Ajit Hanamakkanavar: ಕೋಮು ದ್ವೇಷ ಹರಡಿದ ಆರೋಪದ ಮೇಲೆ ಸುವರ್ಣ ಚಾನೆಲ್, ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ಐಆರ್
ಬೆಂಗಳೂರು, ಮೇ. 14 : ಕಾರ್ಯಕ್ರಮವೊಂದರ ಮೂಲಕ ಕೋಮು ದ್ವೇಷವನ್ನು ಹರಡಿದ ಆರೋಪದ ಮೇಲೆ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಅದರ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಸೋಮವಾರ, ಮೇ 13 ರಂದು ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
2024 ರ ಲೋಕಸಭಾ ಚುನಾವಣೆಯ ಮಧ್ಯೆ ಬಿಡುಗಡೆಯಾದ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು (EAC-PM) ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯ ಬಗ್ಗೆ ಸುವರ್ಣ ನ್ಯೂಸ್ನಲ್ಲಿ ಕಾರ್ಯಕ್ರಮ ಪ್ರಸಾರ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ತ್ರಿವರ್ಣ ಧ್ವಜ, ಮುಸ್ಲಿಮರ ಜನಸಂಖ್ಯೆಯನ್ನು ತಿಳಿಸಲು ಪಾಕಿಸ್ತಾನದ ಧ್ವಜ ಬಳಸಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆಳವಣಿಗೆಗೆ ಸಂಬಂಧಿಸಿದಂತೆ ಕನ್ನಡ ಸುದ್ದಿವಾಹಿನಿ ಏಷ್ಯಾ ನೆಟ್ ಸುವರ್ಣ ನ್ಯೂಸ್ ಹಾಗೂ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಪಾಕಿಸ್ತಾನದ ಧ್ವಜ ಬಳಸಿದ ಸುವರ್ಣ ನ್ಯೂಸ್
ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರೊಂದಿಗೆ ಸಂಪರ್ಕ ಹೊಂದಿರುವ ಈ ಕನ್ನಡ ಸುದ್ದಿ ವಾಹಿನಿಯು ಮೇ 9 ರಂದು EAC-PM ಜನಸಂಖ್ಯಾ ವರದಿಯ ಬಗ್ಗೆ ಕಾರ್ಯಕ್ರಮ ಪ್ರಸಾರ ಮಾಡಿತ್ತು. ಭಾರತದ ಮುಸ್ಲಿಂ ಸಮುದಾಯವನ್ನು ಪ್ರತಿನಿಧಿಸಲು ಪಾಕಿಸ್ತಾನದ ಧ್ವಜವನ್ನು ಬಳಸಿದ ಬಗ್ಗೆ ಭಾರೀ ಆಕ್ರೋಶ ಸ್ಫೋಟಗೊಂಡಿತ್ತು. ಇದರ ಬೆನ್ನಲ್ಲೇ ಸುದ್ದಿ ವಾಹಿನಿ ಕ್ಷಮೆಯಾಚಿಸಿದೆ.
ಮೇ 11 ರಂದು ಸಾಮಾಜಿಕ ಕಾರ್ಯಕರ್ತ ತನ್ವೀರ್ ಅಹ್ಮದ್ ನೀಡಿದ್ದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಐಪಿಸಿ 1860ರ ಅಡಿಯಲ್ಲಿನ 505(2) ಸೆಕ್ಷನ್ಗಳ ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿರುವ ಬಗ್ಗೆ ಎಫ್ಐಆರ್ ದಾಖಲಿಸಿದ್ದಾರೆ. ವರ್ಗಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಅಥವಾ ದ್ವೇಷ ಉತ್ತೇಜಿಸುವ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಅಜಿತ್ ಹನುಮಕ್ಕನವರ್ ವಿರುದ್ಧ ಐಪಿಸಿ ಸೆಕ್ಷನ್ 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
FIR registered against @AsianetNewsSN and its News Anchor Ajit Hanumakkanavar at High grounds police station. pic.twitter.com/9HdIwvTWs6
— Mohammed Zubair (@zoo_bear) May 13, 2024
ದೂರಿನಲ್ಲಿ ಏನಿದೆ..?
ಸಾಮಾಜಿಕ ಕಾರ್ಯಕರ್ತ ತನ್ವೀರ್ ಅಹ್ಮದ್ ಸಲ್ಲಿಸಿದ ದೂರಿನಲ್ಲಿ, 'ಹಿಂದೂ ಜನಸಂಖ್ಯೆ ಕಡಿಮೆಯಾಗಿದೆ, ಮುಸ್ಲಿಂ ಜನಸಂಖ್ಯೆಯು ಅಗಾಧವಾಗಿ ಹೆಚ್ಚಾಗಿದೆ' ಎಂಬ ಶೀರ್ಷಿಕೆಯ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗೆ (ಇಎಸಿ-ಪಿಎಂ) ಆರ್ಥಿಕ ಸಲಹಾ ಮಂಡಳಿಯ ಕಾರ್ಯ ಪ್ರಬಂಧವನ್ನು ಆಂಕರ್ ಉಲ್ಲೇಖಿಸಿದ್ದಾರೆ. ಮತ್ತು 1950 ಮತ್ತು 2015 ರ ನಡುವೆ ಹಿಂದೂಗಳ ಜನಸಂಖ್ಯೆಯು 7.8% ರಷ್ಟು ಕಡಿಮೆಯಾಗಿದೆ ಎಂದು ಹೇಳಿಕೊಂಡಿದೆ.
2024 ರ ಲೋಕಸಭಾ ಚುನಾವಣೆಯ ಮಧ್ಯೆ ಬಿಡುಗಡೆಯಾದ EAC-PM ವರದಿಯು ಹಿಂದೂ-ಮುಸ್ಲಿಂ ಜನಸಂಖ್ಯೆಯ ನಡುವಿನ ಹೋಲಿಕೆಯನ್ನು ಮಾಡಲು 2015 ರ ಯೋಜಿತ ಅಂಕಿಅಂಶಗಳನ್ನು ಬಳಸಲಾಗುತ್ತದೆ. ಆದರೆ, 2011 ರ ಜನಗಣತಿಯಲ್ಲಿ ಇಲ್ಲದ ಹೊಸದನ್ನು ಹೇಳುವುದಿಲ್ಲ. ಮುಸ್ಲಿಂ ಜನಸಂಖ್ಯೆಯ ಹೆಚ್ಚಳದ ಕುರಿತು ಚರ್ಚೆ ನಡೆಸುತ್ತಿರುವಾಗ, ಬಳಸಲಾಗಿರುವ ಗ್ರಾಫಿಕ್ಸ್ನಲ್ಲಿ ಹಿಂದೂಗಳನ್ನು ಭಾರತೀಯ ಧ್ವಜವನ್ನು ಬಳಸಿ ಗುರುತಿಸಲಾಗಿದೆ ಮತ್ತು ಮುಸ್ಲಿಮರು ಪಾಕಿಸ್ತಾನದ ಧ್ವಜದೊಂದಿಗೆ ಗುರುತಿಸಲಾಗಿದೆ. ಅದೇ ಪಾಕಿಸ್ತಾನದ ಧ್ವಜವನ್ನು ನಂತರ ಪಾಕಿಸ್ತಾನದಲ್ಲಿ ಮುಸ್ಲಿಮರ ಶೇಕಡಾವಾರು ಪ್ರಮಾಣವನ್ನು ಉಲ್ಲೇಖಿಸುವಾಗ ಬಳಸಲಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
"ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಏಕೆ ಹೆಚ್ಚುತ್ತಿದೆ ಎಂಬುದರ ಕುರಿತು ನಿರೂಪಕ ಅಜಿತ್ ಹನುಮಕ್ಕನವರ್ ತಮ್ಮ ಅಭಿಪ್ರಾಯವನ್ನು ವಿವರಿಸುತ್ತಾರೆ. ಮುಸ್ಲಿಮರಿಗೆ ಕನಿಷ್ಠ ವಿವಾಹ ವಯೋಮಿತಿ ಇಲ್ಲದಿರುವುದು ಒಂದು ಕಾರಣ ಎಂದು ಅವರು ಹೇಳುತ್ತಾರೆ. ಸಮಾಜ ಕಲ್ಯಾಣ ಇಲಾಖೆಗೆ ಬಾಲ್ಯ ವಿವಾಹದ ದೂರು ನೀಡಿದರೆ, ಇಸ್ಲಾಮಿಕ್ ವೈಯಕ್ತಿಕ ಕಾನೂನಿನಿಂದ ಅವರು ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳುತ್ತಾರೆ. ಬಾಲ್ಯವಿವಾಹ ನಿಷೇಧ ಕಾಯಿದೆಯು ಧರ್ಮ ಭೇದವಿಲ್ಲದೆ ಎಲ್ಲರಿಗೂ ಬಾಲ್ಯವಿವಾಹವನ್ನು ನಿಷೇಧಿಸಿರುವುದರಿಂದ ಇದು ಸಂಪೂರ್ಣ ಸುಳ್ಳು. ನಂತರ, ಮಕ್ಕಳನ್ನು ಹೊಂದದಿರುವ ನಿರ್ಧಾರವು ಇಸ್ಲಾಮಿಕ್ ಧರ್ಮಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳುತ್ತಾರೆ. ಇದು ಮತ್ತೆ ಮುಸ್ಲಿಂ ಸಮುದಾಯವನ್ನು ಅವಮಾನಿಸುವಂತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications