ಕಾಂಗ್ರೆಸ್ ಶಾಸಕನಿಗೆ ಹಣದ ಆಮಿಷ: ಜನಾರ್ದನ ರೆಡ್ಡಿ ವಿರುದ್ಧ ದೂರು
Recommended Video

ಬೆಂಗಳೂರು, ಮೇ 19: ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಾಲ್ ಅವರಿಗೆ 100 ಕೋಟಿ ರೂ ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಗಾಲಿ ಜನಾರ್ದನ ರೆಡ್ಡಿ ವಿರುದ್ಧ ದೂರು ದಾಖಲಿಸಿದೆ.
ದದ್ದಾಲ್ ಅವರಿಗೆ ಹಣದ ಆಮಿಷವೊಡ್ಡುತ್ತಿರುವ ಆಡಿಯೋ ಕ್ಲಿಪ್ ವೊಂದನ್ನು ಖಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ನಂತರ ಅತಂತ್ರ ವಿಧಾನಸಭೆ ಅಸ್ತಿತ್ವದಲ್ಲಿರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸಬೇಕಾದ ಒತ್ತಡದಲ್ಲಿರುವ ಬಿಜೆಪಿ ಶಾಸಕರಿಗೆ ಆಮಿಷವೊಡ್ಡುತ್ತಿದೆ ಎಂದು ಕಾಂಗ್ರೆಸ್ ದೂರಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಆಡಿಯೋ ಕ್ಲಿಪ್ ನೀಡಿದೆ.

ಇಂದು ಅಪರಾಹ್ನ 4 ಗಂಟೆಗೆ ವಿಶ್ವಾಸಮತ ಯಾಚನೆ ನಡೆಯಲಿದ್ದು, ಬಿಜೆಪಿಗೆ ಇದು ಅಗ್ನಿ ಪರೀಕ್ಷೆ ಎನ್ನಿಸಿದ್ದರೆ, ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿವೆ. ಮೇ 17 ರಂದು ಕರ್ನಾಟಕ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.












Click it and Unblock the Notifications