.
ನಮ್ಮೂರ ಹಬ್ಬದಲ್ಲಿ ಕಿರೀಟ ಪಡೆಯಲಿರುವ ಗಣ್ಯರು: ಡಾ.ಬಿ. ವಿ. ಆಚಾರ್ಯ, ಮಾಜಿ ಅಡ್ವೋಕೇಟ್ ಜನರಲ್ (ಕಾನೂನು ಕ್ಷೇತ್ರ), ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಉದ್ಯಮಿ (ಹೊರನಾಡ ಸಾಧನೆ)
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications