ಜಂಟಿ ಪ್ರಚಾರ ಸಮಾವೇಶ: ಬೆಂಗಳೂರಲ್ಲಿ ದೋಸ್ತಿಗಳ ಶಕ್ತಿ ಪ್ರದರ್ಶನ
ಬೆಂಗಳೂರು, ಏಪ್ರಿಲ್ 10: ಬೆಂಗಳೂರಲ್ಲಿ ದೋಸ್ತಿ ಪಕ್ಷಗಳು ಇಂದು ಶಕ್ತಿ ಪ್ರದರ್ಶಿಸಿವೆ. ಜೆಡಿಎಸ್-ಕಾಂಗ್ರೆಸ್ ನಾಯಕರು ಒಟ್ಟಾಗಿ ಕೃಷ್ಣಬೈರೇಗೌಡ ಹಾಗೂ ಬಿ.ಕೆ.ಹರಿಪ್ರಸಾದ್ ಅವರ ಪರವಾಗಿ ಬೃಹತ್ ಪ್ರಚಾರ ಸಮಾವೇಶ ನಡೆಸಿದ್ದಾರೆ.
ದೇವೇಗೌಡ, ಸಿದ್ದರಾಮಯ್ಯ, ಕುಮಾರಸ್ವಾಮಿ, ಶರವಣ ಇನ್ನೂ ಹಲವು ಪ್ರಮುಖ ಮುಖಂಡರು ಬೆಂಗಳೂರು ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ಜಂಟಿಯಾಗಿ ಪ್ರಚಾರ ಸಭೆಯಲ್ಲಿ ಇಂದು ನಡೆಸಿದರು.
ಎಲ್ಲ ನಾಯಕರು ವೇದಿಕೆ ಮೇಲೆ ಪರಸ್ಪರ ಕೈ-ಕೈ ಹಿಡಿದುಕೊಂಡು ಒಗ್ಗಟ್ಟಿನ ಸಂದೇಶವನ್ನು ಕಾರ್ಯಕರ್ತರಿಗೆ ನೀಡಿದರು.

ದೇವೇಗೌಡ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗಿನಿಂದಲೂ ವಿವಿಧ ಕ್ಷೇತ್ರಗಳಲ್ಲಿ ಜಂಟಿಯಾಗಯೇ ಪ್ರಚಾರ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಜಂಟಿ ಸಮಾವೇಶ ಮತ್ತು ಮೆರವಣಿಗೆಗಳಲ್ಲಿ ಈ ಇಬ್ಬರೂ ನಾಯಕರು ಇಂದು ಭಾಗವಹಿಸಿದ್ದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಪ್ರಣಾಳಿಕೆ ಹೊಸ ಬಾಟಲಿಯಲ್ಲಿ ಹಳೆಯ ಮದ್ಯ ಸುರಿದಂತಿದೆ ಎಂದು ಟೀಕಿಸಿದರು. ಬಿಜೆಪಿಯವರು ದಶಕಗಳಿಂದಲೂ ರಾಮಮಂದಿರ ಕಟ್ಟುತ್ತೇವೆ ಎಂದು ಭರವಸೆ ನೀಡುತ್ತಲೇ ಇದ್ದಾರೆ, ಆದರೆ ಈ ವರೆಗೆ ಒಂದು ಕಲ್ಲು ಸಹ ಕದಲಿಸಿಲ್ಲ, ಮಂದಿರಕ್ಕಾಗಿ ಸಂಗ್ರಹಿಸಿದ್ದ ಹಣದ ಲೆಕ್ಕವೂ ಇಲ್ಲ ಎಂದರು.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕೃಷ್ಣಬೈರೇಗೌಡ ಪರ ಮತಯಾಚಿಸಿದ ದೇವೇಗೌಡ ಅವರು, ಬುದ್ಧಿವಂತ, ಸೇವಾ ಮನೋಭಾವ ಹೊಂದಿರುವ, ದೂರದೃಷ್ಟಿಯುಳ್ಳ ವ್ಯಕ್ತಿಯಾದ ಕೃಷ್ಣಬೈರೇಗೌಡ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ











Click it and Unblock the Notifications