ಐತಿಹಾಸಿಕ ಕೆರೆ ಪುನಶ್ಚೇತನಕ್ಕೆ ಮುಂದಾದ ಕೋಕಾಕೋಲಾ ಕಂಪನಿ, ವಿವರ
ಬೆಂಗಳೂರು, ಜೂನ್ 21: ಗುಮ್ಮಟ ನಗರಿ ಬಬಲೇಶ್ವರ ತಾಲ್ಲೂಕಿನಲ್ಲಿ ಇರುವ ಐತಿಹಾಸಿಕ ಮಮದಾಪುರ ಕೆರೆಯು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ 'ಕೋಕಾಕೋಲಾ ಕಂಪನಿ'ಯಿಂದ ಪುನಶ್ಚೇತನಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಶುಕ್ರವಾರ ಮಾಹಿತಿ ನೀಡಿದರು.
ಈ ಕುರಿತು ಕಂಪನಿಯ ಉನ್ನತಾಧಿಕಾರಿಗಳಾದ ಹಿಮಾಂಶು ಪ್ರಿಯದರ್ಶಿ ಮತ್ತು ಮುಕುಂದ್ ತ್ರಿವೇದಿ ಅವರು ಬೆಂಗಳೂರಿನಲ್ಲಿ ಸಚಿವ ಎಂಬಿ ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

16ನೇ ಶತಮಾನದಲ್ಲಿ ಆದಿಲ್ ಶಾಹಿ ಸುಲ್ತಾನರ ಕಾಲದಲ್ಲಿ ನಿರ್ಮಿತವಾಗಿರುವ ಮಮದಾಪುರ ಕೆರೆಯು ರಾಜ್ಯದ ಅತಿದೊಡ್ಡ ಕೆರೆಗಳ ಪೈಕಿ ಒಂದಾಗಿದ್ದು, 674 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರುಣಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೋಕಾಕೋಲಾ ಕಂಪನಿಯು ಕೆರೆಗೆ ನೀರನ್ನು ಹೊತ್ತು ತರುವ ಮುಖ್ಯ ನಾಲೆಯ ಹೂಳೆತ್ತಿ, ಬಾಂದಾರವನ್ನು ನಿರ್ಮಿಸಲಿದೆ. ಜೊತೆಗೆ ಕೆರೆಯ ಏರಿ ಬಲಪಡಿಸುವಿಕೆ, ಬೇಲಿ, ಪಾದಚಾರಿ ಮಾರ್ಗ ಮತ್ತು ಮಕ್ಕಳು ಆಟವಾಡುವ ಜಾಗವನ್ನು ಮಾಡಿಕೊಡಲಿದೆ ಎಂದು ಅವರು ಹೇಳಿದರು.

ಕೆರೆಯ ಸುತ್ತಮುತ್ತ ಹಸಿರಿನಿಂದ ತುಂಬಿರುವ 1,654 ಎಕರೆ ಅರಣ್ಯವಿದೆ. ಕೆರೆ ಪುನಶ್ಚೇತನದ ಬಳಿಕ ಈ ಸ್ಥಳವು ಪ್ರವಾಸಿ ಆಕರ್ಷಣೆಯ ತಾಣವಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೃಷಿಗೆ ಪೂರಕವಾಗಿ ಕೆರೆ ಪುನಃಶ್ಚೇತನಕ್ಕೆ ಕ್ರಮ
ರಾಜ್ಯದ ಮೂರನೇ ಅತೀ ದೊಡ್ಡ ಕೆರೆ ಎಂದು ಹೆಸರಾಗಿರುವ ವಿಜಯಪುರದ ಮಮದಾಪುರ ಕೆರೆಯಲ್ಲಿ 2,00,000 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸುವ ಉದ್ದೇಶ ಹೊಂದಿದ್ದೇವೆ. ಸದ್ಯ ವಿಶಾಲವಾದ ಈ ಕೆರೆಯಲ್ಲಿ 56,000 ಗಿಡಗಳನ್ನು ನೆಡಲಾಗುತ್ತಿದೆ. ಈ ಮೂಲಕ ಈ ಭಾಗದಲ್ಲಿ ಕೃಷಿಗೆ ಪೂರಕವಾದ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ಈ ಹಿಂದೆ ಎಂಬಿ ಪಾಟೀಲ್ ಅವರು ಹೇಳಿದ್ದರು.
ಸದ್ಯ ವಿಶಾಲ ಕೆರೆಯಲ್ಲಿ ಗಿಡ ನೆಟ್ಟು ಟ್ಯಾಂಕರ್ ನೀರಿನಿಂದ ನೀರು ಪೂರೈಸಲಾಗುತ್ತಿದೆ. ಇಲ್ಲಿ ಗಿಡ ಗಂಟಿಗಳು, ಕಸ ಬೆಳದು ಹೂಳು ತುಂಬಿತ್ತು. ದರ ಪುನಶ್ಚೇತನದ ಅಗತ್ಯತೆ ಇತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಈ ಜಿಲ್ಲೆವ್ಯಾಪ್ತಿಯ ನಿವಾಸಿಗಳು ಕನಸು ಈಡೇರುವ ಕಾಲ ಸನ್ನಿಸಹಿತವಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications