ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಲ್ಕು ದಿನದಲ್ಲಿ ಹಲವು ಬಾರಿ ಇಶಾ ಪಂತ್ ವರ್ಗಾವಣೆ!

|
Google Oneindia Kannada News

ಬೆಂಗಳೂರು, ಮಾರ್ಚ್ 01 : ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿ ಇಶಾಪಂತ್ ವರ್ಗಾವಣೆ ವಿಚಾರದಲ್ಲಿ ಸರ್ಕಾರ ಹಲವು ಗೊಂದಲ ಹುಟ್ಟು ಹಾಕಿದೆ. ನಾಲ್ಕು ದಿನದಲ್ಲಿ ಹಲವು ಬಾರಿ ವರ್ಗಾವಣೆ ಆದೇಶ ಹೊರಡಿಸಿ ಸರ್ಕಾರ ಟೀಕೆಗೆ ಕಾರಣವಾಗಿದೆ.

ಕರ್ನಾಟಕ ಸರ್ಕಾರ ಫೆಬ್ರವರಿ 26ರಂದು ಇಶಾಪಂತ್ ಸೇರಿ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಆಗ್ನೇಯ ವಿಭಾಗದ ಡಿಸಿಪಿ ಇಶಾಪಂತ್‌ರನ್ನು ಸಿಐಡಿಯ ಎಸ್ಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ಐಎಂಎ ಹಗರಣ; ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ! ಐಎಂಎ ಹಗರಣ; ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ!

ಫೆಬ್ರವರಿ 29ರಂದು ಮತ್ತೊಂದು ಆದೇಶ ಹೊರಡಿಸಿದ ಸರ್ಕಾರ ಇಶಾಪಂತ್‌ ಅವರನ್ನು ಫೆಬ್ರವರಿ 26ರಂದು ವರ್ಗಾವಣೆ ಮಾಡಿದ ಆದೇಶವನ್ನು ವಾಪಸ್ ಪಡೆಯಿತು. ಆಗ್ನೇಯ ವಿಭಾಗದ ಡಿಸಿಪಿಯಾಗಿಯೇ ಮುಂದುವರೆಯುವಂತೆ ಸೂಚಿಸಿತು.

ಕರ್ನಾಟಕ: 2020ರಲ್ಲಿ ನಿವೃತ್ತರಾಗಲಿರುವ 12 ಐಪಿಎಸ್ ಅಧಿಕಾರಿಗಳು ಕರ್ನಾಟಕ: 2020ರಲ್ಲಿ ನಿವೃತ್ತರಾಗಲಿರುವ 12 ಐಪಿಎಸ್ ಅಧಿಕಾರಿಗಳು

Confusion In IPS Officer Isha Pant Transfer

ಕೆಲವೇ ಗಂಟೆಗಳಲ್ಲಿ ಮತ್ತೊಂದು ಆದೇಶ ಹೊರಡಿಸಿದ ಸರ್ಕಾರ ಇಶಾಪಂತ್‌ರನ್ನು ಕಮಾಂಡ್ ಸೆಂಟರ್ ಆಫ್ ಬೆಂಗಳೂರು ಡಿಸಿಪಿಯಾಗಿ ವರ್ಗಾವಣೆ ಮಾಡಿತ್ತು. 2015ನೇ ಬ್ಯಾಚ್ ಐಪಿಎಸ್ ಅಧಿಕಾರಿ ಶ್ರೀನಾಥ್ ಮಹಾದೇವ್‌ರನ್ನು ಆಗ್ನೇಯ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಿತು.

ಪೌರತ್ವ ತಿದ್ದುಪಡಿ ಮಸೂದೆ ಪಾಸ್; ಐಪಿಎಸ್ ಅಧಿಕಾರಿ ರಾಜೀನಾಮೆ ಪೌರತ್ವ ತಿದ್ದುಪಡಿ ಮಸೂದೆ ಪಾಸ್; ಐಪಿಎಸ್ ಅಧಿಕಾರಿ ರಾಜೀನಾಮೆ

ಚಿತ್ರದುರ್ಗದ ಎಸ್ಪಿಯಾಗಿದ್ದ ಶ್ರೀನಾಥ್ ಮಹಾದೇವ್‌ ಅವರಿಗೆ ಬಡ್ತಿ ನೀಡಿದ ಸರ್ಕಾರ ಆಗ್ನೇಯ ವಿಭಾಗಕ್ಕೆ ವರ್ಗಾವಣೆ ಮಾಡಿತು. ಇಶಾಪಂತ್‌ ಅವರು ಶ್ರೀನಾಥ್‌ಗೆ ಅಧಿಕಾರ ಹಸ್ತಾಂತರ ಮಾಡಿದ್ದೇನೆ ಎಂದು ಟ್ವೀಟ್ ಮಾಡಿದರು.

ಇಶಾಪಂತ್ 2011ನೇ ಬ್ಯಾಚ್ ಮಧ್ಯಪ್ರದೇಶ ಕೆಡರ್‌ನ ಐಪಿಎಸ್ ಅಧಿಕಾರಿ. ಕಳೆದ ಒಂದು ವರ್ಷದಿಂದ ಆಗ್ನೇಯ ವಿಭಾಗದ ಡಿಸಿಪಿಯಾಗಿ ಅವರು ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಕನ್ನಡ ಹಾಡುಗಳನ್ನು ಹಾಡುವ ಇಶಾಪಂತ್ ಖಡಕ್ ಅಧಿಕಾರಿಯಾಗಿದ್ದಾರೆ.

English summary
Karnataka government created confusion in the transfer it IPS officer Isha Pant. DCP of the Bengaluru South East division now posted as DCP of Command Centre of Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X