ಸಾಮೂಹಿಕವಾಗಿ ನಮಾಜ್ ನಿರ್ಬಂಧ : ಸಚಿವ ಪ್ರಭು ಚವ್ಹಾಣ್
ಬೆಂಗಳೂರು, ಏಪ್ರಿಲ್ 1: ದೆಹಲಿಯ ನಿಜಾಮುದ್ದೀನ್ ಜಮತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗದ ಸಾವಿರಾರು ಜನರು ಭಾಗವಹಿಸಿದ್ದರು. ಇಲ್ಲಿ ವಿದೇಶಿಗರು ಕೂಡ ಇದ್ದರು. ಈ ಕಾರ್ಯಕ್ರಮದಲ್ಲಿ ಭಾಗಯಾಗಿದ್ದವರಲ್ಲಿ ಅನೇಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕೆಲವರು ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಮತ್ತಷ್ಟು ಆತಂಕ ಹೆಚ್ಚಾಗಿದೆ.
ಇದೀಗ, ಕರ್ನಾಟಕ ರಾಜ್ಯದಲ್ಲಿ ಸಾಮೂಹಿಕವಾಗಿ ನಮಾಜ್ ಮಾಡಲು ನಿರ್ಬಂಧ ಹೇರಲಾಗಿದ್ದು, ಏಪ್ರಿಲ್ 14ರವರೆಗೂ ಈ ಆದೇಶ ಅನ್ವಯವಾಗುತ್ತೆ ಎಂದು ರಾಜ್ಯ ಸರ್ಕಾರ ಸೂಚಿಸಿದೆ.
'ಇತ್ತಿಚೇಗೆ ಮಸೀದಿಗಳಲ್ಲಿ ನಮಾಜ್ ಮಾಡುತ್ತಿರುವುದು ಮಾಧ್ಯಮಗಳ ಮೂಲಕ ಕಂಡು ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್ ಮಂಡಳಿಯ ಅಧಿಕಾರಿಗಳು ಹಾಗೂ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿ ಕಟ್ಟುನಿಟ್ಟಾದ ಕ್ರಮಗೈಗೊಳ್ಳಲು ಸೂಚಿಸಲಾಗಿದೆ' ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಮುಸ್ಲೀಂ ಬಾಂಧವರು ದಿನಕ್ಕ 5 ಬಾರಿ ನಮಾಜ್ ಮಾಡುವ ಆಚರಣೆಯಿದ್ದು, ರಾಜ್ಯದ ಎಲ್ಲ ವಕ್ಫ್ ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಗಳು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದಿನಾಂಕ 31.3.2020ರ ವರೆಗೆ ಸಾರ್ವಜನಿಕವಾಗಿ ನಮಾಜ್ ಮಾಡಲು ನಿರ್ಬಂಧಿಸಲಾಗಿತ್ತು. ಇದನ್ನೆ ಈಗ 14.04.2020ರ ವರೆಗೆ ವಿಸ್ತರಿಸಲಾಗಿದೆ.
ಅಲ್ಲದೆ ಪ್ರತಿದಿನದ 5 ಹೊತ್ತಿನ ನಮಾಜನ್ನು ಯಾವುದೇ ಕಾರಣಕ್ಕೆ ಮಸೀದಿಗೆ ತೆರಳಿ ಮಾಡಬಾರದು. ಮುಂದಿನ ಆದೇಶ ಬರುವವರೆಗೆ ತಮ್ಮ ತಮ್ಮ ಮನೆಗಳಲ್ಲಿ ನಾಮಜ್ ಮಾಡಲು ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ನೆರೆಹೊರೆಯವರೊಂದಿಗೆ ಸೇರಿ ನಮಾಜ್ ಮಾಡಲು ಅವಕಾಶ ಇರುವುದಿಲ್ಲ. ಆದೇಶವನ್ನು ಉಲ್ಲಂಘಿಸಿ ಸಾಮೂಹಿಕವಾಗಿ ನಮಾಜ್ ಮಾಡುವುದು ಕಂಡುಬಂದಲ್ಲಿ ಆಯೋಜಕರ ವಿದುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು..
ವಿಶೇಷವಾಗಿ ಯುವಕರು ಅನಾವಶ್ಯಕವಾಗಿ ಓಡಾಡುವುದು, ಬೀದಿಗಳಲ್ಲಿ ಗುಂಪು ಸೇರುವುದು ಹಾಗೂ ಬೈಕ್ ಓಡಿಸುವುದನ್ನು ಸಹ ನಿಲ್ಲಿಸಬೇಕು. ಸರ್ಕಾರ ಹಾಗೂ ಸ್ಥಳಿಯ ಆಡಳಿತದಿಂದ ಕಾಲಕಾಲಕ್ಕೆ ನೀಡುವ ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಯವಾಗಿ ಪಾಲಿಸಲು ಸೂಚಿಸಲಾಗಿದೆ. ಕೊರೊನಾ ಸೋಂಕು ಅಥವಾ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣಕ್ಕೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications