Breaking: ಬೆಂಗಳೂರಲ್ಲಿ 2 ದಿನದಿಂದ ಅತೀ ಕಡಿಮೆ ತಾಪಮಾನ ದಾಖಲು, ಚಳಿ ಏರಿಕೆ
ಬೆಂಗಳೂರು ಜನವರಿ 17: ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಿನಲ್ಲಿ ಕಳೆದ ಎರಡು ದಿನದಿಂದ ಮತ್ತೆ ತೀವ್ರ ಚಳಿ ಹಾಗೂ ದಟ್ಟ ಮಂಜಿನ ವಾತವರಣ ಆವರಿಸಿದೆ. ನಾಲ್ಕು ವರ್ಷಗಳ ನಂತರ ಆಗಾಗ ಅತಿ ಕನಿಷ್ಠ 13ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ.
ನಗರದಲ್ಲಿ ಕಳೆದ ವಾರವಷ್ಟೇ 12.5 ರಿಂದ 13 ಡಿಗ್ರಿ ಸೆಲ್ಸಿಯಸ್ ನಷ್ಟು ಅತೀ ಕನಿಷ್ಠ ತಾಪಮಾನ ದಾಖಲಾಗಿತ್ತು. ಇದು 2018ರಿಂದ ಈಚೆಗೆ ಕಂಡು ಬಂದಿದ್ದು, ಅತೀ ಕನಿಷ್ಠ ಹಾಗೂ ತೀವ್ರ ಚಳಿ ಪ್ರಮಾಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಭಾನುವಾರ ಸಂಜೆಯಿಂದ ಬೆಂಳೂರಿನಲ್ಲಿ ಮತ್ತೆ ಚಳಿ, ತೇವಾಂಶ ಭರಿತ ಗಾಳಿ ಬೀಸುವಿಕೆ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಉತ್ತರ ಭಾಗದಿಂದ ಗಾಳಿ ಹೆಚ್ಚಾಗಿ ಬಿಸುತ್ತಿದೆ. ಚಳಿಗಾಲದಲ್ಲಿ ಅದರಲ್ಲೂ ಜನವರಿಯಲ್ಲಿ ಸಾಮಾನ್ಯವಾಗಿ ಚಳಿ ತುಸು ಹೆಚ್ಚೆ ಕಂಡು ಬರತ್ತದೆ. ಆಕಾಶ ನಿರ್ಮಲವಾಗಿದ್ದು, ಭೂಮಿಯ ತಾಪಮಾನ ಬಹುಬೇಗನೇ ಇಳಿಕೆಯಾಗುವ ಕಾರಣ ಬೆಳಗ್ಗೆ ಚುಮು ಚುಮು ಚಳಿ ಕಂಡು ಬರುತ್ತದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಸೋಮವಾರ ಹಾಗೂ ಮಂಗಳವಾರ ಬೆಳಗ್ಗೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗುವ ಮೂಲಕ ಚಳಿ ಹೆಚ್ಚಾಗಿದೆ. ಇದು ಬುಧವಾರವರೆಗೆ ಮುಂದುವರಿಯಲಿದೆ. ನಂತರ ಮಂಜು ಹಾಗೂ ತಂಪು ವಾತಾವರಣದಲ್ಲಿ ತುಸು ಕಡಿಮೆಯಾಗಿ ವಾತಾವರಣ ಸ್ವಲ್ಪಮಟ್ಟಿಗೆ ಸಹಜ ಸ್ಥಿತಿಗೆ ಬರಲಿದೆ. ನಂತರದ ದಿನಗಳಲ್ಲಿ ಗುರುವಾರದಿಂದ ಕನಿಷ್ಠ ತಾಪಮಾನ 14-15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29-30ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ ಎಂದು ವರದಿ ತಿಳಿಸಿದೆ.

ಬಾಗಲಕೋಟೆಯಲ್ಲಿ ಚಳಿ ಏರಿಕೆ
ಇನ್ನೂ ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ ಬಾಗಲಕೋಟೆ ಅತೀ ಕನಿಷ್ಠ ಉಷ್ಣಾಂಶ 8.6ಡಿಗ್ರಿ ಸೆಲ್ಸಿಯಸ್ ಹಾಗೂ ಮೈಸೂರಲ್ಲಿ ಕನಿಷ್ಠ 9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬಾಗಲಕೋಟೆ, ಮಂಡ್ಯ, ಮೈಸೂರು, ಚಿತ್ರದುರ್ಗ ಸೇರಿದಂತೆ ಕೆಲವೆಡೆ ಮುಂದಿನ ನಾಲ್ಕು ದಿನ ದಿನ ಇದೇ ವಾತಾವರಣ ಮುಂದುವರಿಯಲಿದೆ. ಈ ಭಾಗದಲ್ಲಿ ಶೀತದ ಅಲೆಗಳು ಸಕ್ರಿಯವಾಗಿವೆ ಎಂದು ವಿಜ್ಞಾನಿ ಡಾ. ಪ್ರಸಾದ್ ಹೇಳಿದ್ದಾರೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications