MLA Munirathna: ಅತ್ಯಾಚಾರ, ಮಹಿಳೆ ಮೇಲೆ ಮೂತ್ರ ಮಾಡಿದ್ದ ಮುನಿರತ್ನ! ಕಾಂಗ್ರೆಸ್ ಹೇಳಿದ್ದೇನು?
ಬೆಂಗಳೂರು, ಮೇ 24: ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಜೀವ ಬೆದರಿಕೆ ಸೇರಿದಂತೆ ವಿವಿಧ ದೂರು ದಾಖಲಾಗಿವೆ. ಮುನಿರತ್ನ ಹಾಗೂ ಸಹಚರರ ವಿರುದ್ಧದ ಮಹಿಳೆ ಮೇಲಿನ ಅತ್ಯಾಚಾರದ ದೂರು ದಾಖಲಾಗಿದ್ದು, ಪ್ರಕರಣವನ್ನು ಎಸ್ಐಟಿಗೆ ನೀಡಲಾಗಿದೆ. ಇದರ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಮುನಿರತ್ನ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಲಿ ನಡೆಸಿದೆ. ಮುನಿರತ್ನ ಮೇಲಿನ ಪ್ರಕರಣಳ ಪಟ್ಟಿ ನೀಡಿದೆ.
ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ಕಾಂಗ್ರೆಸ್ ವಿಡಿಯೋ ಪೋಸ್ಟ್ ಮಾಡಿದೆ. ಈ ಬಿಜೆಪಿ ಶಾಸಕ ಮುನಿರತ್ನ ಪ್ರಧಾನಿ ಮೋದಿಗೆ ಆಪ್ತ ಎಂದು ಪರಿಗಣಿಸಲಾಗಿದೆ. ಮುನಿರತ್ನ ಸಹಚರರೊಂದಿಗೆ ಸೇರಿ ಮಾಡಬಾರದ್ದನ್ನು ಮಾಡಿದ್ದಾರೆ ಎಂದು ಕಟುವಾಗಿ ಕಾಂಗ್ರೆಸ್ ಆರೋಪಿಸಿದೆ.

* ಮುನಿರತ್ನ ಮಹಿಳೆಯ ಬಟ್ಟೆಗಳನ್ನು ಹರಿದು ಹಾಕಿದರು
* ಸ್ನೇಹಿತರೊಂದಿಗೆ ಮುನಿರತ್ ಮಹಿಳೆ ಕಾರ್ಯಕರ್ತೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದರು.
* ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದರು
* ಮಾರಕ ವೈರಸ್ ಚುಚ್ಚುಮದ್ದು ನೀಡಿದರು
* ಇಡೀ ಕುಟುಂಬವನ್ನೇ ಕೊಲ್ಲುವುದಾಗಿ ಬೆದರಿಕೆ ಹಾಕಿದರು
ಬಿಜೆಪಿ ಶಾಸಕನ ವಿರುದ್ಧ ಇಷ್ಟೆಲ್ಲ ನಡೆದರೂ ನರೇಂದ್ರ ಮೋದಿ ಅವರು ಮಾತ್ರ ಎಂದಿನಂತೆಯೇ ಮೌನವಾಗಿದ್ದಾರೆ. ಇದೇ ಬಿಜೆಪಿಯ ನಡವಳಿಕೆ, ಸ್ವಭಾವ ಮತ್ತು ನೈಜ ಮುಖ ಎಂದು ಟಾಂಗ್ ನೀಡಿದೆ. ಮುನಿರತ್ನ ನಡೆಸಿದ್ದಾರೆ ಎನ್ನಲಾದ ಅತ್ಯಾಚಾರ ಪ್ರಕರಣವನ್ನು ಎಸ್ಐಟಿಗೆ ವಹಿಸುತ್ತಿದ್ದಂತೆ ಮುನಿರತ್ನ ತಲೆಮರೆಸಿಕೊಂಡಿದ್ದಾರೆ ಅಂತಲೂ ಹೇಳಲಾಗುತ್ತಿದೆ. ಮುನಿರತ್ನ ಎಸ್ಐಟಿ ವಿಚಾರಣೆ ಎದುರಿಸಬೇಕಿದೆ. ಈ ಮಧ್ಯೆ ಕಾಂಗ್ರೆಸ್ ಮಾಡಿರುವ ಆರೋಪಗಳು ಹೆಚ್ಚು ಚರ್ಚೆ ಆಗುತ್ತಿವೆ.
ಮುನಿರತ್ನಗೆ ಬಂಧನ ಭೀತಿ
ಪ್ರಕರಣ ಎಸ್ಐಟಿಗೆ ವಹಿಸುತ್ತಿದ್ದಂತೆ ಶಾಸಕ ಮುನಿರತ್ನಗೆ ಬಂಧನ ಭೀತಿ ಶುರುವಾಗಿದೆ. ಅತ್ಯಾಚಾರ, ಜಾತಿ ನಿಂದನೆ ಸೇರಿದಂತೆ ಕೆಲವು ಆರೋಪ ಎದುರಿಸುತ್ತಿರುವ ಮುನಿರತ್ನ ಸದ್ಯ ಗೌಪ್ಯ ಸ್ಥಳದಲಿದ್ದಾರೆ ಅಂತಲೂ ಹೇಳಲಾಗುತ್ತಿದೆ. ಎಸ್ಐಟಿ ಮುನಿರತ್ನರನ್ನು ನಿರಂತವಾಗಿ ವಿಚಾರಣೆಗೆ ಒಳಪಡಿಸಲಿದೆ. ಕೋರ್ಟ್ ಬಳಿಕ ಮನವಿ ಮಾಡಿ ಕಸ್ಟಡಿಗೆ ಪಡೆಯುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ರಾಜಕೀಯವಾಗಿ ತನ್ನ ವಿರೋಧಿಗಳನ್ನು ಹಣಿಯಲು ಅವರಿಗೆ ಏಡ್ಸ್ ಪೀಡಿತ ರೋಗಿಯ ರಕ್ತ ಚುಚ್ಚಲು ಮುಂದಾಗಿದ್ದ ಎನ್ನಲಾಗಿದೆ. ಅದಕ್ಕಾಗಿ ಮೂರು ಮಂದಿಗೆ ಮುನಿರತ್ನ ಸೂಚನೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಏಡ್ಸ್ ರಕ್ತವನ್ನು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಚುಚ್ಚಲು ಮುಂಗಾಗಿದ್ದರು ಎಂಬ ವಿಷಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications