ATM ಕಾಂಗ್ರೆಸ್ ಸರ್ಕಾರದ ಮುಲಾಜಿನಲ್ಲಿ ರಾಹುಲ್ ಗಾಂಧಿ: ಬೊಮ್ಮಾಯಿ
ಬೆಂಗಳೂರು, ಆಗಸ್ಟ್ 11: ಕಾಂಗ್ರೆಸ್ ಅಗ್ರನಾಯಕ ರಾಹುಲ್ ಗಾಂಧಿ ಕರ್ನಾಟಕದ ಎಟಿಎಂ ಸರ್ಕಾರದ (ATM Sarakara) ಮುಲಾಜಿನಲ್ಲಿದ್ದಾರೆ. ಹೀಗಾಗಿ ಅವರು ಗುತ್ತಿಗೆದಾರರಿಗೆ ಬಿಲ್ ಕೊಡಿಸಲು ಮಧ್ಯ ಪ್ರವೇಶ ಮಾಡುವುದಿಲ್ಲ. ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಶುಕ್ರವಾರ ಈ ಕುರಿತು ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ನಮ್ಮ ಕಾಲದಲ್ಲಿ ಬಿಡುಗಡೆಯಾಗುರುವ 650 ಕೋಟಿ ಯಾಕೆ ಇಟ್ಟುಕೊಂಡಿದ್ದಾರೆ. ತನಿಖೆ ಮಾಡುತ್ತೇವೆ ಅಂತ ಹೇಳಿ ಹಣ ಇಟ್ಟು ಕೊಂಡಿ ದ್ದಾರೆ. ಇದು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಗುತ್ತಿಗೆದಾರರ ಕಡೆಯವರೇ ಆಣೆ ಪ್ರಮಾಣ ಮಾಡುವಂತೆ ಹೇಳಿದ್ದಾರೆ. ಅದನ್ನು ವಿಷಯಾಂತರ ಮಾಡುವ ಬದಲು, ಸರ್ಕಾರ ಗುತ್ತಿಗೆದಾರರ ಹಣ ಬಿಡುಗಡೆ ಮಾಡಲಿ ಎಂದು ಬೊಮ್ಮಾಯಿ ಆಗ್ರಹಿಸಿದರು.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಸಚಿವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ನಿನ್ನೆ ಶಾಂಗ್ರಿಲಾದಲ್ಲಿ ಕಮಿಷನ್ ಮಾತುಕತೆ ನಡೆಯುತ್ತಿದೆ ಅಂತ ಹೇಳಿದ್ದರು. ಅವರ ಮೇಲೆ ಏನು ಒತ್ತಡ ಇದೆಯೋ ಗೊತ್ತಿಲ್ಲ. ಈಗ ಯಾರೂ ಕಮಿಷನ್ ಕೇಳಿಲ್ಲ ಅಂತ ಹೇಳುತ್ತಿದ್ದಾರೆ ಎಂದರು.
ಎಟಿಎಂ ಹೆಸರು ಸತ್ಯ: ಮಧ್ಯಪ್ರವೇಶಕ್ಕೆ 'ರಾಗಾ'ಗಿಲ್ಲ ಆಸಕ್ತಿ
ನಾವು ಮಾರ್ಚ್ ನಲ್ಲಿ ಹಣ ಬಿಡುಗಡೆ ಮಾಡಿದ್ದೇವೆ. ನಾವೇನು ಸುಳ್ಳು ಹೇಳಬೇಕಿಲ್ಲ. ಅವರು ಹಣ ಬಿಡುಗಡೆ ಮಾಡದ ಕಾರಣ ಈಗ ಗುತ್ತಿಗೆದಾರರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಬಳಿ ಓಡಾಡುತ್ತಿದ್ದಾರೆ. ಆಗ ಬಿಬಿಎಂಪಿಯಲ್ಲಿ ತೆರಿಗೆ ಸಂಗ್ರಹ ಮಾಡಿದ್ದಾರೆ. ಅದರಲ್ಲಿ ಗುತ್ತಿಗೆದಾರರ ಹಣ ಕೊಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಲ್ಲಿ ಮಧ್ಯ ಪ್ರವೇಶಿಸಲು ಮನಸಿಲ್ಲ. ಎಟಿಎಂ ಅಂತ ಏನು ಹೆಸರಿದೆಯೋ ಅದು ಸತ್ಯವಾಗಿರುವುದರಿಂದ ಅವರು ರಾಜ್ಯ ಸರ್ಕಾರದ ಮುಲಾಜಿನಲ್ಲಿದ್ದಾರೆ. ಹೀಗಾಗಿ ಅವರು ಇಲ್ಲಿ ಮದ್ಯಪ್ರವೇಶ ಮಾಡಲು ಬರುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಜನರಿಗೆ ಬೇಕಾಗಿರುವ ಕಾಮಗಾರಿ ಮಾಡದಿದ್ದರೆ 'ಬ್ರ್ಯಾಂಡ್ ಬೆಂಗಳೂರು' ಯೋಜನೆ ಯಶಸ್ವಿಯಾಗುವುದಿಲ್ಲ. ನಮ್ಮ ಅವಧಿಗೂ ಹಿಂದಿನಿಂದಲೂ ಬಾಕಿ ಉಳಿದಿದೆ. ನಾವು ಹಿರಿತನದ ಆಧಾರದಲ್ಲಿ ಬಿಲ್ ಪಾವತಿ ಮಾಡಲು ನಿಯಮ ಮಾಡಿದ್ದರಿಂದ ವ್ಯವಸ್ಥಿತವಾಗಿ ಹಣ ಬಿಡುಗಡೆಯಾಗುತ್ತಿತ್ತು.
ಸದ್ಯ ರಾಜ್ಯದ ಕಾಂಗ್ರೆಸ್ ಸರ್ಕಾರ ಇಲ್ಲದ ಸಬೂಬು ಹೇಳದೇ ಗುತ್ತಿಗೆದಾರರ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಸಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications