ದೇವರು-ಹಿಂದು ಬಗೆಗಿನ ಟೀಕೆಗಳೇ ಕಾಂಗ್ರೆಸ್ ಅವನತಿಗೆ ಕಾರಣವಾಗುತ್ತವೆ: ಬಿಜೆಪಿ ಭವಿಷ್ಯ
ಬೆಂಗಳೂರು, ಜನವರಿ 17: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಕಾಂಗ್ರೆಸ್ನ ಈ ಹೇಳಿಕೆಗಳು ಅದರ ಅವನತಿಯ ಅಡಿಗಲ್ಲುಗಳಾಗಿವೆ. ದೇವರನ್ನು ಆಟಿಕೆ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷ ಬಾಲಿಶತನ ತೋರಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು.
ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಕಾಂಗ್ರೆಸ್ನವರಿಗೆ ರಾಮ ಸೀತೆ ಎಲ್ಲರೂ ಟೂರಿಂಗ್ ಟಾಕೀಸ್ ಬೊಂಬೆಗಳಂತೆಯೇ ಕಾಣುತ್ತಾರೆ. ಹಿಂದೆ ಇವರೇ ರಾಮನನ್ನು ಕಾಲ್ಪನಿಕ ವ್ಯಕ್ತಿ, ಜನ್ಮ ಪ್ರಮಾಣ ಪತ್ರ ಇಲ್ಲ ಎಂದಿದ್ದರು.'

ಗುಜರಾತ್ನ ಸೋಮನಾಥ ದೇವಾಲಯ ಪುನರಜ್ಜೀವನಗೊಂಡಾಗ ಅದಕ್ಕೆ ಪ್ರಧಾನಿ ನೆಹರು ಹೋಗಲಿಲ್ಲ. ಮುಸ್ಲಿಮರನ್ನು ಓಟ್ ಬ್ಯಾಂಕ್ ಮಾಡಿಕೊಂಡು, ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸುವ ಗುಣ ಕಾಂಗ್ರೆಸ್ನ ರಕ್ತದಲ್ಲೇ ಇದೆ. ವಕೀಲರಾಗಿರುವ ಸಿಎಂ ಸಿದ್ದರಾಮಯ್ಯ ಅವರೇ ಸುಪ್ರಿಂ ಕೋರ್ಟ್ ತೀರ್ಪಿಗೆ ಬೆಲೆ ಕೊಡುವುದಿಲ್ಲ ಎನ್ನುತ್ತಾರೆ ಎಂದು ಅವರು ವಾಗ್ದಾಳಿ ನಡೆಸಿದರು.
ಬರ ಪ್ರದೇಶಕ್ಕೆ ಸಿಎಂ ಹೋಗಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಮಾನ ನಿಲ್ದಾಣದ ಕಾರ್ಯಕ್ರಮದಲ್ಲಿ ಆರಾಮವಾಗಿ ಗೊರಕೆ ಹೊಡೆಯುತ್ತಿದ್ದರು. ಸಿದ್ದರಾಮಯ್ಯ ನಿದ್ರೆ ಮಾಡುವ ವ್ಯಂಗ್ಯಚಿತ್ರಗಳು ಹರಿಡಾಡುತ್ತಿವೆ. ಆದರೆ ಪ್ರಧಾನಿ ಎಲ್ಲೂ ನಿದ್ರೆ ಮಾಡುವುದಿಲ್ಲ ಎಂದರು.

ಮುಖ್ಯಮಂತ್ರಿ ಬರ ಪ್ರದೇಶಗಳಿಗೆ ಹೋಗಿ ಕೆಲಸ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ತಾವು ನಿದ್ರೆ ಮಾಡುವ ಚಿತ್ರವನ್ನು ಫ್ರೇಮ್ ಮಾಡಿಕೊಂಡು ಮನೆ ಮುಂದೆ ಹಾಕಿಕೊಳ್ಳಲಿ. ಇವರ ಹೆಸರೇ ನಿದ್ದೆರಾಮಯ್ಯ ಎಂದು ಬ್ರ್ಯಾಂಡ್ ಆಗಿದೆ ಎಂದು ವ್ಯಂಗ್ಯವಾಡಿದರು.
ಅಪರಾಧಿಗಳಿಗೆ ಪ್ರೀತಿ ತೋರಿಸುತ್ತಿರುವ ಕಾಂಗ್ರೆಸ್
ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಮಣಿಸಬೇಕಿದೆ. ಕಳೆದ ಏಳು ತಿಂಗಳಲ್ಲಿ ಕೊಲೆ, ಸುಲಿಗೆ ಹೆಚ್ಚಿದ್ದು, ಅಪರಾಧಿಗಳಿಗೆ ಪ್ರೀತಿ ತೋರಿಸಲಾಗುತ್ತಿದೆ. ಡಿಕೆ ಶಿವಕುಮಾರ್ ಅವರೇ ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಬ್ರದರ್ ಎಂದು ಹೇಳಿಕೊಳ್ಳುತ್ತಾರೆ. ಕೆಜಿ ಹಳ್ಳಿ ಡಿಜೆ ಹಳ್ಳಿ ಪ್ರಕರಣ ವಾಪಸ್ನಂತಹ ಘಟನೆ ನಡೆಯುತ್ತಿದೆ. ಕಾಂಗ್ರೆಸ್ನ ಮೃದು ಧೋರಣೆಯಿಂದ ಅಪರಾಧಿಗಳು ಎದ್ದು ಕುಳಿತಿದ್ದಾರೆ.
ಇನ್ನೂ ಹಾವೇರಿ ಜಿಲ್ಲೆಯ ಹಾನಗಲ್ನ ಅತ್ಯಾಚಾರ ಪ್ರಕರಣದಲ್ಲೂ ಸರ್ಕಾರ ಕಠಿಣ ಕ್ರಮ ವಹಿಸಿಲ್ಲ. ಕಾನೂನು ಸುವ್ಯವಸ್ಥೆಯ ನಿರ್ವಹಣೆಯಲ್ಲಿ ಪೂರ್ಣ ವಿಫಲವಾಗಿದೆ ಎಂದು ಅವರು ಸರ್ಕಾರದ ವಿರುದ್ಧ ದೂರಿದರು.
ಬಣರಾಜಕೀಯ ಇದೆ ಎಂದ ಬಿಜೆಪಿ
ಒಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್, ಮತ್ತೊಂದು ಕಡೆ ಜಿ.ಪರಮೇಶ್ವರ, ಇನ್ನೊಂದೆಡೆ ಸತೀಶ್ ಜಾರಕಿಹೊಳಿಗೆ ಜೈ ಎನ್ನುವ ಗ್ಯಾಂಗ್ ಇದೆ. ಅಭಿವೃದ್ಧಿಯ ಕಾರ್ಯ ಇಲ್ಲದೆ ಜನರು ರೊಚ್ಚಿಗೆದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮಗ ಶಾಸಕರೂ ಅಲ್ಲ. ಅವರು ತಂದೆಯ ಬಗ್ಗೆ ಕುರುಡು ಪ್ರೇಮ ತೋರಿಸಬೇಕಿಲ್ಲ ಎಂದು ಹೇಳಿದರು.
ಸದ್ಯ ಕರ್ನಾಟಕ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಲ್ಲ ಯೋಜನೆ ಮುಂದೂಡಲಾಗುತ್ತಿದೆ. ನೌಕರರ ವೇತನ ಹೆಚ್ಚಳ ಕೂಡ ಮಾಡಿಲ್ಲ. ಸರ್ಕಾರ ದಿವಾಳಿಯಾಗಿ ಜನರು ಇನ್ನಷ್ಟು ಕಷ್ಟ ಪಡಬೇಕಾಗುತ್ತದೆ. ಯುಪಿಎ ಸರ್ಕಾರವಿದ್ದಾಗ ಪರಿಹಾರ ಸಿಗಲು ಬಹಳ ತಡವಾಗಿದ್ದು, ಆಗ ಮಾತ್ರ ಕಾಂಗ್ರೆಸ್ ನಾಯಕರು ಸುಮ್ಮನಿದ್ದರು. ಈಗ ಕೇಂದ್ರದ ಮೇಲೆ ದೂರು ಹೇಳುತ್ತಿದ್ದಾರೆ. ಹಿಂದಿನ ಯುಪಿಎಗೆ ಹೋಲಿಸಿದರೆ ಮೋದಿ ಸರ್ಕಾರ ಶೇ.243 ರಷ್ಟು ಹೆಚ್ಚು ಪರಿಹಾರ ನೀಡಿದೆ ಎಂದರು.
ಲೋಕಸಭಾ ಚುನಾವಣೆಗೆ ತಂತ್ರ: ಚರ್ಚೆ
ರಾಜ್ಯದಲ್ಲಿ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಕುರಿತು ನೀಲಿನಕ್ಷೆ ತಯಾರಾಗಿದೆ. ಹಿರಿಯ ನಾಯಕರು ಇದಕ್ಕೆ ಅಗತ್ಯ ಕ್ರಮಗಳನ್ನು ವಹಿಸಿದ್ದಾರೆ. ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಿದ್ದೇನೆ ಎಂದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ











Click it and Unblock the Notifications