ಕುಸುಮಾ ಬಯೊಡೇಟಾದಲ್ಲಿ ಪತಿ ದಿ. ಡಿ.ಕೆ. ರವಿ ಪ್ರಸ್ತಾಪವೇ ಇಲ್ಲ!
ಬೆಂಗಳೂರು, ಅ. 07: ಅಚ್ಚರಿ ಎಂಬಂತೆ ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಸುಮಾ ಹನುಮಂತಪ್ಪ ಅವರು ತಮ್ಮ ವ್ಯಕ್ತಿ ಚಿತ್ರಣವನ್ನು ಕೆಪಿಸಿಸಿ ವಾಟ್ಸಪ್ ಗ್ರೂಪ್ನಲ್ಲಿ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಂತೆಯೆ ಓದುಗರಿಗೆ ಅವರ ಬಯೊಡೆಟಾವನ್ನು ಒದಗಿಸುತ್ತಿದ್ದೇವೆ. ವಿಪರ್ಯಾಸ ಎಂದರೆ ಪತಿ, ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ದಿ. ಡಿ.ಕೆ. ರವಿ ಅವರಬ ಕುರಿತು ಯಾವುದೇ ಉಲ್ಲೇಖವನ್ನು ಕುಸುಮಾ ಹನುಮಂತಪ್ಪ ಅವರು ಮಾಡಿಲ್ಲ. ತಮ್ಮ ವಿದ್ಯಾಭ್ಯಾಸ, ಸಮಾಜ ಸೇವೆ ಸೇರಿದಂತೆ ತಮ್ಮ ವೈಯಕ್ತಿಕ ಮಾಹಿತಿಯನ್ನು ಅವರು ಕೊಟ್ಟಿದ್ದಾರೆ.
ಆದರೆ ಎಲ್ಲಿಯೂ ಕೂಡ ದಿ. ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಪತ್ನಿ ಎಂದು ಬರೆದುಕೊಂಡಿಲ್ಲ. ಇದು ಇಡೀ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಪತಿ ಡಿ.ಕೆ. ರವಿ ಅವರ ಹೆಸರನ್ನು ಪ್ರಸ್ತಾಪಿಸದಿರಬಹುದು ಎಂಬುದರ ಮುನ್ಸೂಚನೆ ಎನ್ನಲಾಗುತ್ತಿದೆ. ಹಾಗಾದ್ರೆ ಅವರ ಬಯೊಡೇಟಾದಲ್ಲಿ ಏನಿದೆ? ಬದಲಾವಣೆ ಮಾಡದೆ ಅವರೆ ಕೊಟ್ಟಿರುವಂತೆ ನಿಮ್ಮ ಮುಂದಿದೆ, ಓದಿ.

ಕುಸುಮಾ ಅವರ ಪರಿಚಯ
ಸಮಾಜ ಸೇವೆ ಹಾಗೂ ರಾಜಕೀಯ ಒಂದೇ ನಾಣ್ಯದ ಎರಡು ಮುಖಗಳು. ಆ ನಾಣ್ಯದ ಪರ್ಯಾಯ ಪದವಾಗಲು ರಾಜಕೀಯ ರಂಗಕ್ಕೆ ಧುಮುಕಿರುವ ಕುಸುಮಾ ಎಚ್ ಅವರು ಇದೀಗ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ.
ಸುಶಿಕ್ಷಿತ ಯುವಸಮುದಾಯ ರಾಜಕೀಯಕ್ಕೆ ಬರಬೇಕು, ಅವರಿಂದ ಬದಲಾವಣೆ, ಸಮಾಜದ ಸುಧಾರಣೆ ಸಾಧ್ಯ ಎಂಬ ಮಾತು ಪದೇಪದೇ ಕೇಳಿಬರುತ್ತದೆ. ಕುಸುಮಾ ಅವರು ಈ ಮಾತಿಗೆ ಅನ್ವರ್ಥವಾಗಿದ್ದಾರೆ.

ಕುಸುಮಾ ಅವರ ಸಮಾಜ ಸೇವೆ
ಯುವ, ವಿದ್ಯಾವಂತ, ಶಿಕ್ಷಣ ಹಾಗೂ ಸಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಕುಸುಮಾ ಅವರು ಸಮಾಜ ಸುಧಾರಣೆಗೆ ಆಧುನಿಕ ಚಿಂತನೆ ಉಳ್ಳವರು. ರಾಜಕೀಯ ರಂಗದಲ್ಲಿ ಏನಾದರೂ ಸಾಧಿಸಬೇಕೆಂಬ ಹಂಬಲ ಹೊಂದಿರುವರು. ರಾಜಕೀಯ ಹಿನ್ನೆಲೆ ಇರುವ ಕುಟುಂಬದಿಂದ ಬಂದಿರುವುದು ಅವರಿಗೆ ಪ್ಲಸ್ ಪಾಯಿಂಟ್.
ಬೆಂಗಳೂರಿನಲ್ಲಿ 1989ರ ಜೂನ್ 6 ರಂದು ಜನಿಸಿದ ಕುಸುಮಾ ಅವರು ಜಾತ್ಯಾತೀತ ಜನತಾದಳ ಮುಖಂಡರಾದ ಹನುಮಂತರಾಯಪ್ಪ ಅವರ ಪುತ್ರಿ. 2010ರಲ್ಲಿ ಡಾ.ಅಂಬೇಡ್ಕರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದ ಕುಸುಮಾ ಅವರು, 2018ರಲ್ಲಿ ಯೂನಿವರ್ಸಿಟಿ ಆಫ್ ಮ್ಯಾಸಚೂಸೆಟ್ಸ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಎಂ.ಎಸ್) ಪದವಿ ಪಡೆದಿದ್ದಾರೆ.

ಸ್ವಯಂ ಸೇವಾ ಸಂಸ್ಥೆಯಲ್ಲಿ ಕೆಲಸ
ಬೆಂಗಳೂರಿನ ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿರುವ ಕುಸುಮಾ ಅವರು 2016ರಿಂದ 'ನಿರಾಂತಕ' ಸ್ವಯಂ ಸೇವಾ ಸಂಸ್ಥೆಯಲ್ಲಿ ಪ್ರವರ್ತಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಮಾಜ ಸೇವೆಯ ಜತೆಗೆ ಓದು, ಬರವಣಿಗೆಯಂತಹ ಹವ್ಯಾಸಗಳು ಕುಸುಮಾ ಅವರದ್ದಾಗಿದೆ.
ನಿರಾತಂಕ ಸ್ವಯಂ ಸೇವಾ ಸಂಘದಲ್ಲಿ ನೊಂದ ವೃದ್ಧರಿಗೆ ಮತ್ತು ಮಹಿಳೆಯರ ಪರವಾಗಿ ಕಾರ್ಯ ನಿರ್ವಹಿಸಿರುವ ಕುಸುಮಾ ಅವರು ಈಗ ರಾಜಕೀಯ ಪ್ರವೇಶಿಸಿ ಜನ ಸೇವೆಗೆ ಮುಂದಾಗಿದ್ದಾರೆ. ಚುನಾವಣಾ ಕಣದಲ್ಲಿ ಆ ಸೇವೆಯ ಮತ್ತೊಂದು ಮೆಟ್ಟಿಲು ಏರಲು ಉತ್ಸುಕರಾಗಿದ್ದಾರೆ.
Recommended Video

ಸೋನಿಯಾ ಗಾಂಧಿ ಅವರ ಆಯ್ಕೆ
ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಬೇಕೆಂಬ ಅವರ ಆಕಾಂಕ್ಷೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈಗ ನೀರೆರಿದ್ದಾರೆ. ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಸದಾ ಮುಂದು ಎಂಬುದಕ್ಕೆ ಇದೊಂದು ನಿದರ್ಶನ ಎಂದು ಕೆಪಿಸಿಸಿ ವಾಟ್ಸಪ್ ಗ್ರೂಪ್ನಲ್ಲಿ ಹಂಚಿಕೊಂಡಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications