ಬೆಂಗಳೂರಲ್ಲಿ ಕೊರೆವ ಚಳಿ, ರೋಗಗಳ ಭೀತಿ, ಸಲಹೆಗಳು
ಬೆಂಗಳೂರು, ನವೆಂಬರ್ 2: ನೈಋತ್ಯ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ಮುನ್ನ ಆಗಾಗ ಬೆಂಗಳೂರಲ್ಲಿ ಸ್ವಲ್ಪ ಮಳೆಯಾಗಿತ್ತು, ಮುಂಗಾರು ಪ್ರವೇಶಿಸಿದ ಬಳಿಕ ಮಳೆಯೇ ಕಣ್ಮರೆಯಾಗಿದ್ದು, ದಟ್ಟ ಮೋಡ ಕವಿದುಕೊಂಡು ಕತ್ತಲನ್ನು ಮಾತ್ರ ನೀಡಿತ್ತು. ಇದೀಗ ತಮಿಳುನಾಡು ಹಾಗೂ ಕರ್ನಾಟಕಕ್ಕೆ ಈಶಾನ್ಯ ಹಿಂಗಾರು ಆಗಮಿಸಿದೆ.
ಇದು ಕರ್ನಾಟಕಕ್ಕೆ ನೈಋತ್ಯ ಮುಂಗಾರು ಹೇಗೋ ತಮಿಳುನಾಡಿಗೆ ಈಶಾನ್ಯ ಮುಂಗಾರು ಹೆಚ್ಚು ಮಳೆಯನ್ನು ಹೊತ್ತುತರುವಂತದ್ದಾಗಿದೆ. ಹಾಗಾಗಿ ಪಾಂಡಿಚೇರಿ, ಆಂಧ್ರಪ್ರದೇಶದ ಕೆಲವು ಪ್ರದೇಶಗಳಲ್ಲಿ ಇನ್ನು ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಹಾಗೆಯೇ ಕರ್ನಾಟಕದಲ್ಲಿ ಚಳಿಗಾಲ ಆರಂಭವಾಗಿದೆ. ಈ ಈಶಾನ್ಯ ಮುಂಗಾರು ಕರ್ನಾಟಕದಲ್ಲಿ ಚಳಿಯನ್ನು ಹೆಚ್ಚಿಸಲಿದೆ. ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಅಸ್ತಮಾ ರೋಗಿಗಳಿಗೆ ಎಚ್ಚರಿಕೆ
ಅಸ್ತಮಾ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಚಳಿಗಾಲದಲ್ಲಿ ಎಚ್ಚರ ವಹಿಸಬೇಕು, ವಿಷಪೂರಿತ ಗಾಳಿ ಉಸಿರಾಟದ ಮೂಲಕ ದೇಹದೊಳಗೆ ಧೂಳಿನ ಕಣಗಳನ್ನು ಹೊತ್ತೊಯ್ದರೆ ಅಸ್ತಮಾ ಹೆಚ್ಚಾಗುತ್ತದೆ. ಹಾಗೆಯೇ ಚಳಿಗಾಲದಲ್ಲಿ ಕೈಕಾಲು ದೇಹ ತಣ್ಣಗಿರುವುದರಿಂದ ರಕ್ತ ಸಂಚಾರ ಅಷ್ಟು ಸಲೀಸಾಗಿ ಆಗುವುದಿಲ್ಲ ಇದು ಹೃದಯ ಸಂಬಂಧಿ ಕಾಯಿಲೆ ಇರುವವರಿಗೆ ಶಾಪವಾಗಿದೆ. ಹಾಗಾಗಿ ಆದಷ್ಟು ಬೆಚ್ಚನೆಯ ಉಡುಪು, ಮೈಬೆಚ್ಚಗಾಗುವಂತೆ ಆಗಾಗ ಬೆಚ್ಚಗಿನ ಶಾಖವನ್ನು ಕೊಟ್ಟುಕೊಳ್ಳುವುದು, ಬಿಸಿ ಆಹಾರ, ಪಾನೀಯಗಳನ್ನು ಸೇವಿಸಬೇಕಾಗಿದೆ.

ಚಳಿಯಿಂದ ರಕ್ಷಿಸಿಕೊಳ್ಳಲು ಏನು ಮಾಡಬೇಕು?
ಈ ಸಲದ ಚಳಿ ತುಂಬಾ ಜೋರಾಗಿಯೇ ಇದೆ, ಉಣ್ಣೆಯ ಬಟ್ಟೆಯನ್ನು ಧರಿಸುವುದು ಉತ್ತಮ, ಹೊರಗಡೆ ಹೋಗುವವರು ಮುಖಕ್ಕೆ ಮಾಸ್ಕ್ ಧರಿಸಿ ಹೋಗುವುದು ಸೂಕ್ತ, ಅದರಲ್ಲಿಯೂ ಬೆಂಗಳೂರಿನ ವಾತಾವರಣ ಕೂಡ ಅಷ್ಟು ಸರಿಯಿಲ್ಲದ ಕಾರಣ ಸಾಕಷ್ಟು ಭಾಗಗಳಲ್ಲಿ ವಿಷಪೂರಿತ ಗಾಳಿಯಿಂದಾಗಿ ಸಾಕಷ್ಟು ರೋಗಗಳು ಬರುವ ಸಾಧ್ಯತೆ ಇದೆ.

ವೃದ್ಧರು ಏನು ಮಾಡಬೇಕು?
ವಯಸ್ಸಾದವರು ಈ ದಿನಗಳಲ್ಲಿ ಬನಿಯನ್, ಅದರ ಮೇಲೊಂದು ಸ್ವೆಟರ್, ಅದರ ಮೇಲೊಂದು ತುಂಬುದೋಳಿನ ಅಂಗಿ ಹಾಕಿಕೊಂಡರೆ ಚಳಿಯಿಂದ ರಕ್ಷಣೆ ಸಿಗುತ್ತದೆ. ಮನೆಯಲ್ಲಿ ಒಲೆ ಇರುವವರು ರಾಥ್ರಿ ಮಲಗುವ ಮೊದಲು ಒಂದು ಹತ್ತು ನಿಮಿಷ ಬೆಂಕಿಯಲ್ಲಿ ಮೈ ಕಾಯಿಸಿಕೊಂಡು, ಮಲಗಿದರೆ ಬೇಗ ನಿದ್ದೆ ಬರುತ್ತದೆ. ಹಾಗೆಯೇ ವಾಕಿಂಗ್ ಹೋಗುವವರು ಮುಖಕ್ಕೆ ಮಾಸ್ಕ್ ಧರಿಸುವುದು ಮರೆಯಬಾರದು.

ನಸುಕಿನಲ್ಲಿ ವಾಕಿಂಗ್ ಹೋಗುವವರು ಹೀಗೆ ಮಾಡಿ
ತೀರಾ ನಸುಕಿನಲ್ಲೇ ಎದ್ದು ವಾಕಿಂಗ್ಗೆ ಹೋಗುವ ಅಭ್ಯಾಸವಿರುವವರು ಮರೆಯದೆ ಟೋಪಿ, ಮಫ್ಲರ್ ಬಳಸುವುದು ಒಳ್ಳೆಯದು. ಏಕೆಂದರೆ, ಪೂರ್ವದಿಂದ ಬೀಸುವ ಶೀತಗಾಳಿಯು ಮುಂಜಾನೆ ನಾಲ್ಕು ಗಂಟೆಯ ನಂತರ ಪ್ರಬಲವಾಗಿರುತ್ತದೆ. ಕಿವಿಗಳ ಮೂಲಕ ಈ ಗಾಳಿ ನಮ್ಮ ದೇಹವನ್ನು ಪ್ರವೇಶಿಸಿದಾಗ ನೆಗಡಿ, ತಲೆಭಾರ, ತಲೆನೋವು ಉಂಟಾಗುತ್ತದೆ. ಕಿವಿಗಳಿಗೆ ಹತ್ತಿಯನ್ನು ಇಟ್ಟುಕೊಳ್ಳುವುದರಿಂದ ಇವೆಲ್ಲದರಿಂದ ತಪ್ಪಿಸಿಕೊಳ್ಳಬಹುದು. ದ್ವಿಚಕ್ರ ವಾಹನ ಸವಾರರು ಕೂಡ ಮುಖಕವಚವಾಗಿ ಕೆಲಸ ಮಾಡುವಂಥ ಗಾಜಿರುವ ಹೆಲ್ಮೆಟ್ ಧರಿಸುವುದು ಒಳ್ಳೆಯದು.

ಸ್ನಾನಕ್ಕೆ ಸೋಪು ಬದಲು ಕಡಲೆಹಿಟ್ಟು ಬಳಸಿ
ಸ್ನಾನ ಮಾಡುವಾಗಲೂ ಅಷ್ಟೆ. ಮೈಗೆಲ್ಲ ಸೋಪನ್ನು ತಿಕ್ಕಬೇಡಿ. ಅದರ ಬದಲು ಹೆಸರುಹಿಟ್ಟು ಮತ್ತು ಕಡಲೆಹಿಟ್ಟನ್ನು ಹಾಕಿಕೊಳ್ಳುವುದು ಒಳ್ಳೆಯದು. ಇದರಿಂದ ಹಿತವಾದ ಅನುಭವವಾಗುತ್ತದೆ. ಇವೆರಡೂ ಹಿಟ್ಟನ್ನು ಬಿಗಿಯಾದ ಮುಚ್ಚಳವಿರುವ ಡಬ್ಬಿಯಲ್ಲಿ ಹಾಕಿಟ್ಟುಕೊಳ್ಳಿ. ಇದರಿಂದ ಹಿಟ್ಟು ಗಂಟಾಗುವುದು ತಪ್ಪುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications