ಖರ್ಗೆ ಬಳಿ 50,000 ಕೋಟಿ ಅಕ್ರಮ ಆಸ್ತಿ, ದೂರು
ಬೆಂಗಳೂರು, ಡಿ. 19: ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅಕ್ರಮವಾಗಿ 50 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿದ್ದಾರೆಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿದೆ.
ಸಮಾಜ ಪರಿವರ್ತನ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ. ರತ್ನಾಕರ್ ಅವರು ಭ್ರಷ್ಟಾಚಾರ ತಡೆ ಕಾಯಿದೆ ಅಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದಾಗ ಅಧಿಕಾರ ದುರುಪಯೋಗಪಡಿಸಿಕೊಂಡು ಈ ಹಣ ಸಂಪಾದಿಸಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ. [ದಿನೇಶ್ ಗುಂಡೂರಾವ್ ವಿರುದ್ಧ ಭೂ ಅಕ್ರಮ ಆರೋಪ]
ಪ್ರಸ್ತುತ ಲೋಕಾಯುಕ್ತ ರಾಯಚೂರು ಘಟಕವು ಈ ದೂರನ್ನು ಪರಿಶೀಲಿಸುತ್ತಿದೆ. ಈ ಕುರಿತು ಕನ್ನಡ ಒನ್ಇಂಡಿಯಾ ಜೊತೆ ಮಾತನಾಡಿದ ಅಧಿಕಾರಿಗಳು, "ದೂರಿನಲ್ಲಿರುವ ಆರೋಪ ಕುರಿತು ತನಿಖೆ ನಡೆಸುತ್ತಿದ್ದೇವೆ. ಆರೋಪ ನಿಜವಾಗಿದ್ದರೆ ಎಫ್ಐಆರ್ ದಾಖಲಿಸಿ, ಪ್ರಕರಣ ನೋಂದಾಯಿಸಲಾಗುವುದು" ಎಂದು ತಿಳಿಸಿದ್ದಾರೆ. [ಶೆಟ್ಟರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ]

ದೂರಿನಲ್ಲಿರುವ ಆರೋಪಗಳೇನು?
ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಹಣ ಸಂಪಾದಿಸಿದ್ದಾರೆ. ಪರಿಶಿಷ್ಟ ಜಾತಿ ಬ್ಯಾಕ್ಲಾಗ್ ಹುದ್ದೆಗಳನ್ನು ತುಂಬಲು 1,427 ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ಗಳನ್ನು ಅಕ್ರಮವಾಗಿ ನೇಮಕಾತಿ ಮಾಡಿದ್ದಾರೆ. 1980ರಿಂದ ಕಂದಾಯ ಸಚಿವರಾಗಿದ್ದ ಖರ್ಗೆ ಭಾರೀ ಪ್ರಮಾಣದ ಸಂಪತ್ತು ಗಳಿಸಿದ್ದು, ಅದರ ಮೊತ್ತ 50,000 ಕೋಟಿ ರೂ.ಗಳಷ್ಟಾಗುತ್ತದೆ. [ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದ ಕಂಪ್ಲೀಟ್ ಡೀಟೇಲ್ಸ್]
ಎಷ್ಟು ಆಸ್ತಿಗಳಿವೆ?
ಬನ್ನೇರುಘಟ್ಟದಲ್ಲಿ 500 ಕೋಟಿ ರೂ. ಮೌಲ್ಯದ ಬೃಹತ್ ಸಂಕೀರ್ಣ, ಚಿಕ್ಕಮಗಳೂರಿನಲ್ಲಿ 1,000 ಕೋಟಿ ರೂ. ಮೌಲ್ಯದ 300 ಎಕರೆ ವಿಸ್ತೀರ್ಣದ ಕಾಫಿ ತೋಟ, 50 ಕೋಟಿ ರೂ. ಮೌಲ್ಯದ ಒಂದು ಮನೆ, ಕೆಂಗೇರಿಯಲ್ಲಿ 40 ಎಕರೆ ವಿಸ್ತೀರ್ಣದ ತೋಟದ ಮನೆ, ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ ಮಹಾವಿದ್ಯಾಲಯದ ಸಮೀಪ 25 ಕೋಟಿ ರೂ. ಮೌಲ್ಯದ ಒಂದು ಕಟ್ಟಡ, ಆರ್.ಟಿ. ನಗರದಲ್ಲಿ ಒಂದು ಮನೆ, ಬಳ್ಳಾರಿ ರಸ್ತೆಯಲ್ಲಿ 17 ಎಕರೆ ವಿಸ್ತೀರ್ಣದ ಭೂಮಿ, ಇಂದಿರಾನಗರದಲ್ಲಿ ಮೂರು ಅಂತಸ್ತುಗಳ ಒಂದು ಕಟ್ಟಡ, ಸದಾಶಿವನಗರದಲ್ಲಿ ಎರಡು ಮನೆಗಳು ಮತ್ತು ಇತರ ಆಸ್ತಿಗಳು. [ಭೂ ಹಗರಣ : ಖಮರುಲ್ಲಾ ಇಸ್ಲಾಂ ವಿರುದ್ಧ ತನಿಖೆ]
ಇಷ್ಟಲ್ಲದೆ, ಮಲ್ಲಿಕಾರ್ಜುನ ಖರ್ಗೆ ಅವರು ಮೈಸೂರು, ಕಲಬುರಗಿ, ಚೆನ್ನೈ, ಗೋವಾ, ಪುಣೆ, ನಾಗಪುರ, ಮುಂಬಯಿ ಮತ್ತು ನವದೆಹಲಿಯಲ್ಲಿ ಆಸ್ತಿ ಹೊಂದಿದ್ದಾರೆ. ಕೆಲವು ಆಸ್ತಿಗಳು ಗಂಡುಮಕ್ಕಳು, ಹೆಣ್ಣುಮಕ್ಕಳು, ಅಳಿಯ ಮತ್ತು ಪತ್ನಿಯ ಹೆಸರಿನಲ್ಲಿದೆ ಎಂದು ಲೋಕಾಯುಕ್ತಕ್ಕೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications