ರಸ್ತೆ ಅಭಿವೃದ್ಧಿ ಅಕ್ರಮ : ಸಿದ್ದು, ಜಾರ್ಜ್ ವಿರುದ್ಧ ದೂರು
ಬೆಂಗಳೂರು, ಅಕ್ಟೋಬರ್ 30 : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಸಿಬಿಗೆ ಪ್ರತ್ಯೇಕ ದೂರುಗಳು ದಾಖಲಾಗಿವೆ. ರಸ್ತೆ ಅಭಿವೃದ್ಧಿ ಹೆಸರಿನಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ಮಾಡಿದ್ದಾರೆ ಎಂಬುದು ಆರೋಪವಾಗಿದೆ.
ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಿದ್ದರಾಮಯ್ಯ ಮತ್ತು ಕೆ.ಜೆ.ಜಾರ್ಜ್ ವಿರುದ್ಧ ಪ್ರತ್ಯೇಕ ದೂರು ನೀಡಿದ್ದಾರೆ. ನಗರದ ರಸ್ತೆಗಳ ವೈಟ್ ಟ್ಯಾಪಿಂಗ್ ಹೆಸರಿನಲ್ಲಿ 600 ಕೋಟಿಗೂ ಹೆಚ್ಚು ಅವ್ಯವಹಾರವಾಗಿದೆ. ಸಿಎಂ ಮತ್ತು ಕೆ.ಜೆ.ಜಾರ್ಜ್ ಕಮೀಷನ್ ಪಡೆದಿದ್ದಾರೆ ಎಂದು ರಮೇಶ್ ಆರೋಪ ಮಾಡಿದ್ದಾರೆ.

ಎನ್.ಆರ್.ರಮೇಶ್ ಅವರು ದೂರಿನಲ್ಲಿ 1/4/2014ರಿಂದ 10/10/2017ರ ತನಕ ಪಾಲಿಕೆ ವ್ಯಾಪ್ತಿಯ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ 4,878 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಹಗರಣದಲ್ಲಿ ಗುತ್ತಿಗೆದಾರರು ಶಾಮೀಲಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ರಸ್ತೆಗಳ ನಿರ್ವಹಣಾ ಅವಧಿ ಚಾಲ್ತಿಯಲ್ಲಿದ್ದರೂ ರಸ್ತೆ ಗುಂಡಿಗಳನ್ನು ಮುಚ್ಚಲು 130 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬಹುತೇಕ ರಸ್ತೆಗಳಿಗೆ ಮೂರುವರೆ ವರ್ಷಗಳ ಅವಧಿಯಲ್ಲಿ 2ಕ್ಕೂ ಹೆಚ್ಚು ಸಲ ಡಾಂಬರು ಹಾಕಲಾಗಿದೆ ಎಂದು ಬಿಲ್ ಸೃಷ್ಟಿ ಮಾಡಲಾಗಿದೆ. ಆದ್ದರಿಂದ, ಟೆಂಡರ್ಗಳನ್ನು ಪರಿಶೀಲನೆ ಮಾಡಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ಮೂರು ಪ್ಯಾಕೇಜ್ಗಳ ಮೂಲಕ 100.01 ಕಿ.ಮೀ. ಉದ್ದದ 29 ರಸ್ತೆಗಳು ಮತ್ತು 6 ಜಂಕ್ಷನ್ಗಳ ವೈಟ್ ಟ್ಯಾಪಿಂಗ್ ಕಾರ್ಯಕ್ಕೆ 1,059 ಕೋಟಿ ವೆಚ್ಚ ಮಾಡಲಾಗಿದೆ. ಪ್ರತಿ ಕಿ.ಮೀ.ಗೆ ಸುಮಾರು 10 ಕೋಟಿ ವೆಚ್ಚವಾಗಿದೆ. ಆದರೆ, ಪ್ರತಿ ಕಿ.ಮೀ.ಗೆ ಸರಾಸರಿ 4 ರಿಂದ 4.5 ಕೋಟಿ ಹಣ ವೆಚ್ಚವಾಗುತ್ತದೆ. 5 ರಿಂದ 6 ಕೋಟಿ ಹಣ ಹಗಲು ದರೋಡೆ ಆಗಿದೆ ಎಂದು ಆರೋಪಿಸಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications