Industry: ಬೆಂಗಳೂರಲ್ಲಿ ವೈಮಾಂತರಿಕ್ಷ ಸಾಮಗ್ರಿ ಪೂರೈಕೆ 'ಕಾಲಿನ್ಸ್ ಏರೋಸ್ಪೇಸ್ ಪರೀಕ್ಷಾ ಕೇಂದ್ರ'
ಬೆಂಗಳೂರು, ಮಾರ್ಚ್ 06: ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಕ್ಕೆ ಬೇಕಾಗುವ ಸಾಧನಗಳ ತಯಾರಿಕೆಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಕಂಪನಿಯು ಬೆಂಗಳೂರಿನಲ್ಲಿ ತನ್ನ ಕೇಂದ್ರ ಸ್ಥಾಪಿಸಿದೆ. ಕಾಲಿನ್ಸ್ ಏರೋಸ್ಪೇಸ್ ಎಂಜಿನಿಯರಿಂಗ್ ಕಂಪನಿ ಯಲಹಂಕ ಸಮೀಪದ ವೆಂಕಟಾಲ ಗ್ರಾಮದಲ್ಲಿ ನಿರ್ಮಿಸಿದ ಅತ್ಯಾಧುನಿಕ ಪರೀಕ್ಷಾ ಕೇಂದ್ರಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಸಚಿವರು, ಕಾಲಿನ್ಸ್ ಏರೋಸ್ಪೇಸ್ ಕಂಪನಿಯು 'ಪವರ್ಡ್ ಬೈ ಕಾಲಿನ್ಸ್' ತರಹದ ಉಪಕ್ರಮಗಳ ಮೂಲಕ ನಮ್ಮಲ್ಲಿನ ಸಣ್ಣ ಮತ್ತು ಮಧ್ಯಮ ಸ್ತರದ ಉದ್ಯಮಗಳೊಂದಿಗೆ ಸಹಭಾಗಿತ್ವಕ್ಕೆ ಮುಂದಾಗಿದೆ. ಇದರಿಂದ ನಾವೀನ್ಯತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನಗಳಿಗೆ ಸ್ಥಳೀಯವಾಗಿ ಉತ್ತೇಜನ ಸಿಗಲಿದೆ. ವಿಮಾನಗಳ ಕುರ್ಚಿ, ವಿಂಡ್ ಶೀಲ್ಡ್ ಸೇರಿದಂತೆ ಹಲವು ಬಿಡಿಭಾಗಗಳನ್ನು ಇಲ್ಲಿ ನಾನಾ ಪರೀಕ್ಷೆಗಳಿಗೆ ಒಳಪಡಿಸಿ, ನಂತರ ಬಳಕೆಗೆ ಅನುಮತಿ ಕೊಡಲಾಗುವುದು ಎಂದರು.

ಈ ಹೊಸ ಕೇಂದ್ರದಲ್ಲಿ ಆಧುನಿಕ ವಿಮಾನಗಳ ಪರೀಕ್ಷೆ, ಪ್ರಮಾಣೀಕರಣ ಮತ್ತು ಸೇರ್ಪಡೆ ಮುಂತಾದ ಪ್ರಕ್ರಿಯೆಗಳು ನಡೆಯಲಿವೆ. ಹೀಗಾಗಿ, ಈ ಪರೀಕ್ಷಾ ಕೇಂದ್ರವು ಏರೋಸ್ಪೇಸ್ ವಲಯದಲ್ಲಿನ ಜಾಗತಿಕ ಪೂರೈಕೆ ಸರಪಳಿಯಲ್ಲಿ ಮಹತ್ವದ ಪಾತ್ರ ವಹಿಸಲಿದೆ.
ಭಾರತದ ವೈಮಾಂತರಿಕ್ಷ ವಲಯವು ಪರಿವರ್ತನೆಯ ಹಾದಿಯಲ್ಲಿದ್ದು, 2033ರ ಹೊತ್ತಿಗೆ ಈ ಕ್ಷೇತ್ರದಲ್ಲಿ ವರ್ಷಕ್ಕೆ 54 ಬಿಲಿಯನ್ ಡಾಲರ್ ಗಿಂತಲೂ ಹೆಚ್ಚಿನ ವಹಿವಾಟು ನಡೆಯಲಿದೆ. ಈ ಕೇಂದ್ರವನ್ನು ಆರಂಭಿಸುವ ಮೂಲಕ ಕಾಲಿನ್ಸ್ ಏರೋಸ್ಪೇಸ್, 'ಮೇಕ್ ಇನ್ ಇಂಡಿಯಾ' ಉಪಕ್ರಮಕ್ಕೆ ಶಕ್ತಿ ತುಂಬಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

60 ಸಾವಿರ ಉದ್ಯೋಗ ಸೃಷ್ಟಿ
ಕರ್ನಾಟಕವು ಪ್ರತ್ಯೇಕ ಏರೋಸ್ಪೇಸ್ ಮತ್ತು ರಕ್ಷಣಾ ನೀತಿಯನ್ನು ಹೊಂದಿರುವ ಮೊಟ್ಟಮೊದಲ ರಾಜ್ಯವಾಗಿದೆ. ಈ ವಲಯಕ್ಕೆ 45 ಸಾವಿರ ಕೋಟಿ ರೂ. ಹೂಡಿಕೆ ಆಕರ್ಷಿಸುವ ಮತ್ತು 60 ಸಾವಿರ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಇಟ್ಟುಕೊಳ್ಳಲಾಗಿದೆ. ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ರಫ್ತು ವಹಿವಾಟಿಗೆ ರಾಜ್ಯವು ಶೇ.70ರಷ್ಟು ಕೊಡುಗೆ ರಾಜ್ಯದಿಂದ ಹೋಗುತ್ತಿದೆ. ಈ ವಲಯದಲ್ಲಿ 2 ಸಾವಿರಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸಕ್ರಿಯವಾಗಿವೆ ಎಂದು ಪಾಟೀಲ ವಿವರಿಸಿದರು.
ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, 'ಕರ್ನಾಟಕವು ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಹೊಂದಿದೆ. ಆದ್ದರಿಂದ ಕಾಲಿನ್ಸ್ ಏರೋಸ್ಪೇಸ್ ಕಂಪನಿಯು ನಮ್ಮ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕೊಡುವ ವ್ಯವಸ್ಥೆ ಮಾಡಬೇಕು. ಇದಕ್ಕೆ ಸರಕಾರದ ಕಡೆಯಿಂದ ಎಲ್ಲ ನೆರವು ನೀಡಲಾಗುವುದು. ಇದರಿಂದಾಗಿ ಮಾನವ ಸಂಪನ್ಮೂಲವನ್ನು ಸನ್ನದ್ಧ ಸ್ಥಿತಿಯಲ್ಲಿ ಸಿಕ್ಕಿ, ಮಾರುಕಟ್ಟೆ ಸೃಷ್ಟಿಯೂ ಸುಲಭವಾಗಲಿದೆ' ಎಂದು ಹೇಳಿದರು.
ರಾಜ್ಯದಲ್ಲಿ ಈಗಾಗಲೇ ಎನ್.ಡಿ.ಟಿ ಪರೀಕ್ಷಾ ಸೌಲಭ್ಯವಿದೆ. ಬೆಂಗಳೂರಿನಲ್ಲಿ ಅತ್ಯುತ್ತಮ ಪ್ರಯೋಗಾಲಯಗಳನ್ನು ಹೊಂದಿದೆ. ಟ್ರಿನಿಟಿ ಎನ್.ಡಿ.ಟಿ ಪ್ರಯೋಗಾಲಯದಲ್ಲಿ ರೇಡಿಯೋಗ್ರಫಿ, ಅಲ್ಟ್ರಾಸೋನಿಕ್ ಮತ್ತು ಎಡ್ಡಿ ಕರೆಂಟ್ ಟೆಸ್ಟಿಂಗ್ ಅನುಕೂಲಗಳಿವೆ. ಪಲ್ಲಕ್ಕಿ ಎನ್.ಡಿ.ಟಿ ಉತ್ಕೃಷ್ಟತಾ ಕೇಂದ್ರದಲ್ಲೂ ಜಾಗತಿಕ ಮಟ್ಟದ ಸೌಲಭ್ಯಗಳಿವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಿಬ್ಬರೂ ಕಾಲಿನ್ಸ್ ವಿಮಾನ ಯಂತ್ರ ಮತ್ತು ಬಿಡಿಭಾಗಗಳ ಪ್ರದರ್ಶನವನ್ನು ವೀಕ್ಷಿಸಿ, ಅವುಗಳ ಮಾಹಿತಿ, ವೈಶಿಷ್ಟ್ಯ ಮತ್ತು ಸ್ವಾರಸ್ಯಗಳ ಬಗ್ಗೆ ತಿಳಿದುಕೊಂಡರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications