ಪಕ್ಷೇತರ ಶಾಸಕರಿಗಾಗಿ ಬಡಿದಾಟ: ಕೈ-ಕೈ ಮಿಲಾಯಿಸಿದ ಕಾರ್ಯಕರ್ತರು
ಬೆಂಗಳೂರು, ಜುಲೈ 23: ಪಕ್ಷೇತರ ಶಾಸಕರು ತಂಗಿರುವ ರೇಸ್ ಕೋರ್ಸ್ ರಸ್ತೆಯ ನಿತೇಶ್ ಅಪಾರ್ಟ್ಮೆಂಟ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ಪ್ರಾರಂಭಿಸಿದ್ದು, ನಂತರ ಬಿಜೆಪಿ ಕಾರ್ಯಕರ್ತರು ಬಂದು ಪರಸ್ಪರ ಕೈ-ಕೈ ಮಿಲಾಯಿಸಿದ್ದಾರೆ.
ಪಕ್ಷೇತರ ಶಾಸಕರು ತಂಗಿರುವ ನಿತೇಶ್ ಅಪಾರ್ಟ್ಮೆಂಟ್ ಒಳಕ್ಕೆ ನುಗ್ಗಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಕೆಲವೇ ಕ್ಷಣಗಳಲ್ಲಿ ಅಲ್ಲಿಗೆ ಬಿಜೆಪಿ ಕಾರ್ಯಕರ್ತರು ಸಹ ಆಗಮಿಸಿದರು. ನಂತರ ಇಬ್ಬರ ನಡುವೆ ಗಲಾಟೆ ಆರಂಭವಾಯಿತು.
ಪೊಲೀಸರ ಸಮ್ಮುಖದಲ್ಲಿಯೇ ಕಾರ್ಯಕರ್ತರು ಪರಸ್ಪರ ಕೈ-ಕೈ ಮಿಲಾಯಿಸಿದರು. ಪರಿಸ್ಥಿತಿಯು ಹದ್ದು ಮೀರಿದ್ದು, ಪೊಲೀಸರು ಬಹಳ ಕಷ್ಟಪಟ್ಟು ಕಾರ್ಯಕರ್ತರನ್ನು ತಹಬಂದಿಗೆ ತರುವ ಯತ್ನದಲ್ಲಿ ನಿರತರಾಗಿದ್ದಾರೆ.

ಪಕ್ಷೇತರ ಶಾಸಕರಾದ ಎಚ್.ನಾಗೇಶ್ ಮತ್ತು ಆರ್.ಶಂಕರ್ ಅವರು ನಿತೇಶ್ ಅಪಾರ್ಟ್ಮೆಂಟ್ನಲ್ಲಿಯೇ ಇದ್ದಾರೆ ಎನ್ನಲಾಗಿದ್ದು, ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭವಾಗಿ ಮತಕ್ಕೆ ಹಾಕುವ ಕೆಲವೇ ನಿಮಿಷದ ಮುಂಚೆ ಸದನಕ್ಕೆ ಬರಲಿದ್ದಾರೆ.
ಈ ಮಾಹಿತಿ ದೊರೆತ ಕೂಡಲೇ ಕಾಂಗ್ರೆಸ್ನ ಇವಾನ್ ಡಿಸೋಜಾ ನೇತೃತ್ವದಲ್ಲಿ ಕಾರ್ಯಕರ್ತರು ಅಪಾರ್ಟ್ಮೆಂಟ್ ಮುಂದೆ ಜಮಾಯಿಸಿ ಘೋಷಣೆಗಳನ್ನು ಕೂಗಿದರು. ಅಪಾರ್ಟ್ಮೆಂಟ್ ಒಳಗೆ ನುಗ್ಗಲು ಸಹ ಯತ್ನಿಸಿದರು. ಅದೇ ಸಮಯದಲ್ಲಿ ಅಲ್ಲಿಗೆ ಬಿಜೆಪಿ ಕಾರ್ಯಕರ್ತರು ಸಹ ಆಗಮಿಸಿದರು. ಹಾಗಾಗಿ ಎರಡೂ ಗುಂಪುಗಳ ನಡುವೆ ಗಲಾಟೆ ಸಂಭವಿಸಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications