ಬಿಜೆಪಿ ಭರವಸೆಗಳೆಲ್ಲವೂ ಸುಳ್ಳಿನ ಕಂತೆ: ಕಾಂಗ್ರೆಸ್
ಬೆಂಗಳೂರು: ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಂತೆ ವಿರೋಧ ಪಕ್ಷಗಳಿಗೆ ಅಸ್ತ್ರ ಸಿಕ್ಕಿದೆ. ಅದ್ರಲ್ಲೂ ಇಷ್ಟುದಿನ ವಿರೋಧ ಪಕ್ಷಗಳ ಉಚಿತ ಉಡುಗೊರೆ ಟೀಕಿಸುತ್ತಿದ್ದ ಬಿಜೆಪಿ, ಅದೇ ಉಚಿತ ಉಡುಗೊರೆ ಮೂಲಕ ಮತ ಪಡೆಯಲು ಹೊರಟಿದೆ ಎಂಬ ಆರೋಪವನ್ನ ವಿಪಕ್ಷಗಳು ಮಾಡುತ್ತಿವೆ. ಕಾಂಗ್ರೆಸ್ ಈ ಬಗ್ಗೆ ಟ್ವೀಟ್ ಮಾಡಿ, ಬಿಜೆಪಿ ಭರವಸೆಗಳೆಲ್ಲ ಸುಳ್ಳಿನ ಕಂತೆ ಎಂದಿದೆ.
'ರೈತರ ಸಾಲ ಮನ್ನಾ ಆಗಿಲ್ಲ'
ಬಿಜೆಪಿ ಪ್ರಣಾಳಿಕೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, '"ರೈತರ ಸಾಲ ಮನ್ನಾ ಮಾಡುತ್ತೇವೆ" ಇದು ಬಿಜೆಪಿಯ 2018ರ ಪ್ರಣಾಳಿಕೆಯ ಭರವಸೆಯಾಗಿತ್ತು. ಇಬ್ಬರು ಮುಖ್ಯಮಂತ್ರಿಗಳಾದರು, ಡಬಲ್ ಇಂಜಿನ್ ಸರ್ಕಾರವಿತ್ತು, 4 ವರ್ಷದ ಆಡಳಿತವಿತ್ತು. ರೈತರ ಸಾಲದಲ್ಲಿ ಒಂದೇ ಒಂದು ರೂಪಾಯಿಯನ್ನೂ ಮನ್ನಾ ಮಾಡಲಿಲ್ಲ ಏಕೆ @BJP4Karnataka? ಬಿಜೆಪಿಯ ಭರವಸೆಗಳೆಲ್ಲವೂ ಸುಳ್ಳಿನ ಕಂತೆ ಎನ್ನಲು ಬೇರೆ ಉದಾಹರಣೆ ಬೇಕೇ?' ಎಂದು ಟ್ವೀಟ್ಟರ್ ಪೋಸ್ಟ್ನಲ್ಲಿ ಪ್ರಶ್ನೆ ಕೇಳಿದೆ.
"ರೈತರ ಸಾಲ ಮನ್ನಾ ಮಾಡುತ್ತೇವೆ" ಇದು ಬಿಜೆಪಿಯ 2018ರ ಪ್ರಣಾಳಿಕೆಯ ಭರವಸೆಯಾಗಿತ್ತು.
— Karnataka Congress (@INCKarnataka) May 1, 2023
ಇಬ್ಬರು ಮುಖ್ಯಮಂತ್ರಿಗಳಾದರು,
ಡಬಲ್ ಇಂಜಿನ್ ಸರ್ಕಾರವಿತ್ತು,
4 ವರ್ಷದ ಆಡಳಿತವಿತ್ತು.
ರೈತರ ಸಾಲದಲ್ಲಿ ಒಂದೇ ಒಂದು ರೂಪಾಯಿಯನ್ನೂ ಮನ್ನಾ ಮಾಡಲಿಲ್ಲ ಏಕೆ @BJP4Karnataka?
ಬಿಜೆಪಿಯ ಭರವಸೆಗಳೆಲ್ಲವೂ ಸುಳ್ಳಿನ ಕಂತೆ ಎನ್ನಲು ಬೇರೆ ಉದಾಹರಣೆ ಬೇಕೇ?
'ಗುಜರಿ ವ್ಯಾಪಾರಿಗಳೂ ಖರೀದಿಸಲ್ಲ'
ಹಾಗೇ ಮತ್ತೊಂದು ಟ್ವೀಟ್ನಲ್ಲಿ ಕಾಂಗ್ರೆಸ್, '2018ರ ಪ್ರಣಾಳಿಕೆಯಲ್ಲಿ "ಸ್ತ್ರೀ ಉನ್ನತಿ ನಿಧಿ" ಎಂಬ ಘೋಷಣೆಯ ನೆನಪಿದೆಯೇ @BJP4Karnataka? ನೆನಪಿಲ್ಲ ಎಂದರೆ ಹಿಂದಿನ ಪ್ರಣಾಳಿಕೆಯನ್ನು ತೆರೆದು ನೋಡಿ. ಬಿಜೆಪಿ ಮೊದಲು ತಮ್ಮ ಹಿಂದಿನ ಪ್ರಣಾಳಿಕೆಯ ರಿಪೋರ್ಟ್ ಕಾರ್ಡ್ ನೀಡಿ ಹೊಸ ಭರವಸೆಗಳ ಬಗ್ಗೆ ಮಾತಾಡಲಿ. ಬಿಜೆಪಿಯ ಸುಳ್ಳಿನ ಪ್ರಣಾಳಿಕೆಯನ್ನು ಗುಜರಿ ವ್ಯಾಪಾರಿಗಳೂ ಖರೀದಿಸುವುದಿಲ್ಲ!' ಎಂದು ಬಿಜೆಪಿ ನಾಯಕರನ್ನ ಕೆಣಕಿದೆ.
2018ರ ಪ್ರಣಾಳಿಕೆಯಲ್ಲಿ "ಸ್ತ್ರೀ ಉನ್ನತಿ ನಿಧಿ" ಎಂಬ ಘೋಷಣೆಯ ನೆನಪಿದೆಯೇ @BJP4Karnataka?
— Karnataka Congress (@INCKarnataka) May 1, 2023
ನೆನಪಿಲ್ಲ ಎಂದರೆ ಹಿಂದಿನ ಪ್ರಣಾಳಿಕೆಯನ್ನು ತೆರೆದು ನೋಡಿ.
ಬಿಜೆಪಿ ಮೊದಲು ತಮ್ಮ ಹಿಂದಿನ ಪ್ರಣಾಳಿಕೆಯ ರಿಪೋರ್ಟ್ ಕಾರ್ಡ್ ನೀಡಿ ಹೊಸ ಭರವಸೆಗಳ ಬಗ್ಗೆ ಮಾತಾಡಲಿ.
ಬಿಜೆಪಿಯ ಸುಳ್ಳಿನ ಪ್ರಣಾಳಿಕೆಯನ್ನು ಗುಜರಿ ವ್ಯಾಪಾರಿಗಳೂ ಖರೀದಿಸುವುದಿಲ್ಲ!
'ಖಾಲಿ ಸಿಲಿಂಡರ್ಗಳನ್ನೂ ಕೊಟ್ಟಿಲ್ಲ ಬಿಜೆಪಿ!'
ಮತ್ತೊಂದು ಕಡೆ ಬಿಜೆಪಿ ಉಚಿತವಾಗಿ ಗ್ಯಾಸ್ ಸಿಲಿಂಡರ್ ಬಗ್ಗೆಯೂ ಕಾಂಗ್ರೆಸ್ ಟ್ವೀಟ್ ಮೂಲಕ ಅಸ್ತ್ರ ಪ್ರಯೋಗಿಸಿದೆ. 'ಯುಪಿ, ಗೋವಾಗಳಲ್ಲೂ ಬಿಜೆಪಿ 3 ಉಚಿತ ಸಿಲಿಂಡರ್ ನೀಡುವ ಭರವಸೆಯನ್ನು ನೀಡಿತ್ತು. ಆದರೆ ಅಧಿಕಾರಕ್ಕೇರಿದ ನಂತರ ಆ ರಾಜ್ಯಗಳಲ್ಲಿ ಗ್ಯಾಸ್ ಇರುವ ಸಿಲಿಂಡರ್ ಇರಲಿ, ಕನಿಷ್ಠ ಖಾಲಿ ಸಿಲಿಂಡರ್ಗಳನ್ನೂ ಕೊಟ್ಟಿಲ್ಲ ಬಿಜೆಪಿ! ಅದೇ ನಾಟಕವನ್ನು ಕರ್ನಾಟಕದಲ್ಲಿ ಪ್ರದರ್ಶನ ಹಮ್ಮಿಕೊಂಡಿದೆ ಅಷ್ಟೇ! ಇದೂ ಕೂಡ ಗ್ಯಾಸ್ ಸಬ್ಸಿಡಿ ಎಂಬ ಜುಮ್ಲಾದಂತೆಯೇ!' ಎಂದು ಬಿಜೆಪಿ ವಿರುದ್ಧ ಆರೋಪಿಸಿದೆ ಕಾಂಗ್ರೆಸ್.
ಯುಪಿ, ಗೋವಾಗಳಲ್ಲೂ ಬಿಜೆಪಿ 3 ಉಚಿತ ಸಿಲಿಂಡರ್ ನೀಡುವ ಭರವಸೆಯನ್ನು ನೀಡಿತ್ತು.
— Karnataka Congress (@INCKarnataka) May 1, 2023
ಆದರೆ ಅಧಿಕಾರಕ್ಕೇರಿದ ನಂತರ ಆ ರಾಜ್ಯಗಳಲ್ಲಿ ಗ್ಯಾಸ್ ಇರುವ ಸಿಲಿಂಡರ್ ಇರಲಿ, ಕನಿಷ್ಠ ಖಾಲಿ ಸಿಲಿಂಡರ್ಗಳನ್ನೂ ಕೊಟ್ಟಿಲ್ಲ ಬಿಜೆಪಿ!
ಅದೇ ನಾಟಕವನ್ನು ಕರ್ನಾಟಕದಲ್ಲಿ ಪ್ರದರ್ಶನ ಹಮ್ಮಿಕೊಂಡಿದೆ ಅಷ್ಟೇ!
ಇದೂ ಕೂಡ ಗ್ಯಾಸ್ ಸಬ್ಸಿಡಿ ಎಂಬ ಜುಮ್ಲಾದಂತೆಯೇ!
'ಕಿವಿ ಮೇಲೆ ಪ್ಲಾಸ್ಟಿಕ್ ಹೂವು'
ಮತ್ತೊಂದು ಕಡೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿರುವ ವಸತಿ ಯೋಜನೆ ಬಗ್ಗೆಯೂ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 'ವಸತಿ ರಹಿತರಿಗೆ 10 ಲಕ್ಷ ಮನೆ ಎನ್ನುವುದು ಬಿಜೆಪಿಯ ಮತ್ತೊಂದು ಕಿವಿ ಮೇಲೆ ಇಡಲು ತಯಾರಾದ ಪ್ಲಾಸ್ಟಿಕ್ ಹೂವು! ಹಿಂದಿನ ಪ್ರಣಾಳಿಕೆಯಲ್ಲೂ ಇದನ್ನೇ ಹೇಳಿದ್ದರು, ಈಗಲೂ ಇದನ್ನೇ ಹೇಳಿದ್ದಾರೆ. ಆದರೆ 4 ವರ್ಷದ ಅಧಿಕಾರದಲ್ಲಿ ಕೊನೆ ಪಕ್ಷ 4 ಮನೆಗಳನ್ನೂ ಮಂಜೂರು ಮಾಡಲಿಲ್ಲ. ವಸತಿ ಯೋಜನೆಗೆ ಕೇಂದ್ರದ ಅನುದಾನವನ್ನೂ ತರಲಿಲ್ಲ.' ಎಂದು ಆರೋಪಿಸಿದೆ.

ಬಡವರಿಗೆ 'ನಂದಿನಿ' ಉಚಿತ!
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಈ ಬಾರಿ ಸಾಕಷ್ಟು ಉಚಿತ ಉಡುಗೊರೆ ನೀಡುವುದಾಗಿ ಆಶ್ವಾಸನೆ ನೀಡಿದೆ. ಈ ಬಾರಿ ಪ್ರಣಾಳಿಕೆಯಲ್ಲಿ ಬಿಜೆಪಿ, ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ 3 ಉಚಿತ ಅಡುಗೆ ಅನಿಲ ಸಿಲಿಂಡರ್ ನೀಡುವ ಭರವಸೆ ನೀಡಿದೆ. ಜೊತೆಗೆ BPL ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ಉಚಿತ, 5 ಕೆಜಿ ತಿಂಗಳಿಗೆ ಸಿರಿಧಾನ್ಯ ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ಅರ್ಧ ಲೀಟರ್ ನಂದಿನಿ ಹಾಲು ಉಚಿತವಾಗಿ ನೀಡುವ ವಿಚಾರದ ಸುತ್ತ ಬಿಸಿಬಿಸಿ ಚರ್ಚೆ ಆರಂಭವಾಗಿದೆ.
ಚುನಾವಣೆಗೆ ಕೌಂಟ್ಡೌನ್ ಶುರುವಾಗಿರುವ ಸಂದರ್ಭದಲ್ಲೇ ಬಿಜೆಪಿ ಪ್ರಣಾಳಿಕೆ ರಿಲೀಸ್ ಮಾಡಿದೆ. ಇನ್ನು ಕಾಂಗ್ರೆಸ್ ಈ ಪ್ರಣಾಳಿಕೆಗೆ ಕೌಂಟರ್ ಕೊಡುತ್ತಿದೆ. ಚುನಾವಣೆಯಲ್ಲಿ ಇದೆಲ್ಲಾ ಯಾವ ರೀತಿ ವರ್ಕೌಟ್ ಆಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ಮೇ 10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಕೂಡ ಪ್ರಕಟವಾಗಲಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications