'ಕಾಂಗ್ರೆಸ್ ಬಣ್ಣ ಇಡೀ ಜಗತ್ತಿನ ಎದುರು ಬಯಲಾಗಿದೆ'
ಬೆಂಗಳೂರು, ಡಿ. 15: ವಿಧಾನ ಪರಿಷತ್ನಲ್ಲಿ ಪ್ರತಿಪಕ್ಷ ವರ್ತಿಸಿದ ರೀತಿ ಇಡೀ ಭಾರತೀಯ ಸಂಸದೀಯ ವ್ಯವಸ್ಥೆಯನ್ನು ಹಾಳು ಮಾಡುವ ರೀತಿಯಲ್ಲಿದೆ. ಕಾಂಗ್ರೆಸ್ ಬಣ್ಣ ಏನೆಂಬುದು ಇಡೀ ಜಗತ್ತಿಗೆ ಜಗಜ್ಜಾಹೀರಾಯಿತು ಎಂದು ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಟೀಕಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿಎಂ, ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುವ ಮೇಲ್ಮನೆಯ ಘನತೆಯನ್ನು ಕಾಂಗ್ರೆಸ್ ಹಾಳು ಮಾಡಿದೆ. ಇದು ಅತ್ಯಂತ ಹೇಯ ಹಾಗೂ ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.
ಭಾರತ ಸ್ವಾತಂತ್ರ್ಯ ಬಂದ ನಂತರ ದೇಶದಲ್ಲಿ ಮೊದಲ ಸರಕಾರ ರಚಿಸಿದ ಪಕ್ಷ, ರಾಜ್ಯದಲ್ಲೂ ಮೊದಲ ಸರಕಾರ ರಚಿಸಿದ ಪಕ್ಷ, ವಯಸ್ಸಿನಲ್ಲಿ ಶತಮಾನ ದಾಟಿದ ಪಕ್ಷವಾದ ಕಾಂಗ್ರೆಸ್ ಇವತ್ತು ಅದೇ ಪ್ರಜಾಪ್ರಭುತ್ವದ ಸಾಕ್ಷಿಯಾಗಿ ಪ್ರಜಾಪ್ರಭುತ್ವ ಹಾಗೂ ಸಂಸದೀಯ ಮೌಲ್ಯಗಳನ್ನು ಸಮಾಧಿ ಮಾಡಿದೆ. ಇದು ಅತ್ಯಂತ ನೋವಿನ ಸಂಗತಿ.

ಕಾಂಗ್ರೆಸ್ ಪ್ರಜಾಪ್ರಭುತ್ವದ ಪರ ಎಂದು ಕೊಚ್ಚಿಕೊಳ್ಳುತ್ತದೆ. ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಆಗಿದ್ದವರು. ಹಾಗಿದ್ದರೂ ಅವರು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಬೆಲೆ ನೀಡಲಿಲ್ಲ. ಸಭಾಪತಿ ಅವರ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಯಾಗದಂತೆಯೇ ಅವರು ಕುಮ್ಮಕ್ಕು ನೀಡಿದರು. ಇದು ಖಂಡಿತಾ ಸರಿಯಲ್ಲ.
ಕಾಂಗ್ರೆಸ್ ಹೇಳಿಕೇಳಿ ಗೂಂಡಾ ಸಂಸ್ಕೃತಿಗೆ ಹೆಸರಾದ ಪಕ್ಷ. ಅನೇಕ ವರ್ಷಗಳಿಂದ ಇದನ್ನೇ ಮಾಡಿಕೊಂಡು ಬಂದಿದೆ. ವಿಧಾನ ಪರಿಷತ್ತಿನಲ್ಲೂ ಅದನ್ನೇ ಮಾಡಿದೆ. ಈಗಾಗಲೇ ಆ ಪಕ್ಷಕ್ಕೆ ಜನರು ತಕ್ಕಶಾಸ್ತಿ ಮಾಡಿದ್ದಾರೆ. ಅದರ ಪರಿಣಾಮವೇ ಭಾರತವು ಕಾಂಗ್ರೆಸ್ ಮುಕ್ತ ದೇಶವಾಗುತ್ತಿದೆ. ಇದೀಗ ಕಾಂಗ್ರೆಸ್ ತನ್ನ ಭಂಡತನದಿಂದ ಆ ಕೆಲಸ ಇನ್ನಷ್ಟು ಬೇಗ ಆಗುವಂತೆ ತಾನೇ ನೋಡಿಕೊಳ್ಳುತ್ತಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ಸಂಸದೀಯ ನಡವಳಿಕೆಯಲ್ಲಿ ಅತ್ಯಂತ ಕೆಟ್ಟ ಸಂಪ್ರದಾಯಗಳಿಗೆ ನಾಂದಿ ಹಾಡಿರುವ ಕಾಂಗ್ರೆಸ್ ಮುಂದೆ ಅದರ ಪರಿಣಾಮವನ್ನು ಎದುರಿಸಲಿದೆ ಎಂದು ಡಾ. ಅಶ್ವಥ್ ನಾರಾಯಣ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications