Bengaluru: ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದ ಸಿಮೆಂಟ್ ಮಿಕ್ಸರ್ ಲಾರಿ, ತಾಯಿ ಮಗಳ ದುರ್ಮರಣ
ರಾಜ್ಯ ರಾಜಧಾನಿಯಲ್ಲಿ ಕಾರಿನ ಮೇಲೆ ಕಾಂಕ್ರಿಟ್ ಲಾರಿ ಮುಗುಚಿ ಬಿದ್ದಿದ್ದು ಸ್ಥಳದಲ್ಲೇ ತಾಯಿ ಮಗಳು ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರು, ಫೆಬ್ರವರಿ. 02: ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಕಾರಿನ ಮೇಲೆ ಬಿದ್ದ ಪರಿಣಾಮ ತಾಯಿ ಮಗಳಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಅಪಘಾತ ಪ್ರಕರಣಗಳು ವರದಿಯಾಗುತ್ತಲೆ ಇವೆ. ಪ್ರತಿದಿನ ನಾವು ಕೇಳುವ ಈ ಸುದ್ದಿಗಳಲ್ಲಿ ಕೆಲವೊಂದು ಘಟನೆಗಳು ಭಾರಿ ನೋವಿಗೆ ನೂಕುತ್ತವೆ. ಅಂತಹದ್ದೆ ಘಟನೆ ಇದು ಕೂಡ. ಕಾರಿನಲ್ಲಿ ಮಗಳನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ನಜ್ಜುಗುಜ್ಜಾಗಿ ಮೃತಪಟ್ಟಿದ್ದಾರೆ.
ಕನಕಪುರ ರಸ್ತೆಯ ಕಗ್ಗಲಿಪುರದ ಕಾಂಕಾರ್ಡ್ ನಾಪಾ ವ್ಯಾಲಿ ನಿವಾಸಿಗಳಾದ , 47 ವರ್ಷದ ಗಾಯತ್ರಿ ಕುಮಾರ್ ಮತ್ತು ಅವರ 15 ವರ್ಷದ ಮಗಳು ಸಮತಾ ಕುಮಾರ್ ಮೃತರು. ಗಾಯತ್ರಿ 10ನೇ ತರಗತಿಯಲ್ಲಿ ಓದುತ್ತಿದ್ದ ತನ್ನ ಮಗಳು ಸಮತಾರನ್ನು ಬನ್ನೇರುಘಟ್ಟ ರಸ್ತೆಯ ನೈಸ್ ರಸ್ತೆ ಜಂಕ್ಷನ್ ಬಳಿಯ ಬಸವನಪುರದ ಶೆರ್ವುಡ್ ಪ್ರೌಢಶಾಲೆಗೆ ಬಿಡಲು ತೆರಳುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಬನ್ನೆರುಗಟ್ಟ ಸಮೀಪದ ತಿರುವಿನಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ಕಳೆದುಕೊಂಡ ಪಕ್ಕದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಈ ವೇಳೆ ಕಾರಿನ ತುರ್ತು ವ್ಯವಸ್ಥೆಯ ಮೂಲಕ ಗಾಯತ್ರಿ ಅವರು ತಮ್ಮ ಪತಿ ಸುನಿಲ್ ಕುಮಾರ್ ಅವರಿಗೆ ಅಪಘಾತದ ಬಗ್ಗೆ ಸಂದೇಶ ಕಳುಹಿಸಿದ್ದಾರೆ. ಸುನೀಲ್ ಸ್ಥಳಕ್ಕೆ ಧಾವಿಸಿ ನೋಡುವಷ್ಟರಲ್ಲಿ ಪತ್ನಿ ಮತ್ತು ಮಗಳು ಇಬ್ಬರೂ ಲಾರಿಯಡಿ ನಜ್ಜುಗುಜ್ಜಾಗಿದ್ದರು.
ಘಟನೆ ನಡೆದ ತಕ್ಷಣ ಕಾಂಕ್ರಿಟ್ ಮಿಕ್ಸರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ತಲೆಮರೆಸಿಕೊಂಡಿದ್ದಾನೆ. ನಾಲ್ಕು ಕ್ರೇನ್ ಮತ್ತು ಜೆಸಿಬಿ ಸಹಾಯದಿಂದ ಕಾರಿನೊಳಗೆ ಬಹಳ ಸಮಯ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಲಾರಿ ಮಾಲೀಕನನ್ನು ಭರತ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ನಿರ್ಮಾಣದ ಹಂತದ ಮೆಟ್ರೋ ಕಾಮಗಾರಿಯಲ್ಲಿ ಕಾಂಕ್ರೀಟ್ ಹಾಕಲು ನಿಲ್ಲಿಸಲಾಗಿದ್ದ ಕಬ್ಬಿಣದ ಸರಳುಗಳ ಪಿಲ್ಲರ್ ಕುಸಿದು ಅವಘಡ ಸಂಭವಿಸಿತ್ತು. ಘಟನೆಯಲ್ಲಿ ತೇಜಸ್ವಿನಿ ಎಂಬುವವರು ಹಾಗೂ ಅವರ ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications