ರಾಷ್ಟ್ರಧ್ವಜ ತಿರುಚುವಷ್ಟರ ಮಟ್ಟಿಗೆ ಜಿಹಾದಿಗಳಿಗೆ ಕಾಂಗ್ರೆಸ್ ಸರ್ಕಾರ 'ಶಕ್ತಿ' ತುಂಬಿದೆ: ಬಿಜೆಪಿ
ಬೆಂಗಳೂರು, ಅಕ್ಟೋಬರ್ 08: ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲ್ಲು ತೋರಾಟ ನಡೆದಿತ್ತು. ಅದರ ಬೆನ್ನಲ್ಲೆ ಜಿಹಾದಿಗಳು ರಾಷ್ಟ್ರಧ್ರಜಕ್ಕೆ ಅಪಮಾನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಇಂತವರಿಗೆ ಕಾಂಗ್ರೆಸ್ ಸರ್ಕಾರ ಶಕ್ತಿ ತುಂಬಿದೆ ಎಂದು ಕರ್ನಾಟಕ ಬಿಜೆಪಿ ಕಿಡಿ ಕಾರಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯು ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆ ರಾಜಕಾರಣವು, ರಾಷ್ಟ್ರಧ್ವಜವನ್ನೇ ತಿರುಚುವಷ್ಟರ ಮಟ್ಟಿಗೆ ಜಿಹಾದಿಗಳಿಗೆ "ಶಕ್ತಿ" ತುಂಬಿದೆ ಎಂದು ಗುಡುಗಿದೆ.

ರಾಷ್ಟ್ರಧ್ವಜವನ್ನೇ ತಿರುಚುವಂತಹ ದೇಶದ್ರೋಹದ ಕೆಲಸವನ್ನು ಮಾಡಿದರೂ, ಅಪರಾಧಿಗಳನ್ನು ಇದುವರೆಗೂ ಬಂಧಿಸದಿರುವುದು, ಕಾಂಗ್ರೆಸ್ ಸರ್ಕಾರದ ಹೇಡಿತನಕ್ಕೆ ಇದು ಸಾಕ್ಷಿಯಾಗಿದೆ. ಗೃಹ ಸಚಿವ ಜಿ.ಪರಮೇಶ್ವರ ಅವರು ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಜಿಹಾದಿಗಳನ್ನು ಬಂಧಿಸುತ್ತಿರೋ ಅಥವಾ ಅವರಿಗೂ "ಅಮಾಯಕರು" ಎಂಬ ಪಟ್ಟ ಕಟ್ಟುತ್ತಿರೋ ಎಂದು ಬಿಜೆಪಿ ಪ್ರಶ್ನಿಸಿದೆ.
ತಡವಾಗಿ ಬೆಳಕಿಗೆ ಬಂದ ಘಟನೆ
ಶಿವಮೊಗ್ಗದ ಘಟನೆ, ಪೊಲೀಸರ ಮೇಲಿನ ಮುಸ್ಲಿಂ ಸಮುದಾಯದ ಯುವಕರ ಗುಂಪು ಕಲ್ಲು ತೂರಾಟದ ಘಟನೆ ಇನ್ನೂ ಮಾಸಿಲ್ಲ. ಇತ್ತ ಕುಮಟಾದಲ್ಲಿ ಈದ್ ಮಿಲಾದ್ ವೇಳೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕುಮಟಾದ ಮಿರ್ಜಾನಿನಲ್ಲಿ ಸ್ಥಳೀಯ ಜಮಾತುಲ್ ಮುಸ್ಲಿಮೀನ್ ಸಮಿತಿ ನಡೆಸಿದ ಮೆರವಣಿಗೆ ವೇಳೆ ರಾಷ್ಟ್ರಧ್ವಜದ ಅಶೋಕ ಚಕ್ರದ ಜಾಗದಲ್ಲಿ ಚಂದ್ರ ಮತ್ತು ನಕ್ಷತ್ರದ ಚಿತ್ರ ಬರೆದ ಧ್ವಜ ಹಾರಾಡಿಸಲಾಗಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ಹಿನ್ನೆಲೆಯಲ್ಲಿ ಕುಮಟಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆಗೆ ಇಳಿದಿದ್ದಾರೆ. ಈ ಕುರಿತು ಸರ್ಕಾರ ಆಡಳಿತದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನೂ ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಲಭೆ ನಡೆಸಿದವರು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಾರ್ಯಕರ್ತರು. ಪಿಎಫ್ ಐ ಮೇಲಿನ ಪ್ರಕರಣಗಳನ್ನೆಲ್ಲ ವಾಪಸ್ ಪಡೆದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಋಣವನ್ನು ತೀರಿಸಲು ಅವರೆಲ್ಲ ಈಗ ಹಿಂದೂ ಸಮುದಾಯದ ಮೇಲೆ ಮುಗಿಬಿದ್ದಿದ್ದಾರೆ ಎಂದು ಬಿಜೆಪಿ ದೂರಿದೆ.
ಚುನಾವಣೆಯಲ್ಲಿ PFI ಮಾಡಿದ ಸಹಾಯಕ್ಕೆ ಪ್ರತಿಫಲವೆಂಬಂತೆ, ಕಾಂಗ್ರೆಸ್ ಈಗ ಗಲಭೆಕೋರರನ್ನು ಬಂಧಿಸದೆ, ಅಮಾಯಕ ಹಿಂದೂ ಯುವಕರ ಮೇಲೆ ಸುಳ್ಳು ಕೇಸು ಜಡಿದು, ಜೈಲಿಗಟ್ಟುತ್ತಿದೆ. ಈ ನಡೆಯನ್ನು ಸಹಿಸುವುದಿಲ್ಲ ಎಂದು ಬಿಜೆಪಿ ಗುಡುಗಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು?











Click it and Unblock the Notifications