ಹೊಸಕೋಟೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಂತಿಮ?
ಬೆಂಗಳೂರು, ಅಕ್ಟೋಬರ್ 02 : ಚುನಾವಣಾ ಆಯೋಗ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕ್ಷೇತ್ರ ಉಪ ಚುನಾವಣೆ ರಾಜ್ಯದ ಗಮನ ಸೆಳೆದಿದೆ. ಎಂಟಿಬಿ ನಾಗರಾಜ್ ಸೋಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಎಂಟಿಬಿ ನಾಗರಾಜ್ 2018ರ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ್ದ ಅವರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ.
"ನನ್ನ ಎದೆಯಲ್ಲಿ ಈಗ ಸಿದ್ದರಾಮಯ್ಯ ಇಲ್ಲ. ಅವರನ್ನು ಪಕ್ಕಕ್ಕೆ ಇಟ್ಟಿದ್ದೇನೆ. ನನ್ನ ಎದೆಯಲ್ಲಿ ಈಗ ಕ್ಷೇತ್ರದ ಮತದಾರರು ಇದ್ದಾರೆ" ಎಂದು ಹೇಳಿರುವ ಎಂಟಿಬಿ ನಾಗರಾಜ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿಗಳನ್ನು ನಡೆಸುತ್ತಿದ್ದಾರೆ. ಹೊಸಕೋಟೆಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಉಪ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ ನೀಡಿದೆ.
ಡಿಸೆಂಬರ್ 5ರಂದು ನಿಗದಿಯಾಗಿರುವ ಹೊಸಕೋಟೆ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಟಿಕೆಟ್ಗೆ ಭಾರಿ ಪೈಪೋಟಿ ನಡೆಯುತ್ತಿದೆ. ಮತ್ತೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಿದ್ದು, ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಲು ತಂತ್ರ ರೂಪಿಸುತ್ತಿದೆ.

ಪದ್ಮಾವತಿ ಸುರೇಶ್ ಅಭ್ಯರ್ಥಿ
ಪದ್ಮಾವತಿ ಸುರೇಶ್ ಹೊಸಕೋಟೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಪದ್ಮಾವತಿ ಅವರು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಪತ್ನಿ. ಕಾಂಗ್ರೆಸ್ ನಾಯಕರು ಉಪ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ಕೃಷ್ಣ ಬೈರೇಗೌಡ ಉಸ್ತುವಾರಿ
ಮಾಜಿ ಸಚಿವ ಕೃಷ್ಣ ಬೈರೇಗೌಡ ಹೊಸಕೋಟೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಜೊತೆಗೆ ಬೈರತಿ ಸುರೇಶ್ ಅವರು ಸಹ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಪಣ ತೊಟ್ಟಿದ್ದಾರೆ.

ಬಿಜೆಪಿ ಟಿಕೆಟ್ ಯಾರಿಗೆ?
ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಎಂಟಿಬಿ ನಾಗರಾಜ್, ಶರತ್ ಬಚ್ಚೇಗೌಡ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಅನರ್ಹ ಶಾಸಕರಿಗೆ ಟಿಕೆಟ್ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಟಿಕೆಟ್ಗಾಗಿ ಶರತ್ ಬಚ್ಚೇಗೌಡ ಪಟ್ಟು ಹಿಡಿದಿದ್ದಾರೆ.

ಚುನಾವಣಾ ಪ್ರಚಾರ ಆರಂಭ
ಹೊಸಕೋಟೆ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಕಾಂಗ್ರೆಸ್ ಉಪ ಚುನಾವಣೆ ಪ್ರಚಾರಕ್ಕೆ ಚಾಲನೆ ಕೊಟ್ಟಿದೆ. ಎಂಟಿಬಿ ನಾಗರಾಜ್ಗೆ ಕ್ಷೇತ್ರದಲ್ಲಿ ಸೋಲುಣಿಸಬೇಕು ಎಂದು ಕಾಂಗ್ರೆಸ್ ನಾಯಕರು ತಂತ್ರ ರೂಪಿಸುತ್ತಿದ್ದಾರೆ.
-
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications