ಉರುಳು ಸೇವೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ!
ಬೆಂಗಳೂರು, ಅ. 26: ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಪ್ರಚಾರದ ವೈಖರಿ ಬದಲಾಗುತ್ತಿದೆ. ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ನಗರ ದೇವತೆ ರಾಜರಾಜೇಶ್ವರಿ ದೇವಿಯ ಮೊರೆ ಹೋಗಿದ್ದಾರೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಕುಸುಮಾ ಅವರು ಉರುಳು ಸೇವೆ ಮಾಡಿದರು.
ಉರುಳು ಸೇವೆ ಮಾಡಿದ ಬಳಿಕ ಮಾತನಾಡಿರುವ ಕುಸುಮಾ ಹೆಚ್ ಅವರು, ದೇಶದ ಒಳಿತಿಗಾಗಿ, ರಾಜ್ಯದ ಒಳಿತಿಗಾಗಿ, ರಾಜರಾಜೇಶ್ವರಿ ನಗರ ಕ್ಷೇತ್ರದ ಒಳಿತಿಗಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ಉರುಳು ಸೇವೆ ಸಲ್ಲಿಸಿದ್ದೇನೆ. ದೇಶದಲ್ಲಿ ಕೊರೊನಾ ವೈರಸ್ ಹಾವಳಿ ನಿವಾರಣೆ ಆಗಲಿ ಮತ್ತು ದುಷ್ಟರನ್ನ ಶಿಕ್ಷಸಿ ಶಿಷ್ಟರನ್ನ ರಕ್ಷಿಸು ಎಂದು ದೇವತೆಯನ್ನು ಪ್ರಾರ್ಥಿಸಿದೆ ಎಂದು ಹೇಳಿದ್ದಾರೆ.

ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ದಿ. ಡಿ.ಕೆ. ರವಿ ಅವರ ಪತ್ನಿ ಕುಸುಮಾ ಎಚ್ ಅವರು ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಒತ್ತಾಸೆಯಂತೆ ಸ್ಪರ್ಧೆ ಮಾಡಿರುವ ಕುಸುಮಾ ಅವರು ಕ್ಷೇತ್ರದಾದ್ಯಂತ ಪ್ರಚಾರ ಮಾಡುತ್ತಿದ್ದಾರೆ.












Click it and Unblock the Notifications