ಎಂಟಿಬಿ ನಾಗರಾಜ್, ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ದೂರು
ಬೆಂಗಳೂರು, ನವೆಂಬರ್ 21: ಹೊಸಕೋಟೆಯಲ್ಲಿ ಬಿಜೆಪಿ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದ ಮೇಲೆ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ಎಂಟಿಬಿ ನಾಗರಾಜ್ ಆಪರೇಷನ್ ಕಮಲದಲ್ಲಿ ಹಣ ಪಡೆದಿಲ್ಲ: ಸಿದ್ದರಾಮಯ್ಯ
Recommended Video
ಚುನಾವಣಾ ಅಧಿಕಾರಿಗಳಿಗೆ ಕಾಂಗ್ರೆಸ್ ಮುಖಂಡ ಹೇಮಂತ್ ಕುಮಾರ್ ದೂರು ನೀಡಿದ್ದಾರೆ. ಇದೇ ನವೆಂಬರ್ 18ರಂದು ಎಂಟಿಬಿ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯಿಂದ 60 ಮೀಟರ್ ದೂರದಲ್ಲೇ ಅನುಮತಿ ಪಡೆಯದೇ ಬೃಹತ್ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಎಂಟಿಬಿ ನಾಗರಾಜ್ ಕೋಟ್ಯಧಿಪತಿಯಾಗಿದ್ದು ಹೇಗೆ?
ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಗೆಲ್ಲಿಸಿದರೆ 24 ಗಂಟೆಯಲ್ಲಿ ಮಂತ್ರಿ ಆಗುತ್ತಾರೆ. ಹೋಸಕೋಟೆಗೆ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿದ್ದೀನಿ ಎಂದು ಸಿಎಂ ಮತದಾರರಲ್ಲಿ ಪ್ರಭಾವ ಬೀರಿದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ. ಉಪ ಚುನಾವಣೆ ಡಿಸೆಂಬರ್ 5ರಂದು 15 ಕ್ಷೇತ್ರಹಳಿಗೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರಬೀಳಲಿದೆ.