ಸಿಎಂ ರಾಜೀನಾಮೆ ಸುದ್ದಿ ಪ್ರಸಾರ; ಟಿವಿ5 ವಿರುದ್ಧ ದೂರು ದಾಖಲಿಸಿದ ಜೆಡಿಎಸ್
ಬೆಂಗಳೂರು, ನವೆಂಬರ್ 28: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಳಗಾವಿಯ ಅಧಿವೇಶಾನದ ನಂತರ ರಾಜೀನಾಮೆ ನೀಡಲಿದ್ದಾರೆ. ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ ಎಂದು ಬುಧಬಾರ ಸಂಜೆಯಿಂದ ಟಿವಿ5 ಕನ್ನಡ ಸುದ್ದಿ ವಾಹಿನಿ ಸುಳ್ಳು ಸುದ್ದಿ ಪ್ರಕಟಿಸಿದೆ ಎಂದು ಆರೋಪಿಸಿ ಜೆಡಿಎಸ್ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಆರ್.ಪ್ರಕಾಶ್ ದೂರು ನೀಡಿದ್ದಾರೆ.
ಹಾಸನ, ಮೈಸೂರು ಜಿಲ್ಲೆಗಳಲ್ಲಿ ಬುಧವಾರ ಮುಖ್ಯಮಂತ್ರಿಗಳು ಹಲವು ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅವರು ಆರೋಗ್ಯವಾಗಿದ್ದು, ಸರಕಾರ ಎಲ್ಲ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರತಿ ದಿನ ಹದಿನಾಲ್ಕರಿಂದ ಹದಿನಾರು ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಟಿವಿ5 ಸುದ್ದಿ ವಾಹಿನಿ ವರದಿಗಾರ ದಶರಥ್ ಪ್ರಸ್ತುತ ಪಡಿಸಿದ ಸುದ್ದಿಯಲ್ಲಿ ಮುಖ್ಯಮಂತ್ರಿಗಳ ಆರೋಗ್ಯ ಹಾಗೂ ಅಧಿಕಾರಾವಧಿ ಬಗ್ಗೆ ಅನಗತ್ಯ ಗೊಂದಲ ಉಂಟು ಮಾಡುವ ಪ್ರಯತ್ನ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನವು ಸಾಂವಿಧಾನಿಕ ಹುದ್ದೆ. ಇಂಥ ಅಪಪ್ರಚಾರದಿಂದ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವ ಹುನ್ನಾರವಾಗಿದೆ. ಇದರ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಟಿವಿ5 ವರದಿಗಾರರು ಹಾಗೂ ಸುದ್ದಿ ವಾಹಿನಿ ಮುಖ್ಯಸ್ಥರ ವಿರುದ್ಧ ಕಾನೂನು ಪ್ರಕಾರ ಕೈಗೊಳ್ಳಬೇಕು ಎಂದು ಜನತಾದಳ ಜಾತ್ಯತೀತ ಪಕ್ಷದ ಪರವಾಗಿ ಕೇಳಿಕೊಳ್ಳುತ್ತೇನೆ ಎಂದು ಪಕ್ಷದ ಬೆಂಗಳೂರು ನಗರ ಜಿಲ್ಲೆಯ ಅಧ್ಯಕ್ಷ ಆರ್.ಪ್ರಕಾಶ್ ದೂರು ಸಲ್ಲಿಸಿದ್ದಾರೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ











Click it and Unblock the Notifications