Breaking: ಬೆಂಗಳೂರಲ್ಲಿ 2 ದಿನದಿಂದ ಅತೀ ಕಡಿಮೆ ತಾಪಮಾನ ದಾಖಲು, ಚಳಿ ಏರಿಕೆ
ಬೆಂಗಳೂರು ಜನವರಿ 17: ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಿನಲ್ಲಿ ಕಳೆದ ಎರಡು ದಿನದಿಂದ ಮತ್ತೆ ತೀವ್ರ ಚಳಿ ಹಾಗೂ ದಟ್ಟ ಮಂಜಿನ ವಾತವರಣ ಆವರಿಸಿದೆ. ನಾಲ್ಕು ವರ್ಷಗಳ ನಂತರ ಆಗಾಗ ಅತಿ ಕನಿಷ್ಠ 13ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ.
ನಗರದಲ್ಲಿ ಕಳೆದ ವಾರವಷ್ಟೇ 12.5 ರಿಂದ 13 ಡಿಗ್ರಿ ಸೆಲ್ಸಿಯಸ್ ನಷ್ಟು ಅತೀ ಕನಿಷ್ಠ ತಾಪಮಾನ ದಾಖಲಾಗಿತ್ತು. ಇದು 2018ರಿಂದ ಈಚೆಗೆ ಕಂಡು ಬಂದಿದ್ದು, ಅತೀ ಕನಿಷ್ಠ ಹಾಗೂ ತೀವ್ರ ಚಳಿ ಪ್ರಮಾಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಭಾನುವಾರ ಸಂಜೆಯಿಂದ ಬೆಂಳೂರಿನಲ್ಲಿ ಮತ್ತೆ ಚಳಿ, ತೇವಾಂಶ ಭರಿತ ಗಾಳಿ ಬೀಸುವಿಕೆ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಉತ್ತರ ಭಾಗದಿಂದ ಗಾಳಿ ಹೆಚ್ಚಾಗಿ ಬಿಸುತ್ತಿದೆ. ಚಳಿಗಾಲದಲ್ಲಿ ಅದರಲ್ಲೂ ಜನವರಿಯಲ್ಲಿ ಸಾಮಾನ್ಯವಾಗಿ ಚಳಿ ತುಸು ಹೆಚ್ಚೆ ಕಂಡು ಬರತ್ತದೆ. ಆಕಾಶ ನಿರ್ಮಲವಾಗಿದ್ದು, ಭೂಮಿಯ ತಾಪಮಾನ ಬಹುಬೇಗನೇ ಇಳಿಕೆಯಾಗುವ ಕಾರಣ ಬೆಳಗ್ಗೆ ಚುಮು ಚುಮು ಚಳಿ ಕಂಡು ಬರುತ್ತದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಸೋಮವಾರ ಹಾಗೂ ಮಂಗಳವಾರ ಬೆಳಗ್ಗೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗುವ ಮೂಲಕ ಚಳಿ ಹೆಚ್ಚಾಗಿದೆ. ಇದು ಬುಧವಾರವರೆಗೆ ಮುಂದುವರಿಯಲಿದೆ. ನಂತರ ಮಂಜು ಹಾಗೂ ತಂಪು ವಾತಾವರಣದಲ್ಲಿ ತುಸು ಕಡಿಮೆಯಾಗಿ ವಾತಾವರಣ ಸ್ವಲ್ಪಮಟ್ಟಿಗೆ ಸಹಜ ಸ್ಥಿತಿಗೆ ಬರಲಿದೆ. ನಂತರದ ದಿನಗಳಲ್ಲಿ ಗುರುವಾರದಿಂದ ಕನಿಷ್ಠ ತಾಪಮಾನ 14-15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29-30ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ ಎಂದು ವರದಿ ತಿಳಿಸಿದೆ.

ಬಾಗಲಕೋಟೆಯಲ್ಲಿ ಚಳಿ ಏರಿಕೆ
ಇನ್ನೂ ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ ಬಾಗಲಕೋಟೆ ಅತೀ ಕನಿಷ್ಠ ಉಷ್ಣಾಂಶ 8.6ಡಿಗ್ರಿ ಸೆಲ್ಸಿಯಸ್ ಹಾಗೂ ಮೈಸೂರಲ್ಲಿ ಕನಿಷ್ಠ 9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬಾಗಲಕೋಟೆ, ಮಂಡ್ಯ, ಮೈಸೂರು, ಚಿತ್ರದುರ್ಗ ಸೇರಿದಂತೆ ಕೆಲವೆಡೆ ಮುಂದಿನ ನಾಲ್ಕು ದಿನ ದಿನ ಇದೇ ವಾತಾವರಣ ಮುಂದುವರಿಯಲಿದೆ. ಈ ಭಾಗದಲ್ಲಿ ಶೀತದ ಅಲೆಗಳು ಸಕ್ರಿಯವಾಗಿವೆ ಎಂದು ವಿಜ್ಞಾನಿ ಡಾ. ಪ್ರಸಾದ್ ಹೇಳಿದ್ದಾರೆ.
-
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ












Click it and Unblock the Notifications