ಕನ್ನಡ ಸಾಹಿತ್ಯ ಡಿಜಿಟಲೀಕರಣ ಮಾಡಲು ಸರ್ಕಾರ ಬದ್ಧ: ಅಶ್ವಥ್ ನಾರಾಯಣ
ಬೆಂಗಳೂರು, ಡಿಸೆಂಬರ್ 18: ಕನ್ನಡ ಇತಿಹಾಸ, ಪರಂಪರೆ ಮತ್ತು ಸಾಹಿತ್ಯವನ್ನು ಪರಿಚಯಿಸಲು ಡಿಜಿಟಲೀಕರಣ ವ್ಯೆವಸ್ಥೆ ಜಾರಿಗೆ ತರಲು ಸರ್ಕಾರ ಬದ್ದವಿರುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಐಟಿ,ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.
ಜ್ಞಾನ ಮತ್ತು ತಂತ್ರಜ್ಞಾನಗಳ ಅಭಿವೃದ್ದಿಗೆ ಕೈಗಾರಿಕಾ ಸಂಸ್ಥೆಗಳ ಸಹಯೋಗದಲ್ಲಿ 'ಕರ್ನಾಟಕ ತಂತ್ರಜ್ಞಾನ ಅಭಿವೃದ್ದಿ ಮಂಡಳಿ' ಸ್ಥಾಪನೆ ಮಾಡಲಾಗುವುದು, ಅದಕ್ಕಾಗಿ 'ಕಾನ್ ಟೆಕ್' ಯೋಜನೆಗೆ ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.
ಐಟಿ, ಬಿಟಿ ಸಚಿವರಾಗಿ ನೂರು ದಿನ ಪೂರೈಸಿದ ಸಲುವಾಗಿ ಮಂಗಳವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಜಗತ್ತಿನಲ್ಲಿಯೇ ಮುಂಚೂಣಿಯಲ್ಲಿದೆ ಎಂದರು.

10 ವರ್ಷಗಳ ಹಿಂದೆ ಪ್ರಾರಂಭವಾದ ನವೋದ್ಯಮ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಸದ್ಯ ನಗರದಲ್ಲಿ ನಾಲ್ಕು ಸಾವಿರ ನವೋದ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯಮಗಳ ಸ್ಥಾಪನೆಗೆ ಒತ್ತು ಕೊಡುವುದಾಗಿ ಹೇಳಿದರು.
ಅತ್ಯುನ್ನತ ಮಟ್ಟದ ಸಂಶೋಧನೆ ಮತ್ತು ಆವಿಷ್ಕಾರ ಯೋಜನೆಗಳನ್ನು ಉತ್ತೇಜನಗೊಳಿಸಲು ಧನಸಹಾಯ ನೀಡುವುದಾಗಿ ಹೇಳಿದರು. ಇದಕ್ಕಾಗಿ ಕರ್ನಾಟಕ ಸಂಶೋಧನಾ ನಿಧಿ ಹಾಗೂ ಕರ್ನಾಟಕ ಸಂಶೋಧನಾ ಕೇಂದ್ರ ತೆರೆಯುವುದಾಗಿ ಐಟಿ, ಬಿಟಿ ಸಚಿವರೂ ಕೂಡಾ ಆಗಿರುವ ಅಶ್ವಥ್ ನಾರಾಯಣ ಅವರು ಮಾಹಿತಿ ನೀಡಿದರು.
ದೇಶದ ಜಿಡಿಪಿಗೆ ಕರ್ನಾಟಕವು ೮.೫ ರಷ್ಟು ಕೊಡುಗೆ ನೀಡುತ್ತದೆ. ಭಾರತದಲ್ಲಿ ಅತಿ ಹೆಚ್ಚು ಕಾರ್ಪೋರೇಟ್ ತೆರಿಗೆ ಕಟ್ಟುವ ರಾಜ್ಯ ಅಂದರೆ ಅದು ಕರ್ನಾಟಕ. ಇದರಲ್ಲಿ ಬೆಂಗಳೂರಿನಲ್ಲೇ ಶೇ. 65 ರಷ್ಟು ತೆರಿಗೆ ಉತ್ಪಾದನೆಯಾಗುತ್ತದೆ ಎಂದರು.
ಬೆಂಗಳೂರಿನಲ್ಲಿ ಶೇ.10 ರಷ್ಟು ಮಹಿಳೆಯರು ನವೋದ್ಯಮಿಗಳಾಗಿದ್ದಾರೆ. ಇದು ಏಷ್ಯಾದಲ್ಲಿಯೇ ಹೆಚ್ಚಾಗಿದ್ದು, ಇನ್ನೂ ಇದರ ಸಂಖ್ಯೆ ಬೆಳೆಯಲಿದೆ. ನಮ್ಮ ಸರ್ಕಾರ ಎರಡು, ಮೂರು ಹಂತಗಳಲ್ಲಿ ಕೈಗಾರಿಕಾ ಅಭಿವೃದ್ದಿಗೆ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ನವೋದ್ಯಮಗಳನ್ನು ಬೆಂಬಲಿಸಲು ಅದರ ಆವಿಷ್ಕಾರ ಕ್ಷೇತ್ರದ ಉತ್ತೇಜನ ಮಾಡಲು 'ಕರ್ನಾಟಕ ಆವಿಷ್ಕಾರ ಪ್ರಾಧಿಕಾರಕ್ಕೆ ಚಾಲನೆ ನೀಡಲಾಗಿದೆ ಎಂದರು.
ವಿದೇಶಿ ಹೂಡಿಕೆದಾರರು ಕರ್ನಾಟಕದಲ್ಲಿ ಬಂದು ಉದ್ಯಮ ಸ್ಥಾಪಿಸುವಂತೆ ಅವರ ಗಮನ ಸೆಳೆಯಲು ಸರ್ಕಾರದಿಂದ ಜಾಗತಿಕ ಮಾಹಿತಿ ಕೇಂದ್ರ ತೆರೆಯುವುದಾಗಿ ಮಾಹಿತಿ ನೀಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications