ಮೇ.11ರಂದು ಕಾಮೆಡ್ ಕೆ ಪ್ರವೇಶ ಪರೀಕ್ಷೆ
ಬೆಂಗಳೂರು, ಮೇ 10: ರಾಜ್ಯದಲ್ಲಿನ ಕಾಮೆಡ್-ಕೆ ಮೂಲಕ ವೃತ್ತಿಪರ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರ್ ಕೋರ್ಸ್ಗಳಿಗೆ ಮೇ 11ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ಬೆಂಗಳೂರಿನ 97 ಕಾಲೇಜುಗಳು ಸೇರಿದಂತೆ ರಾಜ್ಯದ ಒಟ್ಟು 134 ಕಾಲೇಜುಗಳಲ್ಲಿ ನಡೆಯುವ ಪರೀಕ್ಷೆಗೆ 18 ಸಾವಿರ ಇಂಜಿನಿಯರ್, 38,295 ದಂತ ವೈದ್ಯಕೀಯ ಹಾಗೂ 45,235 ವೈದ್ಯಕೀಯ ವಿಭಾಗಗಳಿಗೆ ಒಟ್ಟು 96,100 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
* ಬೆಳಗ್ಗೆ 10ರಿಂದ 1ರವರೆಗೆ ನಡೆಯುವ ಪರೀಕ್ಷೆಯಲ್ಲಿ ಭೌತಶಾಸ್ತ್ರ, ಗಣಿತ,
* 10 ರಿಂದ 12ರ ವರೆಗೆ ನಡೆಯುವ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಾಸಾಯನಶಾಸ್ತ್ರ
* 2.30ರಿಂದ 4ರವರೆ ನಡೆಯುವ ಪರೀಕ್ಷೆಯಲ್ಲಿ ಜೀವಶಾಸ್ತ್ರ ಮತ್ತು ಇಂಗ್ಲಿಷ್ ಪರೀಕ್ಷೆಗಳು

ಪ್ರಸಕ್ತ ವರ್ಷದಲ್ಲಿ 2012ಕ್ಕೂ ಮುನ್ನ ಪದವಿಪೂರ್ವ ಶಿಕ್ಷಣ ಮುಗಿಸಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಅವಕಾಶವಿಲ್ಲ. ಅಲ್ಲದೆ, ಈ ಹಿಂದೆ ಪ್ರವೇಶ ಪರೀಕ್ಷೆಯ ಮೂಲಕ ಸೀಟು ಪಡೆದು ಮಧ್ಯದಲ್ಲಿಯೇ ಬಿಟ್ಟು ಹೋಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನಿರಾಕರಿಸಲಾಗಿದೆ ಎಂದು ಕಾಮೆಡ್ ಕೆ(Consortium of Medical Engineering and Dental Colleges of Karnataka) ಪ್ರಕಟಣೆ ತಿಳಿಸಿದೆ.
ರೈಲು ವ್ಯವಸ್ಥೆ: ದರ್ಭಾಂಗ ಹಾಗೂ ಬೆಂಗಳೂರು ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ಮೇ.8ರಂದು ಹೊರಟಿರುವ ರೈಲು ಬೆಂಗಳೂರಿಗೆ ಶನಿವಾರ ರಾತ್ರಿ 10 ಗಂಟೆಗೆ ತಲುಪುವ ನಿರೀಕ್ಷೆಯಿದೆ. ಇದೇ ರೈಲು ಬೆಂಗಳೂರಿನಿಂದ ಸೋಮವಾರ ಮೇ.12 ರಂದು ಸಂಜೆ 5 ಗಂಟೆಗೆ ಹೊರಟು ದರ್ಭಾಂಗವನ್ನು ಬುಧವಾರ(ಮೇ.14) 1 ಗಂಟೆಗೆ ತಲುಪಲಿದೆ.
ಬಸ್ ವ್ಯವಸ್ಥೆ: ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನದಂದು ಕಾಲೇಜು ಬಸ್ ನಲ್ಲಿ ಸಂಚರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಮೆಜೆಸ್ಟಿಕ್ ನ ಶಾಂತಲಾ ಸಿಲ್ಕ್ ಹೌಸ್ ಬಳಿಯಿಂದ ಎರಡು ಬಸ್ ಗಳು ಅಭ್ಯರ್ಥಿಗಳನ್ನು ಕಾಲೇಜಿಗೆ ಕರೆದೊಯ್ಯಲಿದೆ. ಬೆಳಗ್ಗೆ 7.45ಕ್ಕೆ ಹೊರಡಲಿರುವ ಬಸ್ ಗಳು ಹೆಬ್ಬಾಳ, ಯಲಹಂಕ ಮಾರ್ಗವಾಗಿ ಕಾಲೇಜು ತಲುಪಲಿವೆ. ಪರೀಕ್ಷೆ ಮುಗಿದ ನಂತರ ಮೆಜೆಸ್ಟಿಕ್ ಗೆ ವಾಪಸ್ ಹೋಗಲಿವೆ.
ಎಸ್ ಜೆ ಸಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕೂಡಾ ಇದೇ ರೀತಿ ಬಸ್ ವ್ಯವಸ್ಥೆ ಕಲ್ಪಿಸಿದೆ. ವಿವಿಧ ಸ್ಥಳಗಳಿಂದ 12ಕ್ಕೂ ಅಧಿಕ ಬಸ್ ಗಳು ಕಾಲೇಜಿಗೆ ಅಭ್ಯರ್ಥಿಗಳನ್ನು ಕರೆದೊಯ್ಯಲಿದೆ. ಹೆಚ್ಚಿನವಿವರಗಳನ್ನು ಕಾಮೆಡ್ ಕೆ ವೆಬ್ ತಾಣದಲ್ಲಿ ಪಡೆಯಬಹುದು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications