Traffice Jam: HAL ಜಂಕ್ಷನ್ ರಸ್ತೆ ಅಂಡರ್ಪಾಸ್ ಬೇಗ ಪೂರ್ಣಗೊಳಿಸಿ
ಬೆಂಗಳೂರು, ಅಕ್ಟೋಬರ್ 31: ಬೆಂಗಳೂರಿನ ಎಚ್ಎಎಲ್ ಜಂಕ್ಷನ್ ಬಳಿ ಅಂಡರ್ಪಾಸ್ ನಿರ್ಮಾಣ ವಿಳಂಬ ಹಿನ್ನೆಲೆಯಲ್ಲಿ ಜನರು ಈ ಭಾಗದಲ್ಲಿ ನಿತ್ಯ ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದಾರೆ.
ಬೆಂಗಳೂರು ವ್ಯಾಪ್ತಿಯಲ್ಲಿ ಕಳೆದ ಮುಂಗಾರು ಋತುವಿನಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ರಸ್ತೆಗಳು ಗುಂಡಿ ಬಿದ್ದು ಸಮಸ್ಯೆ ಉಂಟಾಗಿದೆ. ಇತ್ತ ಎಚ್ಎಎಲ್ ಜಂಕ್ಷನ್ ಬಳಿ ಬಿಬಿಎಂಪಿ ನಿರ್ಮಿಸುತ್ತಿರುವ ರಸ್ತೆ ಅಂಡರ್ಪಾಸ್ ಮೂರು ವರ್ಷವಾದರೂ ಪೂರ್ಣಗೊಂಡಿಲ್ಲ. ಮಳೆಗಾಲದಲ್ಲಿ ಇಲ್ಲಿನ ಪರಿಸ್ಥಿತಿ ಹೇಳತೀರದಾಗಿದೆ ಎನ್ನುತ್ತಾರೆ ಸಾರ್ವಜನಿಕರು.
ಎಚ್ಎಎಲ್ ಜಂಕ್ಷನ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶವು ಜನ ನಿಬಿಡ ಪ್ರದೇಶವಾಗಿದೆ. ಇಲ್ಲಿ ಜನರಿಗೆ ಅನುಕೂಲವಾಗಲೆಂದು ರಸ್ತೆ ಅಂಡರ್ಪಾಸ್ ನಿರ್ಮಿಸಲಾಗುತ್ತಿತ್ತು. ಆದರೆ ಮೂರು ವರ್ಷ ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ನಿತ್ಯ 40 ನಿಮಿಷಕ್ಕೂ ಹೆಚ್ಚು ಕಾಲ ಎಚ್ಎಎಲ್ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದರಿಂದ ಕಚೇರಿ, ದೈನಂದಿನ ಕೆಲಸಗಳಿಗೆ ಈ ಮಾರ್ಗವಾಗಿ ಹೋಗುವುದು ಕಷ್ಟಕರವಾಗಿದೆ ಎನ್ನುತ್ತಾರೆ ಪ್ರಯಾಣಿಕರು.

ನಿರಂತರ ಮಳೆಯಿಂದ ಈ ಭಾಗದ ರಸ್ತೆ ಸಂಚಾರ ಸಮಸ್ಯೆ ಹೆಚ್ಚಾಗಿದೆ. ಎಲ್ಲೆಂದರಲ್ಲಿ ನೀರು ನಿಂತು ವಾಹನಗಳು ಸಂಚರಿಸಲು ಸ್ಥಳವಿಲ್ಲದಂತಾಗುತ್ತದೆ. ಸಾಮಾನ್ಯ ದಿನಗಳಲ್ಲಿ, ಜಂಕ್ಷನ್ನಲ್ಲಿ ಗಂಟೆಗಳ ಕಾಲ ಸಿಲುಕಿಕೊಳ್ಳುತ್ತೇವೆ. ಮಳೆ ಬಂದರೆ ಪರಿಸ್ಥಿತಿ ಶೋಚನೀಯವಾಗುತ್ತದೆ.
ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಮನವಿ; ಎಚ್ಎಎಲ್ ಗೇಟ್ನ ಎಡಭಾಗದಲ್ಲಿ ಕಾರು, ಬೈಕ್ ಸೇರಿದಂತೆ ಕಡಿಮೆ ಭಾರದ ವಾಹನಗಳ ಚಾಲನೆಗೆ ಅವಕಾಶ ನೀಡಿದರೆ ಇನ್ನೊಂದು ಬದಿಯಲ್ಲಿ ಬದಿಯ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಯಾಣಿಕರು ವಿವರಿಸಿದರು.

ಈ ಸಂಬಂಧ ಅನೇಕ ಸಲ ಬಿಬಿಎಂಪಿಗೆ ಮನವಿ ಮಾಡಿದರೂ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಯಾವ ಕ್ರಮ ಕೈಗೊಂಡಿಲ್ಲ. ನಾವು ಅಧಿಕಾರಿಗಳಿಗೆ ಸಾಕಷ್ಟು ಮನವಿಗಳನ್ನು ನೀಡಿದ್ದೇವೆ ಆದರೆ ಕೆಲಸ ಪ್ರಗತಿಯಲ್ಲಿಲ್ಲ. ಅಧಿಕಾರಿಗಳು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶೀಘ್ರವೇ ಕಾಮಗಾರಿ ಮುಗಿಸಿ ಈ ಭಾಗದಲ್ಲಿನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಬೈಕ್ ಸವಾರರೊಬ್ಬರು ಒತ್ತಾಯಿಸಿದರು. ಈ ಕುರಿತು ಬಿಬಿಎಂಪಿ ಜನರಿಗೆ, ಮನವಿ ನೀಡಲು ಮುಂದಾದವರಿಗೆ ಕನಿಷ್ಠ ಸ್ಪಂದನೆ ಸಹ ದೊರೆತಿಲ್ಲ ಎನ್ನಲಾಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಬೆಂಗಳೂರಿನ ರಸ್ತೆಗಳಿಗೆ ಹೊಸ ಮಾದರಿಯ ಡಾಂಬರೀಕರಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಪ್ಡೇಟ್ಸ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications