ಕೊಲಂಬೋದಿಂದ ವಾಪಸಾದ ಜೆಡಿಎಸ್ ನಾಯಕರು
ಬೆಂಗಳೂರು, ಜೂ.21: ನಾಲ್ಕು ದಿನಗಳ ಮಟ್ಟಿಗೆ ರಿಲ್ಯಾಕ್ಸ್ ಆಗಲು ನೆರೆಯ ಶ್ರೀಲಂಕಾಕ್ಕೆ ತೆರಳಿದ್ದ ಜಾತ್ಯಾತೀತ ಜನತಾದಳ ಪಕ್ಷದ ನಾಯಕರು ಇಂದು ಬೆಳಗಿನ ಜಾವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.
ಕೊಲಂಬೋದಿಂದ ವಾಪಸಾದ ಎಚ್ಡಿಕೆ ಏನಂದರು?

ಮುಂದೆ ರಾಜ್ಯಾದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ ಶಾಸಕರೂ, ಕಾರ್ಯಕರ್ತರಿಗೆ ಜವಾಬ್ದಾರಿ ವಹಿಸಲಾಗುವುದು. ಎಲ್ಲರೂ ಒಗ್ಗಟ್ಟಿನಿಂದ ಪಕ್ಷವನ್ನು ಬಲಪಡಿಸಲಿದ್ದೇವೆ. ಇನ್ನು ಯಾವುದೇ ಭಿನ್ನಾಭಿಪ್ರಾಯಕ್ಕೆ ಜಾಗವಿರುವುದಿಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸುದ್ದಿಗಾರರಿಗೆ ತಿಳಿಸಿದರು.
'ಪಕ್ಷದೊಳಗಿದ್ದ ಎಲ್ಲ ಆಂತರಿಕ ಭಿನ್ನಾಭಿಪ್ರಾಯಗಳು ಪರಿಹಾರವಾಗಿದ್ದು, ರಾಜ್ಯಾದ್ಯಂತ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು. ಪ್ರವಾಸದ ವೇಳೆ ಪಕ್ಷದೊಳಗಿದ್ದ ಸಣ್ಣಪುಟ್ಟ ಗೊಂದಲಗಳು ಪರಿಹಾರವಾಗಿವೆ. ಇನ್ನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾದ್ಯಂತ ಪಕ್ಷವನ್ನು ಬಲಪಡಿಸುವುದೇ ನಮ್ಮ ಗುರಿ ಎಂದು ಕುಮಾರಸ್ವಾಮಿ ತಿಳಿಸಿದರು. 'ಲೋಕಸಭೆ ಚುನಾವಣೆ ಬಳಿಕ ಶಾಸಕರ ನಡುವೆ ಸಣ್ಣಪುಟ್ಟ ಗೊಂದಲಗಳು ಮತ್ತು ಭಿನ್ನಾಭಿಪ್ರಾಯ ಉಂಟಾಗಿತ್ತು. ಮುಖಾಮುಖಿ ಭೇಟಿಯಾಗಿ ಚರ್ಚಿಸಲೆಂದೇ ಶ್ರೀಲಂಕಾಕ್ಕೆ ತೆರಳಿದ್ದೆವು' ಎಂದೂ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಪೂರ್ವನಿಗದಿತ ಕಾರ್ಯಕ್ರಮದಂತೆ ಜೆಡಿಎಸ್ ನಾಯಕರು ಗುರುವಾರ ರಾತ್ರಿಯೇ ಕೊಲಂಬೋದಿಂದ ಹೊರಟು ಬೆಂಗಳೂರಿಗೆ ಬರಬೇಕಿತ್ತು, ಆದರೆ ಪ್ರವಾಸ ಒಂದು ದಿನ ವಿಸ್ತರಣೆಯಾಗಿ ಶನಿವಾರ ಬೆಳಗ್ಗೆ ಬಂದಿಳಿದಿದ್ದಾರೆ. ಶಾಪಿಂಗ್ ಹಾಗೂ ಪ್ರವಾಸಿ ತಾಣಗಳ ವೀಕ್ಷಣೆಗಾಗಿ ಪ್ರವಾಸವನ್ನು ಒಂದು ದಿನ ವಿಸ್ತರಿಸುವಂತೆ ಶಾಸಕರು ಒತ್ತಡ ಹೇರಿದ್ದರಿಂದ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರು ಸಹಮತ ವ್ಯಕ್ತಪಡಿಸಿ ಪ್ರವಾಸ ಮುಂದುವರಿಸಿದ್ದರು.

ಈ ಮಧ್ಯೆ, ಶ್ರೀಲಂಕಾಗೆ ತೆರಳಿದ್ದ ಸಂಸದ ಪುಟ್ಟರಾಜು, ಶಾಸಕರಾದ ಮಧು ಬಂಗಾರಪ್ಪ ಸೇರಿದಂತೆ ಕೆಲವು ಶಾಸಕರು ಕ್ಷೇತ್ರದಲ್ಲಿ ಕಾರ್ಯಕ್ರಮ ಇದ್ದ ಕಾರಣ ಗುರುವಾರವೇ ಬೆಂಗಳೂರಿಗೆ ಆಗಮಿಸಿದ್ದರು. ಸಂಸದ ಪುಟ್ಟರಾಜು ಅವರು ದೇವೇಗೌಡರ ಜತೆಗೂಡಿ ಪ್ರಧಾನಿ ನರೇದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿದ್ದರು.
ದೇವೇಗೌಡರಿಂದ ಪತ್ರಿಕಾಗೋಷ್ಠಿ:
ಈ ಮಧ್ಯೆ, ಇಂದು ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಅಧಿನಾಯಕ, ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ಅವರು ಜನತಾದಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications