ಕಿರುಕುಳ ಆರೋಪ: ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷನ ವಿರುದ್ಧ ಮಹಿಳೆ ದೂರು
ಚೆನ್ನೈ, ಜುಲೈ 25: ಅಪಾರ್ಟ್ಮೆಂಟ್ನ ಪಾರ್ಕಿಂಗ್ ಸ್ಥಳದಲ್ಲಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 65 ವರ್ಷದ ಮಹಿಳೆಯೊಬ್ಬರು ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷ ಡಾ ಸುಬ್ಬಯ್ಯ ಷಣ್ಮುಗಂ ವಿರುದ್ಧ ದೂರು ದಾಖಲಿಸಿದ್ದಾರೆ.
Recommended Video
ಸುಬ್ಬಯ್ಯ ಷಣ್ಮುಗಂ ಅವರ ತಮ್ಮ ಮನೆ ಬಾಗಿಲ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಬಳಕೆಯಾಗಿರುವ ಮಾಸ್ಕ್ಗಳನ್ನು ಎಸೆದಿದ್ದಾರೆ ಎಂದು ಮಹಿಳೆ ದೂರಿದ್ದಾಳೆ.
ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷರು ಮೂತ್ರ ವಿಸರ್ಜನೆ ಮಾಡಿದ್ದಾರೆ ಎನ್ನಲಾದ ಆರೋಪಕ್ಕೆ ಸಿಸಿಟಿವಿ ದೃಶ್ಯ ಹಾಗೂ ಕೆಲವು ಫೋಟೋಗಳನ್ನು ಮಹಿಳೆ ಪೊಲೀಸರಿಗೆ ನೀಡಿದ್ದು, ಆಡಂಬಕ್ಕಂ ಪೊಲೀಸ್ ಠಾಣೆಯಲ್ಲಿ ಜುಲೈ 11 ರಂದು ದೂರು ದಾಖಲಾಗಿದೆ.

ಮಹಿಳೆಗೆ ಸೇರಿದ ಪಾರ್ಕಿಂಗ್ ಸ್ಥಳವನ್ನು ಬಳಸಿಕೊಳ್ಳಲು ಡಾ ಸುಬ್ಬಯ್ಯ ಷಣ್ಮುಗಂ ಅನುಮತಿ ಕೇಳಿದ್ದರು. 1500 ಬಾಡಿಗೆ ನೀಡಿ ಬಳಸಿಕೊಳ್ಳಿ ಎಂದು ಮಹಿಳೆ ಹೇಳಿದ್ದರು. ಇದರಿಂದ ಕೋಪಗೊಂಡ ಎಬಿವಿಪಿ ಅಧ್ಯಕ್ಷ ಬಳಸಿದ ಮಾಸ್ಕ್, ಕಹಿಬೇವಿನ ಎಲೆಗಳನ್ನು ಎಸೆಯುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಹಿಳೆ ದೂರನ್ನು ನಿರಾಕರಿಸಿರುವ ಎಬಿವಿಪಿ ಘಟಕವೂ, ಸಿಸಿಟಿವಿ ದೃಶ್ಯವೂ ನಕಲಿ, ಇದು ಕಾಂಗ್ರೆಸ್ ಸಂಘಟನೆಯ ಎನ್ಎಸ್ಯುಐ ಘಟಕ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಮತ್ತೊಂದೆಡೆ ಡಿಎಂಕೆ ಪಕ್ಷದ ಕನಿಮೋಳಿ ಪ್ರತಿಕ್ರಿಯಿಸಿ ಬಲಪಂಥೀಯದವರ ವಿರುದ್ಧ ದೂರು ಬಂದರೆ ಪೊಲೀಸರು ಗಂಭೀರವಾಗಿ ಪರಿಗಣಿಸದಿರುವುದು ಸಾಮಾನ್ಯವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅಂದ್ಹಾಗೆ, ಸುಬ್ಬಯ್ಯ ಅವರು ಎಬಿವಿಪಿ ಅಧ್ಯಕ್ಷರು ಮಾತ್ರವಲ್ಲ, ಕಿಲಿಪಾಕ್ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ವಿಭಾಗದಲ್ಲಿ ಮುಖ್ಯಸ್ಥರು ಆಗಿದ್ದಾರೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications