Breaking: ಸಚಿವ ಜಿ.ಪರಮೇಶ್ವರಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್!
ಬೆಂಗಳೂರು ಫೆಬ್ರವರಿ 18: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ವಿಚಾರ ಮುನ್ನಲೆಯಲ್ಲೇ ಇದೆ. ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾತುಗಳು ಕೇಳಿ ಬಂದ ಬೆನ್ನಲ್ಲೆ ರಾಜ್ಯ ಗೃಹ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ. ದೆಹಲಿಗೆ ಬಂದು ಭೇಟಿ ಮಾಡುವಂತೆ ಕಾಂಗ್ರೆಸ್ ವರಿಷ್ಠರು ಡಾ.ಜಿ.ಪರಮೇಶ್ವರ ಅವರಿಗೆ ಕರೆ ನೀಡಿದ್ದಾರೆ. ಈ ಕರೆ ಮೇರೆಗೆ ಸಚಿವರು ಮಂಗಳವಾರ ಬೆಳಗ್ಗೆ ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ. ಎಲ್ಲರ ಚಿತ್ತ ಇದೀಗ ದೆಹಲಿ ಅಂಗಳದತ್ತ ನೆಟ್ಟಿದೆ.
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ದಿಂದ ವಿಮಾನ ಮೂಲಕ ದೆಹಲಿಗೆ ಬೆಳಗ್ಗೆ 10.20ಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 1.15ರ ಹೊತ್ತಿಗೆ ಅವರು ದೆಹಲಿ ತಲುಪಲಿದ್ದಾರೆ. ಅಲ್ಲಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜ್ಯ ಉಸ್ತುವಾರಿಗಳು ಸೇರಿದಂತೆ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಬಣ ರಾಜಕೀಯ ಜೋರಾಗಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೂ ಮಾತನಾಡದಂತೆ ಎಚ್ಚರಿಕೆ ನೀಡಿದ್ದರೂ ಸಹ ಸಿಎಂ ಹೆಸರು ಬಳಕೆ ಮುಂದುವರಿದಿದೆ. ಸಿಎಂ ಸಿದ್ದರಾಮಯ್ಯ ಚುನಾವಣೆಗೆ ಬೇಕು ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷದ ಬಲಾವಣೆಗಾಗಿ ಲಾಭಿ ನಡೆಯುತ್ತಿದೆ ಎನ್ನಲಾಗಿದೆ. ಈ ಮಧ್ಯೆ ಸಿಎಂ ಕೆ.ಎನ್ ರಾಜಣ್ಣ, ಎಂಬಿ ಪಾಟೀಲ್ ಮುಂತಾದವರು ಮಾತನಾಡಿದ್ದರು. ಸಿಎಂ ಹೆಸರು ಬಳಸಿದವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ವಿಚಾರಗಳು ಬೂದಿ ಮುಚ್ಚಿದ ಕೆಂಡದಂತಿವೆ.
ಇತ್ತೀಚೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಬೆಂಗಳೂರಿಗೆ ಬಂದು ನಿರಂತರ ಸಭೆ ನಡೆಸಿದ್ದರು. ಒಂದಷ್ಟು ವಿಷಯಗಳನ್ನು ಚರ್ಚಿಸಿ, ಪಕ್ಷದ ನಾಯಕರಿಗೆ, ಹಿರಿಯರಿಗೆ, ಸಚಿವರಿಗೆ ಸೂಕ್ತ ಸಲಹೆ ನೀಡಿದ್ದರು. ಬಹಿರಂಗ ಹೇಳಿಕೆಗೆ ಬ್ರೇಕ್ ಹಾಕಿದ್ದರು. ಅದಾದ ಬಳಿಕವು ಬಣ ರಾಜಕೀಯ ಮುಂದುವರಿದಿತ್ತು. ಈ ಮಧ್ಯೆ ದಲಿತ ಸಮಾವೇಶ ಕುರಿತು ಪೂರ್ವಭಾವಿ ಸಭೆ ಎಂದು ಜಿ.ಪರಮೇಶ್ವರ ಅವರು ಶಾಸಕರು, ಸಚಿವರ ಸಭೆ ಆಯೋಜಿಸಿದ್ದರು. ಆದರೆ ಅದನ್ನು ಮೊಟಕುಗೊಳಿಸಲಾಯಿತು.
ಇದೀಗ ಗೃಹ ಸಚಿವ ಜಿ.ಪರಮೇಶ್ವರ ಅವರೊಬ್ಬರನೇ ದೆಹಲಿಗೆ ಆಹ್ವಾನಿಸಿರುವುದು ರಾಜ್ಯದ ಹಲವು ನಾಯಕರ ಕುತೂಹಲಗಳಿಗೆ ಕಾರಣವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications