ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಕಾಂಗ್ರೆಸ್ ನಡಿಗೆ: ನಗರದಲ್ಲಿ ಟ್ರಾಫಿಕ್ ಜಾಮ್
ಬೆಂಗಳೂರು, ಆ. 15: ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಕಾಂಗ್ರೆಸ್ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ನಡಿಗೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಇದರಿಂದ ಬೆಂಗಳೂರು ಹೃದಯ ಭಾಗದಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಬೆಂಗಳೂರಿನ ಮೆಜೆಸ್ಟಿಕ್ ಸುತ್ತ ಮುತ್ತ ಪ್ರದೇಶದಲ್ಲಿ ಗಂಟೆಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಿಜೆಪಿ ಸರ್ಕಾರದ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಸೆಡ್ಡು ಹೊಡೆಯಲು ರಾಜ್ಯದಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಆಯೋಜಿಸಿತ್ತು. ಬೆಂಗಳೂರಿನಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸ್ವಾತಂತ್ರ್ಯ ಕಡೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಸುಮಾರು ಒಂದು ಲಕ್ಷ ಕ್ಕೂ ಅಧಿಕ ಮಂದಿ ಜಮಾಯಿಸಿದ್ದರು.
ಮೆಜೆಸ್ಟಿಕ್ನ ರಾಯಣ್ಣ ವೃತ್ತದಿಂದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದವರೆಗೂ ಪಾದಯಾತ್ರೆ ಮಾಡಿದರು. ಸಾವಿರಾರು ಮಂದಿ ಪಾಲ್ಗೊಂಡಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆದರೆ, ಪಾದಯಾತ್ರೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್ ಸುತ್ತಮುತ್ತಲ ಪ್ರದೇಶ ಟ್ರಾಫಿಕ್ ಜಾಮ್ ಆಗಿತ್ತು. ವಾಹನ ಸವಾರರು ಪರದಾಡಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಾಹನ ಸಂಚಾರ ಕಡಿಮೆ ಇದ್ದರೂ ಸಹ ಗಂಟೆಗಟ್ಟಲೇ ಕಾರ್ಯಕರ್ತರು ರಸ್ತೆಯಲ್ಲಿ ನಡೆದುಕೊಂಡು ಹೋದ ಪರಿಣಾಮ ವಾಹನ ದಟ್ಟಣೆ ನಿರ್ಮಾಣವಾಗಿತ್ತು. ಸ್ವಾತಂತ್ರ್ಯ ನಡಿಗೆ ಸಂಚಾರ ದಟ್ಟಣೆ ಸಂಜೆ ವಾಹನ ಸಂಚಾರದ ಮೇಲೂ ಪರಿಣಾಮ ಬೀರಿತ್ತು.

ರಾಜ್ಯದ ನಾನಾ ಕಡೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ನಾಗಸಂದ್ರ, ಕೆಂಗೇರಿ ಮೆಟ್ರೋ ರೈಲಿನಲ್ಲಿ ಕಾರ್ಯಕರ್ತರು ಪ್ರಯಾಣಿಸಿದರು. ಮೆಟ್ರೋ ರೈಲು ನಿಲ್ದಾಣಗಳಲ್ಲಿ ಜನ ಸಂದಣಿ ಉಂಟಾಗಿತ್ತು. ರೈಲು ಹತ್ತಿಇಳಿಯಲು ಪ್ರಯಾಣಿಕರು ಹರಸಾಹಸ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪ್ರಯಾಣಿಕರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಕೂಡ ಹರಸಾಹಸ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಸ್ವಾತಂತ್ರ್ಯ ನಡಿಗೆ ಉದ್ದೇಶ:
ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆದ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕರೆ ಕೊಟ್ಟಿತ್ತು. ದೇಶವ್ಯಾಪ್ತಿ ದೊಡ್ಡ ಸಂಭ್ರಮ ಉಂಟು ಮಾಡಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಹ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ ನಡೆಸಿ ಲಕ್ಷಾಂತರ ಜನರನ್ನು ಸೇರಿಸುವ ಮೂಲಕ ಗಮನ ಸೆಳೆದಿದೆ. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಸಾರಥ್ಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ












Click it and Unblock the Notifications