ಮಿಸೆಸ್ ಇಂಡಿಯಾ ಹೆಸರಲ್ಲಿ ವಂಚನೆ: ಸ್ಪರ್ಧಾಳುವಿಂದ ದೂರು
ಬೆಂಗಳೂರು, ಮಾರ್ಚ್ 24: ಮಿಸೆಸ್ ಇಂಡಿಯಾ ಕರ್ನಾಟಕ ಬ್ಯೂಟಿ ಪೇಜೆಂಟ್ ಹೆಸರಲ್ಲಿ ಪ್ರತೀಸ್ ಈವೆಂಟ್ ಮತ್ತು ಮಿಸೆಸ್ ಇಂಡಿಯಾ ಪೇಜೆಂಟ್ ಅಂಡ್ ಪ್ರೊಡಕ್ಷನ್ ಪ್ರೈವೇಟ್ ಲಿ. ಆಯೋಜಕರು ಎಂದು ಸ್ಪರ್ಧಿಗಳಿಂದ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ಪರ್ಧಿಯೊಬ್ಬರು ಮಹಾಲಕ್ಷ್ಮೀ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮಹಾಲಕ್ಷ್ಮೀ ಲೇಔಟ್ ನಿವಾಸಿ ಮನೀಷ್ ಭಟ್ ಅವರು ನೀಡಿದ ದೂರಿನ ಮೇರೆಗೆ ಪ್ರತೀಸ್ ಈವೆಂಟ್ ನ ಪ್ರತಿಭಾ ಸೌಂಶಿಮಠ್ ಮತ್ತು ಮಿಸೆಸ್ ಇಂಡಿಯಾದ ಪೆಜೆಂಟ್ ಅಂಡ್ ಪ್ರೊಡಕ್ಷನ್ ನ ಆಯೋಜಕರಾದ ದೀಪಾಲಿ ಫಡ್ನಿಸ್ ವಿರುದ್ಧ ವಂಚನೆ ಮತ್ತು ಬೆದರಿಕೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನಲ್ಲೇನಿದೆ: 2016ರಲ್ಲಿ ವಂಚಿತ ಸಂಸ್ಥೆಗಳು ಸಾಮಾಜಿಕ ಜಾಲತಾಣಗಳ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದರು. ಅದರಂತೆ ಮನೀಷ ಭಟ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಮೊದಲ ಸುತ್ತಿನಲ್ಲಿ ಆಯ್ಕೆಯಾಗಿದ್ದರು. ಬಳಿಕ ಮುಂದಿನ ಸುತ್ತಿಗೆ ಅಯ್ಕೆಯಾಗಲು ಕಾರ್ಯಾಗಾರ ಮತ್ತು ತರಬೇತಿ ನೀಡಲು ನೋಂದಣಿ ಶುಲ್ಕ 20ಸಾವಿರ ಹಣವನ್ನು ವೆಬ್ಸೈಟ್ ಸಂಪರ್ಕಿಸಿ ಹಣ ಜಮೆ ಮಾಡಿಸಿಕೊಂಡಿದ್ದಾರೆ. ಆದರೆ, ಯಾವುದೇ ರೀತಿಯ ತರಬೇತಿ ನೀಡಿಲ್ಲ.

ಇನ್ನು ಸೌಂದರ್ಯ ಸ್ಪರ್ಧೆ ವೀಕ್ಷಿಸಲು ಕುಟುಂಬದವರು 1500ರೂ ಕೊಟ್ಟು ಟಿಕೆಟ್ ಖರೀದಿಸಿದ್ದಾರೆ. ಆದರೆ, ಟಿಕೆಟ್ ಮೇಲೆ 20ರೂ ಮುದ್ರಿತವಾಗಿತ್ತು. ಇದನ್ನು ಆಯೋಜಕರಿಗೆ ಪ್ರಶ್ನಿಸಿದಾಗ ಮುದ್ರಣ ಸಮಸ್ಯೆ ಉಂಟಾಗಿದೆ ಎಂದು ಸಬೂಬು ಹೇಳಿದ್ದಾರೆ. ಆದರೆ ಕೆಲ ದಿನಗಳ ಬಳಿಕ ವಂಚನೆಗೆ ಒಳಗಾಗಿರುವುದು ಗೊತ್ತಾಯಿತು.
ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಗೆ ದೂರು ನೀಡಲಾಗಿತ್ತು ಅಲ್ಲದೆ, ಸೌಂದರ್ಯ ಸ್ಪರ್ಧೆಯನ್ನು ನಿಗದಿತ ಸಮಯಕ್ಕಿಂತ ತಡವಾಗಿ ಆರಂಭಿಸಿದಲ್ಲದೆ, ತಮಗೆ ಕಿರೀಟ ಧಾರಣೆ ಮಾಡುವಾಗ ವಿದ್ಯುತ್ ಕಡಿತಗೊಳ್ಳುವಂತೆ ಮಾಡಿದ್ದರು ಎಂದು ಆರೋಪಿಸಿದ್ದಾರೆ.
-
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications