ತನ್ವೀರ್ ಸೇಠ್ ವಿಚಾರ ಪ್ರಸ್ತಾಪಿಸಿದ್ದಕ್ಕೆ ಪರಮೇಶ್ವರ್ ಆಕ್ರೋಶ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ನಲ್ಲೇ ಈಗ ಒತ್ತಾಯಗಳು ಕೇಳಿ ಬರುತ್ತಿವೆ.
ಬೆಂಗಳೂರು, ನವೆಂಬರ್, 14: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ವಿಷಯ ಪ್ರಸ್ತಾಪಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ಅವರು ಫುಲ್ ಗರಂ ಆದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನೆಹರೂ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಮಂಜುಳಾ ನಾಗರಾಜ್ ಅವರು ಮಾಡಿದ ಪ್ರಸ್ತಾಪಕ್ಕೆ ಪರಮೇಶ್ವರ್ ಅವರು ತೀವ್ರ ಇರಿಸುಮುರಿಸುಗೊಂಡರು.
ಸಭೆಯಲ್ಲಿ ಎದ್ದು ನಿಂತು ಮಾತನಾಡಿದ ಮಂಜುಳಾ ನಾಗರಾಜ್ "ಇಂದಿರಾಗಾಂಧಿ ಕಟ್ಟಿದಂತಹ ಪಕ್ಷದಲ್ಲಿ ಇಂತಹ ಸಚಿವರು ಇರುವುದು ಬೇಡ ನೀವು ಕೂಡಲೇ ಸಚಿವ ತನ್ವೀರ್ ಸೇಠ್ ವಿರುದ್ಧ ಕ್ರಮ ಕೈಗೊಳ್ಳಬೇಕು" ಎಂದು ಸಭೆಯಲ್ಲಿ ಒತ್ತಾಯ ಮಾಡಿದರು.

"ಇದು ಮಹಿಳಾ ಕಾಂಗ್ರೆಸ್ ವತಿಯಿಂದ ನಿಮಗೆ ಮಾಡುತ್ತಿರುವ ಮನವಿ. ಅಶ್ಲೀಲ ಚಿತ್ರ ವೀಕ್ಷಿಸಿದ ತನ್ವೀಸರ್ ಸೇಠ್ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಿ" ಎಂದು ಅವರು ಆಗ್ರಹಿಸಿದರು.
ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಪರಮೇಶ್ವರ್, "ಆಯ್ತು ಕುತ್ಕೋಳಮ್ಮ, ನೋಡ್ತಿವಿ" ಎಂದು ಕೈ ಸನ್ನೆ ಮೂಲಕ ಮಂಜುಳಾ ನಾಗರಾಜ್ ಅವರನ್ನು ಸುಮ್ಮನೆ ಕುಳಿತುಕೊಳ್ಳುವಂತೆ ಸೂಚಿಸಿದರು.
ಟಿಪ್ಪು ಜಯಂತಿ ಆಚರಣೆ ವೇಳೆ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವಲ್ಲಿ ತಲ್ಲೀನರಾಗಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಂಪುಟದಿಂದ ಕೈಬಿಡುವಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಆದರೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ಸಚಿವ ತನ್ವೀರ್ ಸೇಠ್ ವರ್ತನೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡುತ್ತಲೇ ಇದ್ದಾರೆ.
ಸಚಿವ ತನ್ವೀರ್ ಸೇಠ್ ವರ್ತನೆಗೆ ಈಗ ಕಾಂಗ್ರೆಸ್ ನಲ್ಲೇ ವಿರೋಧ ವ್ಯಕ್ತವಾಗುತ್ತಿದ್ದರೂ. ಕಾಂಗ್ರೆಸ್ ಮಾತ್ರ ಸಚಿವರ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ.
ಅವರು ತಪ್ಪು ಮಾಡಿರುವುದು ಸಾಬೀತಾದರೆ ಖಂಡಿತ ಕ್ರಮಕೈಗೊಳ್ಳುವುದಾಗಿ ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications