ದ್ವೇಷ ಭಾಷಣ, ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು, ಮಾರ್ಚ್ 21: ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ದ್ವೇಷ ಭಾಷಣ ಮಾಡಿದ ಆರೋಪ ಮೇಲೆ ಬಿಜೆಪಿ ನಾಯಕ ಮತ್ತು ದಕ್ಷಿಣ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಅಜಾನ್ ಸಮಯದಲ್ಲಿ ಜೋರಾಗಿ ಸಂಗೀತ ನುಡಿಸಿದ್ದಕ್ಕಾಗಿ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪವಿದೆ. ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿಯೂ 'ದ್ವೇಷ ಭಾಷಣ' ಮಾಡಿದ್ದಾರೆ ಎನ್ನುವ ಆರೋಪವಿದೆ.

ದ್ವೇಷದ ಭಾಷಣದ ವಿರುದ್ಧ ಹೋರಾಡುವ ಕಾರ್ಯಕರ್ತರು ಮತ್ತು ನಾಗರಿಕರ ಗುಂಪು 'ದ್ವೇಷದ ಭಾಷಣ ಬೇಡ' ಸಂಸ್ಥೆ ಸಲ್ಲಿಸಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ತೇಜಸ್ವಿ ಸೂರ್ಯ ಮಾಡಿದ ಭಾಷಣ "ವಾಸ್ತವವಾಗಿ ತಪ್ಪು ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಹಿಂಸಾಚಾರಕ್ಕೆ ಸ್ಪಷ್ಟ ಕರೆ" ಎಂದು ಆರೋಪಿಸಲಾಗಿದೆ.
ಚುನಾವಣಾ ಆಯೋಗ ಮತ್ತು ಕರ್ನಾಟಕ ಪೊಲೀಸರಿಗೆ 'ದ್ವೇಷದ ಭಾಷಣ ಬೇಡ' ಸಂಸ್ಥೆ ಸಲ್ಲಿಸಿದ ದೂರಿನಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಕೋಮು ಸೌಹಾರ್ದತೆಗೆ ಭಂಗ ಮತ್ತು ಕಾನೂನುಬಾಹಿರ ಸಭೆ ಎಂಬ ಗಂಭೀರ ಪ್ರಕರಣಗಳನ್ನು ಆರೋಪಿಸಿದ್ದಾರೆ.

"ಇಂತಹ ಹೇಳಿಕೆಗಳು ವಾಸ್ತವಿಕವಾಗಿ ತಪ್ಪು ಮತ್ತು ಕೆರಳಿಸುವಂತಹವು ಮಾತ್ರವಲ್ಲದೆ ಮುಸ್ಲಿಂ ಸಮುದಾಯದ ವಿರುದ್ಧ ಹಿಂಸಾಚಾರಕ್ಕೆ ಸ್ಪಷ್ಟವಾದ ಕರೆಯೂ ಆಗಿದೆ. ಅವರು ಅವರನ್ನು (ಮುಸ್ಲಿಮರನ್ನು) 'ಸಮಾಜ ವಿರೋಧಿ ಅಂಶಗಳು' ಎಂದು ಕರೆದಿದ್ದಾರೆ. 'ಜಿಹಾದಿಗಳಿಗೆ' ರಾಜಕೀಯ ಬೆಂಬಲವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಾ, ನಮ್ಮ ರಾಜ್ಯದಲ್ಲಿ ಹಿಂದೂಗಳ ಮೇಲಿನ ಅಪರಾಧ ಹೆಚ್ಚಿದೆ ಎಂದಿದ್ದಾರೆ.
ತೇಜಸ್ವಿ ಸೂರ್ಯ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು 'ಜಿಹಾದಿಗಳು' ಎಂದು ಕರೆದು ಚುನಾವಣೆಗೆ ಮುನ್ನ ಕೋಮು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಪೊಲೀಸರು ಈಗಾಗಲೇ ಕೆಲವು ಸೆಕ್ಷನ್ಗಳ ಅಡಿಯಲ್ಲಿ ಅದನ್ನು ದಾಖಲಿಸಲಾಗಿದೆ. ದ್ವೇಷದ ಭಾಷಣದ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಪೊಲೀಸರು 1963 ರ ಕರ್ನಾಟಕ ಪೊಲೀಸ್ ಕಾಯಿದೆಯ ಸೆಕ್ಷನ್ 7 (1) ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆಗಳನ್ನು ಮಾತ್ರ ಮಾಡಬಹುದು ಮತ್ತು ಅನಧಿಕೃತ ಘೋಷಣೆ ಮತ್ತು ಪ್ರತಿಭಟನೆಯನ್ನು ಅನುಮತಿಸಲಾಗುವುದಿಲ್ಲ. ನಮಗೆ ದೂರು ಬಂದಿದೆ, ಏನು ಮಾಡಬೇಕೋ ಅದನ್ನು ಮಾಡುತ್ತೇವೆ" ಎಂದು ಹೇಳಿದ್ದಾರೆ.
ಮಾರ್ಚ್ 18 ರಂದು, ದಕ್ಷಿಣ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಟ್ವಿಟರ್ನಲ್ಲಿ ದ್ವೇಷ ಭಾಷಣ ಮಾಡಿದ್ದರು. ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದಿದ್ದ ಅವರು, 'ಜಿಹಾದಿ'ಗಳಿಗೆ ಲಭ್ಯವಿರುವ ರಾಜಕೀಯ ಬೆಂಬಲದಿಂದ ಕರ್ನಾಟಕದಲ್ಲಿ ಹಿಂದೂಗಳ ಮೇಲಿನ ಅಪರಾಧದ ಘಟನೆಗಳು ಹೆಚ್ಚುತ್ತಿವೆ ಎಂದು ಹೇಳಿದ್ದರು.
ಮಂಗಳವಾರ (ಮಾರ್ಚ್ 19) ನಗರ್ತಪೇಟೆಯಲ್ಲಿರುವ ಹಿಂದೂ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ ಆರೋಪದ ವಿರುದ್ಧ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆಗಳ ಪ್ರತಿಭಟನೆ ನಡೆಯಿತು. ತೇಜಸ್ವಿ ಸೂರ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಅವರು ಕೆಲ ಕಾಲ ಬಂಧಿಸಿ ಬಳಿ ಬಿಡುಗಡೆ ಮಾಡಲಾಯಿತು.
'ಹನುಮಾನ್ ಚಾಲೀಸಾ' ನುಡಿಸಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅಂಗಡಿ ಮಾಲೀಕ ಮುಖೇಶ್ ಆರೋಪಿಸಿದ್ದಾರೆ. ಆದರೆ, ಪೊಲೀಸ್ ಎಫ್ಐಆರ್ನಲ್ಲಿ ಆರೋಪಿಗಳು ಜೋರಾಗಿ ಸಂಗೀತ ನುಡಿಸಿದ್ದಕ್ಕಾಗಿ ಅವರನ್ನು ಥಳಿಸಿದ್ದಾರೆ ಎಂದು ಮಾತ್ರ ಉಲ್ಲೇಖಿಸಲಾಗಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications