Inidra Canteen: ಇಂದಿರಾ ಕ್ಯಾಂಟೀನ್ ಪುನಾರಂಭಕ್ಕೆ ಕಾಂಗ್ರೆಸ್ ಸೂಚನೆ, ಬಿಬಿಎಂಪಿಯಿಂದ ಶೀಘ್ರವೇ ಟೆಂಡರ್
ಬೆಂಗಳೂರು, ಮೇ 25: ಬಡವರಿಗೆ ಅತೀ ಕಡಿಮೆ ಬೆಲೆಯಲ್ಲಿ ಅನ್ನ ನೀಡುವ 'ಇಂದಿರಾ ಕ್ಯಾಂಟೀನ್' (Indira Canteen) ಅನ್ನು ಕಡೆಗಣಿಸಿದ್ದ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬೆನ್ನಲ್ಲೆ ಕ್ಯಾಂಟೀನ್ಗಳಿಗೆ ಮತ್ತ ಮರುಜೀವ ಸಿಗಲಿದೆ. ಈ ಸಂಬಂಧ ಅಗತ್ಯ ಸಿದ್ಧತೆಗಳು ಆರಂಭವಾಗಿದೆ.
ಕಾಂಗ್ರೆಸ್ನ ವಿವಿಧ ಯೋಜನೆಗಳಲ್ಲಿ ಒಂದಾದ 'ಇಂದಿರಾ ಕ್ಯಾಂಟೀನ್' ಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನ ಪೂರೈಕೆ ನಿಲ್ಲಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ 2023ರ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದ್ದು, ಇಂದಿರಾ ಕ್ಯಾಂಟೀನ್ ಪುನಾರಂಭಿಸುವಂತೆ ಬಿಬಿಎಂಪಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚನೆ ನೀಡಿದೆ.

ಇದರ ಬೆನ್ನೆಲ್ಲೆ ಇದೀಗ 'ಇಂದಿರಾ ಕ್ಯಾಂಟೀನ್'ಗಳಿಗೆ ಮರುಜೀವ ನೀಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಭರದ ಸಿದ್ಧತೆಗಳನ್ನು ನಡೆಸುತ್ತಿದೆ. ಇಂದಿರಾ ಕ್ಯಾಂಟೀನ್ಗಳ ಅಡುಗೆ ಕೋಣೆಗಳನ್ನು ಕೂಲಂಕಷವಾಗಿ ಪರಿಶೀಲನೆಗೆ ಹಾಗೂ ಪುನಃ ಮೊದಲಿನಂತೆ ಬಡವರಿಗೆ ಕಡಿಮೆ ಬೆಲೆ ಆಹಾರ ತಯಾರಿಸಿ ನೀಡುವಂತೆ ಸಜ್ಜುಗೊಳಿಸಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ.
ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪ್ರತಿಕ್ರಿಯಿಸಿದ್ದು, ಮೊಬೈಲ್ ಕ್ಯಾಂಟೀನ್ಗಳನ್ನು ಮರು ಆರಂಭಿಸುವ ಮತ್ತು ಆಹಾರದ ಗುಣಮಟ್ಟವನ್ನು ಸುಧಾರಿಸುವ ಬಗ್ಗೆ ಶೀಘ್ರದಲ್ಲೇ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಟೆಂಡರ್ ಪ್ರಕ್ರಿಯೆ ಶೀಘ್ರ: ಬೆಲೆ ಕ್ವಾಂಟಿಟಿ ಹೆಚ್ಚಳಕ್ಕೆ ಕ್ರಮ
ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಜಯರಾಮ ರಾಯಪುರ ಅವರು, 'ಇಂದಿರಾ ಕ್ಯಾಂಟೀನ್ ಸೌಲಭ್ಯವನ್ನು ಪ್ರತಿ 243 ವಾರ್ಡ್ ಗಳಿಗೂ ವಿಸ್ತರಿಸಬೇಕು ಎಂಬ ಉದ್ದೇಶವಿದೆ. ಅಲ್ಲದೇ ಮುಖ್ಯವಾಗಿ ಕ್ಯಾಂಟೀನ್ಗಳಲ್ಲಿ ಗುಣಮಟ್ಟದ ಉಪಹಾರ, ಊಟ ನೀಡುವ ಪ್ರಮಾಣ ಹೆಚ್ಚಿಸಬೇಕಿದೆ. ಆದಷ್ಟು ಶೀಘ್ರವೇ ಬಿಬಿಎಂಪಿ ಕ್ಯಾಂಟೀನ್ಳ ಆರಂಭ ಸಂಬಂಧ ಮರು ಟೆಂಡರ್ ಪ್ರಕ್ರಿಯೆ ಆರಂಭಿಸಲಿದೆ ಎಂದು ಅವರು ಮಾಹಿತಿ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 120-130 ಇಂದಿರಾ ಕ್ಯಾಂಟೀನ್ಗಳು ಇವೆ. ಬಿಜೆಪಿ ಅಧಿಕಾರದಲ್ಲಿದ್ದಾಗ 10 ಮೊಬೈಲ್ ಕ್ಯಾಂಟೀನ್ಗಳ ಮುಚ್ಚಿದ್ದವು. ಹಾಲಿ ಕ್ಯಾಂಟೀನ್ಗಳ ಪುನಾರಂಭ ಜೊತೆಗೆ 243 ವಾರ್ಡ್ಗಳಿಗೂ ಕ್ಯಾಂಟೀನ್ ವಿಸ್ತರಣೆಗೆ ಸರ್ಕಾರ ಸಿದ್ಧತೆ ನಡೆದಿದೆ. ಅಲ್ಲದೇ ಆಹಾರದ ಪ್ರಮಾಣ (ಕ್ವಾಂಟಿಟಿ), ಗುಣಮಟ್ಟ ಹೆಚ್ಚಿಸಲಿದೆ. ಇದರಿಂದ ಬೆಲೆ ಸಹ 5-10 ರೂಪಾಯಿ ಹೆಚ್ಚಾಗಬಹುದು ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ












Click it and Unblock the Notifications