ಬಡ್ತಿ, ವರ್ಗಾವಣೆಗೆ 500 ಕೋಟಿ ಲಂಚ: ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ದೂರು
ಬೆಂಗಳೂರು, ಜುಲೈ 11: ಲೋಕೋಪಯೋಗಿ ಇಲಾಖೆಯಲ್ಲಿ ಸೋಮವಾರ ಸಭೆ ನಡೆಸಿ ತರಾತುರಿಯಲ್ಲಿ ಸುಮಾರು 800 ಜನ ಎಂಜಿನಿಯರ್ಗಳ ಬಡ್ತಿ ಹಾಗೂ ವರ್ಗಾವಣೆ ಮಾಡಿರುವ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರು ಇದಕ್ಕಾಗಿ 500 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ರೈತ ಮೋರ್ಚಾ ಸಂಘಟನೆಯ ಉಪಾಧ್ಯಕ್ಷ ಎಸ್. ಲಿಂಗಮೂರ್ತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಎಚ್ ರೇವಣ್ಣ ಅವರ ಸೂಚನೆಯಂತೆ ಸೋಮವಾರ ಇಲಾಖಾ ಪದೋನ್ನತಿ ಸಮಿತಿ ಸಭೆಯನ್ನು ನಡೆಸಲಾಗಿತ್ತು. ಇದರಲ್ಲಿ 800ಕ್ಕೂ ಹೆಚ್ಚು ಎಂಜಿನಿಯರ್ಗಳ ಬಡ್ತಿ ಮತ್ತು ವರ್ಗಾವಣೆಗೆ ಅನುಮತಿ ನೀಡಲಾಗಿತ್ತು. ಈ ವರ್ಗಾವಣೆ ಮತ್ತು ಬಡ್ತಿ ದಂಧೆಗಾಗಿ ರೇವಣ್ಣ ಅವರು 500 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಎಸ್ಸಿ ಎಸ್ಟಿ ಮತ್ತು ಓಬಿಸಿ ಸಮುದಾಯದ ಎಂಜಿನಿಯರ್ಗಳು ವರ್ಗಾವಣೆ ಮಾಡಿಸಿಕೊಳ್ಳಲು ಒಂದು ವರ್ಷದಿಂದ ಪ್ರಯತ್ನಿಸುತ್ತಿದ್ದರು. ಈ ಸಮಯದಲ್ಲಿ ಅವರಿಂದ ಹಣ ಪಡೆದು ಎಂಜಿನಿಯರ್ಗಳನ್ನು ಏಕಾಏಕಿ ಮನಬಂದಂತೆ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಅಲ್ಲದೆ, ಈ ವರ್ಗಾವಣೆಯ ಆದೇಶವನ್ನು ಹಿಂಪಡೆಯಬೇಕು ಎಂದು ಎಸ್. ಲಿಂಗಮೂರ್ತಿ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

ಲೋಕೋಪಯೋಗಿ ಇಲಾಖೆಯ 34 ಎಇಇ, ಇಬ್ಬರು ಎಸ್ಇ, 40 ಇಇ ಮತ್ತು 99 ಮಂದಿ ಜೆಇ/ಎಇಗಳನ್ನು ಕೂಡ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.
ವರ್ಗಾವಣೆ ಕಡಿತದಲ್ಲಿ ಹಿಂದಿನ ದಿನಾಂಕ ನಮೂದಿಸಿ ಸಹಿ ಹಾಕಲಾಗಿದೆ. ಈ ಮೂಲಕ ಆದೇಶ ಜಾರಿಯಾಗುವಂತೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications