Get Updates
Get notified of breaking news, exclusive insights, and must-see stories!

Congress: ಅತ್ಯಾಚಾರ, ಅನಾಚಾರದ ರಾಜಧಾನಿ ಉತ್ತರ ಪ್ರದೇಶ

ಬೆಂಗಳೂರು: 'ಅತ್ಯಾಚಾರ, ಅನಾಚಾರಗಳ ರಾಜಧಾನಿ ಎಂದೇ ಖ್ಯಾತಿ ಪಡೆದ ಉತ್ತರ ಪ್ರದೇಶವು @BJP4Karnatakaಗೆ ಮಾದರಿಯಂತೆ' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಈ ಮೂಲಕ ಕರ್ನಾಟಕಕ್ಕೆ ಉತ್ತರ ಪ್ರದೇಶ ಮಾದರಿ ಎಂದು ಹೇಳುತ್ತಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದೆ ಕರ್ನಾಟಕ ಕಾಂಗ್ರೆಸ್ ಘಟಕ. ಉತ್ತರ ಪ್ರದೇಶದಲ್ಲಿ ಪದೇಪದೆ ನಡೆಯುವ ಹಿಂಸಾತ್ಮಕ ಕೃತ್ಯಗಳನ್ನೇ ಕಾಂಗ್ರೆಸ್ ಇಲ್ಲಿ ಪ್ರಸ್ತಾಪಿಸಿದೆ.

ರಾಜ್ಯದಲ್ಲಿ ಗುಜರಾತ್ ಹಾಗೂ ಉತ್ತರ ಪ್ರದೇಶ ಮಾದರಿ ಎನ್ನುತ್ತಾ ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದಾರೆ. ಆದರೆ ಉತ್ತರ ಪ್ರದೇಶ ಮಾದರಿಯನ್ನು ಕಾಂಗ್ರೆಸ್ ಟೀಕೆ ಮಾಡಿದೆ. ಜೊತೆಗೆ 'ಅತ್ಯಾಚಾರ, ಅನಾಚಾರಗಳ ರಾಜಧಾನಿ' ಎಂದು ಬಿಜೆಪಿ ನಾಯಕರನ್ನು ಕೆಣಕಲಾಗಿದೆ ಕೂಡ. ಉತ್ತರ ಪ್ರದೇಶದ ದಲಿತ ಬಾಲಕಿ ಅತ್ಯಾಚಾರ ಘಟನೆಯನ್ನು ಉದಾಹರಣೆಯಾಗಿ ಇಟ್ಟುಕೊಂಡು ಈ ಟ್ವೀಟ್ ಮಾಡಿದೆ ಕರ್ನಾಟಕ ಕಾಂಗ್ರೆಸ್ ಘಟಕ. ಟ್ವೀಟ್ ಬಗ್ಗೆ ಪರ-ವಿರೋಧದ ಚರ್ಚೆ ಜೋರಾಗಿದೆ.

Congress alleged against Uttar Pradesh model

'ದಲಿತ ಬಾಲಕಿ ಮೇಲೆ ಅತ್ಯಾಚಾರ'

'ಅತ್ಯಾಚಾರ, ಅನಾಚಾರಗಳ ರಾಜಧಾನಿ ಎಂದೇ ಖ್ಯಾತಿ ಪಡೆದ ಉತ್ತರ ಪ್ರದೇಶವು @BJP4Karnatakaಗೆ ಮಾದರಿಯಂತೆ. ಉನ್ನಾವೋದಲ್ಲಿ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದೂ ಅಲ್ಲದೆ ಆಕೆಯ ಶೆಡ್ (ಮನೆ)ಗೆ ಬೆಂಕಿ ಹಚ್ಚಿ ಕುಟುಂಬವನ್ನು ಸುಟ್ಟು ವಿಕೃತಿ ಮೆರೆದಿದ್ದಾರೆ. ಯುಪಿಯ ಎನ್ಕೌಂಟರ್, ಬುಲ್ಡೋಜರ್‌ಗಳು ಅತ್ಯಾಚಾರಿಗಳಿಗೆ ಅನ್ವಯವಾಗದೇ?' ಎಂದು ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಪೇಜ್‌ನಲ್ಲಿ ಪ್ರಶ್ನೆ ಕೇಳಿ ಟ್ವೀಟ್ ಪೋಸ್ಟ್ ಮಾಡಲಾಗಿದೆ.

'ಬಿಜೆಪಿ ನೀಡುವ ಗಿಫ್ಟ್ ಕೂಡ ಕಳಪೆ'

'ಮತದಾರರ ಓಲೈಕೆಗಾಗಿ ಬಿಜೆಪಿಗರು ನೀಡುವ ಆಮಿಷದ ಉಡುಗೊರೆಗಳೂ ಕೂಡ ಬಿಜೆಪಿ ಅಡಳಿತದಂತೆ ಕಳಪೆಯಾಗಿರುತ್ತವೆ! ಚಿಕ್ಕಬಳ್ಳಾಪುರದಲ್ಲಿ ಮತದಾರರಿಗೆ ಹಂಚಿದ ಕಳಪೆ ಗ್ಯಾಸ್ ಸ್ಟೌಗಳು ಸ್ಪೋಟಗೊಳ್ಳುತ್ತಿವೆ. ಜನರ ಜೀವದ ಜೊತೆ ಚೆಲ್ಲಾಟ ಆಡುವುದು ಸಚಿವ ಸುಧಾಕರ್ ಅವರಿಗೆ ಕೋವಿಡ್ ಕಾಲದಿಂದಲೂ ಅಭ್ಯಾಸವಾಗಿದೆ. ಜೀವ ಹೋದರೆ ಹೊಣೆ ಯಾರು @mla_sudhakar?' ಎಂದು ಮತ್ತೊಂದು ಟ್ವೀಟ್ ಮೂಲಕ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಕೆಣಕಿದೆ.

ಸುಡಾನ್ ವಿಚಾರ ಮತ್ತೆ ಪ್ರಸ್ತಾಪ!

'ಆಂತರಿಕ ಸಂಘರ್ಷ ಉಂಟಾದ ಸೂಡಾನ್‌ನಲ್ಲಿ ವ್ಯಾಪಾರಕ್ಕೆ ತೆರಳಿದ್ದ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದ ಜನರು ಸಿಲುಕಿಕೊಂಡಿದ್ದಾರೆ. ಅವರನ್ನು ಕರೆತರುವಲ್ಲಿ @BSBommai ಅವರು ಪ್ರಯತ್ನ ಮಾಡುತ್ತಿಲ್ಲವೇಕೆ? ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಿಲ್ಲವೇಕೆ? ಶೋಷಿತ ಸಮುದಾಯಗಳೆಡೆಗಿನ ನಿರ್ಲಕ್ಷ್ಯವೇ? ಅಥವಾ ಚುನಾವಣೆಯಲ್ಲಿ ಬ್ಯುಸಿಯೇ?' ಎಂದು ಪ್ರಶ್ನಿಸುವ ಮೂಲಕ ಚುನಾವಣೆ ಹೊತ್ತಲ್ಲೇ ಮತ್ತೊಂದು ಬಾಂಬ್ ಸಿಡಿಸಿದೆ ಕಾಂಗ್ರೆಸ್. ಇಷ್ಟರ ಜೊತೆಗೆ ಹಗರಣಗಳ ಆರೋಪವನ್ನೂ ಹೊರಿಸಿ ಟ್ವೀಟ್ ಮಾಡಿದೆ ಕಾಂಗ್ರೆಸ್.

'ಸರ್ಕಾರೀ ಹುದ್ದೆಗಳಿಗೆ ರೇಟ್ ಫಿಕ್ಸ್!'

'ಕರ್ನಾಟಕದ ಸರ್ಕಾರೀ ಹುದ್ದೆಗಳ ನೇಮಕಾತಿಗೆ ಒಂದೊಂದು ಹುದ್ದೆಗೆ ಇಂತಿಷ್ಟು ಎಂದು ರೇಟ್, ವರ್ಗಾವಣೆಗೂ ರೇಟ್ ಫಿಕ್ಸ್. ಇದು ಬಿಜೆಪಿ ಸರ್ಕಾರದ ಸಾಧನೆ. ಪ್ರಾಮಾಣಿಕ ಯುವಕರು ಉದ್ಯೋಗಕ್ಕಾಗಿ ಕಷ್ಟಪಡುತ್ತಿರುವಾಗ ಬಿಜೆಪಿಗರು ನೇಮಕಾತಿಯನ್ನು ಹಣ ಮಾಡುವ ದಂಧೆ ಮಾಡಿಕೊಂಡಿದ್ದು ಈ ರಾಜ್ಯದ ದುರಂತ' ಎಂದು ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ ಕಾಂಗ್ರೆಸ್. 'ಜೊತೆಗೆ ಪಿಎಸ್‌ಐ ಹುದ್ದೆಗೆ 80 ಲಕ್ಷ, ಪ್ರಾಧ್ಯಾಪಕ ಹುದ್ದೆಗೆ 80 ಲಕ್ಷ, ವರ್ಗಾವಣೆಗೆ 50 ಲಕ್ಷದಿಂದ 1 ಕೋಟಿ' ಎಂದು ಆರೋಪಿಸಿದೆ ಕಾಂಗ್ರೆಸ್.

ಹೀಗೆ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಿಗೆ ಬಿಜೆಪಿ ಕೂಡ ಟ್ವೀಟ್ ಮೂಲಕವೇ ಉತ್ತರ ನೀಡುತ್ತಿದೆ. ಈ ಮೂಲಕ ಚುನಾವಣೆ ಹೊತ್ತಲ್ಲಿ ಆರೋಪ-ಪ್ರತ್ಯಾರೋಪ ಬಲು ಜೋರಾಗಿದೆ. ಸೋಷಿಯಲ್ ಮೀಡಿಯಾ ಮಂದಿ ಈ ಪೋಸ್ಟ್‌ಗಳ ಬಗ್ಗೆ ಚರ್ಚೆಯನ್ನೂ ಆರಂಭಿಸಿದ್ದಾರೆ. ಪರ-ವಿರೋಧದ ಮಾತುಗಳ ನಡುವೆ ಸೋಷಿಯಲ್ ಮೀಡಿಯಾ ಕೂಡ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ವೇದಿಕೆ ಒದಗಿಸಿದೆ.

ಒಟ್ಟಾರೆ ಮತದಾನಕ್ಕೆ ಕೌಂಟ್‌ಡೌನ್ ಶುರುವಾಗಿರುವ ಹೊತ್ತಲ್ಲೇ ಟ್ವೀಟ್ ವಾರ್ ಜೋರಾಗಿದೆ. ಇಷ್ಟೆಲ್ಲದರ ನಡುವೆ ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಚುನಾವಣಾ ಅಧಿಸೂಚನೆ ಏಪ್ರಿಲ್ 13ರ ಗುರುವಾರ ಪ್ರಕಟವಾಗಿದೆ. ಸರ್ಕಾರಿ ರಜೆ ದಿನ ಹೊರತುಪಡಿಸಿ ಏಪ್ರಿಲ್ 20ರ ತನಕ ನಾಮಪತ್ರ ಸಲ್ಲಿಕೆ ಮಾಡಬಹುದು. ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಂದೇ ಎರಡೂ ಪಕ್ಷಗಳ ರಾಜಕೀಯ ಭವಿಷ್ಯವೂ ನಿರ್ಧಾರವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+