ಹೊಸಗುಡ್ಡದಹಳ್ಳಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಮಾಲೀಕರ ವಿರುದ್ಧ ಕೇಸ್
ಬೆಂಗಳೂರು, ನವೆಂಬರ್ 11: ಬೆಂಗಳೂರಿನ ಹೊಸಗುಡ್ಡದ ಹಳ್ಳಿಯಲ್ಲಿರುವ ರಾಸಾಯನಿಕ ಕಾರ್ಖಾನೆಯ ಗೋದಾಮಿನಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಸ್ಫೋಟಕ ಕಾಯ್ದೆಯಡಿ ಕಾರ್ಖಾನೆ ಮಾಲೀಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.
ಕಾರ್ಖಾನೆಯ ಗೋದಾಮಿನಲ್ಲಿ ಮಂಗಳವಾರ ಬೆಳಿಗ್ಗೆ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ನಂತರ ಬೃಹತ್ ಪ್ರಮಾಣದಲ್ಲಿ ಹರಡಿಕೊಂಡಿತ್ತು. ಕ್ಷಣ ಮಾತ್ರದಲ್ಲಿ ಇಡೀ ಕಾರ್ಖಾನೆಯೊಂದಿಗೆ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ವ್ಯಾಪಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದರು. ಸುಮಾರು ಹತ್ತು ಅಗ್ನಿಶಾಮಕ ದಳ ವಾಹನಗಳು ಬೆಂಕಿ ನಂದಿಸಲು ದೌಡಾಯಿಸಿದ್ದವು.
ಗೋದಾಮಿನ ಸುತ್ತಲಿನ ಮನೆಗಳಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿತ್ತು. ಕಾಖಾನೆಯಲ್ಲಿದ್ದ ನಾಲ್ವರು ಹೊರಗೆ ಓಡಿಬಂದಿದ್ದು, ಒಬ್ಬನಿಗೆ ಗಾಯವಾಗಿ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯಲ್ಲಿ ಫ್ಯಾಕ್ಟರಿ ಸಮೀಪ ನಿಲ್ಲಿಸಿದ್ದ ಏಳು ವಾಹನಗಳು, 2 ವಿದ್ಯುತ್ ಕಂಬಗಳು ಸಂಪೂರ್ಣ ನಾಶವಾಗಿವೆ.

ಕಾರ್ಖಾನೆಯ ಗೋದಾಮಿನಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೇ ಸ್ಯಾನಿಟೈಸರ್, ಟಿನ್ನರ್ ನಂಥ ರಾಸಾಯನಿಕವನ್ನು ಸಂಗ್ರಹಿಸಿಟ್ಟಿದ್ದು, ಆ ಡಬ್ಬಗಳು ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 2 ರಿಂದ 3 ಕೋಟಿ ರೂಪಾಯಿ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ತಡರಾತ್ರಿವರೆಗೂ ಬೆಂಕಿ ನಿಯಂತ್ರಣಕ್ಕೆ ಬರದೇ ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿದ್ದು, ಅಗ್ನಿಶಾಮಕ ಸಿಬ್ಬಂದಿ ರೇವಣ ಸಿದ್ದಪ್ಪ, ಸಂಪತ್ ರಾಜ್, ಸಿದ್ದೇಗೌಡ ಎಂಬುವರು ಅಸ್ವಸ್ಥರಾಗಿದ್ದರು.
ಕಾರ್ಖಾನೆ ನಡೆಸುತ್ತಿದ್ದ ಕಮಲಾ ಮತ್ತು ಪತಿ ಸಜ್ಜನ್ ರಾಜ್ ವಿರುದ್ಧ ಸ್ಫೋಟಕ ಕಾಯ್ದೆ ಅಡಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಬೊಮ್ಮಸಂದ್ರದಲ್ಲಿ ಇವರ ಕಾರ್ಖಾನೆಯಿದ್ದು, ಹೊಸಗುಡ್ಡದಹಳ್ಳಿಯ ಗೋದಾಮನ್ನು ರಾಸಾಯನಿಕ ಸಂಗ್ರಹಕ್ಕೆ ಬಳಸುತ್ತಿದ್ದರು. ಆದರೆ ಇದಕ್ಕೆ ಯಾವುದೇ ಪರವಾನಗಿ ಪಡೆದಿರಲಿಲ್ಲ ಎಂದು ತಿಳಿದುಬಂದಿದೆ.
ಕಾರ್ಖಾನೆಯಿಂದ ಬೆಂಕಿ ತಗುಲಿ ಸಮೀಪದ ಪ್ಲಾಸ್ಟಿಕ್ ಕಾರ್ಖಾನೆಯೂ ಹೊತ್ತಿ ಉರಿದಿದ್ದು, ಈ ಕಾರ್ಖಾನೆ ಮಾಲೀಕ ಅಯಾಜ್ ಪಾಷ ಎಂಬುವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications