ಶಕ್ತಿಸೌಧದ ಮುಂದೆ ಸಿ.ಟಿ. ರವಿ ಹುಟ್ಟಹಬ್ಬದ ಬ್ಯಾನರ್ ಹರಿದ ಕಾಂಗ್ರೆಸ್ ಕಾರ್ಯಕರ್ತೆ ಬಿಂದುಗೌಡ
ಬೆಂಗಳೂರು, ಜುಲೈ 18: ವಿಧಾನಸೌಧದ ಮುಂದೆ ಶಾಸಕ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಜನ್ಮದಿನಕ್ಕೆ ಶುಭವನ್ನು ಕೋರಿ ಹಾಕಲಾಗಿದ್ದ ಬ್ಯಾನರ್ ಕಾಂಗ್ರೆಸ್ ಕಾರ್ಯಕರ್ತೆ ಹರಿದು ಆಕ್ರೋಶವನ್ನು ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಗುರುತಿಸಿಕೊಂಡಿರುವ ಬಿಂದು ಗೌಡ ಸಿ.ಟಿ. ರವಿ ಅವರ ಪೋಸ್ಟರ್ ಅನ್ನು ಕಿತ್ತೆಸೆದಿದ್ದಾರೆ.
ಸಿಟಿ ರವಿಯವರ ಹುಟ್ಟುಹಬ್ಬಕ್ಕೆ ವಿಧಾನಸೌಧದ ಸುತ್ತಮುತ್ತ ಅನಧಿಕೃತವಾಗಿ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ಹಾಕಲಾಗಿತ್ತು. ಶಕ್ತಿ ಸೌಧದ ಮುಂದೆ ಈ ರೀತಿ ಬ್ಯಾನರ್ ಮತ್ತು ಫ್ಲೆಕ್ಸ್ ಹಾಕಲು ಬಿಬಿಎಂಪಿಯು ಅನುಮತಿಯನ್ನು ನೀಡುವುದಿಲ್ಲ. ಆದರೂ, ಫ್ಲೆಕ್ಸ್ಗಳು ರಾರಾಜಿಸುತ್ತಿದ್ದವು. ಇದರಿಂದ ಆಕ್ರೋಶಗೊಂಡು ಬಿಂದುಗೌಡ ಫ್ಲೆಕ್ಸ್ಗಳನ್ನು ಹರಿದು ಹಾಕಿದ್ದಾರೆ.
ಪೂರ್ವ ನಿಯೋಜಿನೆಯಂತೆ ಭಾಸವಾಗುತ್ತಿರುವ ಈ ವಿಡಿಯೋದಲ್ಲಿ ಬಿಂದು ಗೌಡ ಕೃತ್ಯವನ್ನು ಮತ್ತೊಬ್ಬರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ಬ್ಯಾನರ್ ಹಾಕುವುದನ್ನು ಬ್ಯಾನ್ ಮಾಡಿದ್ದರೂ ಸಹ ವಿಧಾನಸೌಧದ ಮುಂದೆ ಕಟ್ಟೋದಿಕ್ಕೆ ಧಮ್ ಬೇಕಲೇ. ಸಿಟಿ ರವಿ ಶೇಮ್ ಆನ್ ಯೂ ಎಂದು ಬಿಂದುಗೌಡ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ.ರವಿಯವನ್ನು ಮೆಚ್ಚಿಸುವ ಸಲುವಾಗಿ ವಿಧಾನಸೌಧದ ಸುತ್ತಮುತ್ತಲು ಹುಟ್ಟುಹಬ್ಬದ ಶುಭವನ್ನು ಕೋರಿ ಬ್ಯಾನರ್ ಹಾಕಿದ್ದರು. ಆದರೆ ಬ್ಯಾನರ್ ಹಾಕಲು ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ ಎನ್ನಲಾಗುತ್ತಿದೆ. ಇದರಿಂದಾಗಿ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸವನ್ನು ಮಾಡುವ ಬಿಂದು ಗೌಡ ಫ್ಲೆಕ್ಸ್ ಹರಿದು ಹಾಕಿರುವುದಕ್ಕೆ ಶಬ್ಬಾಷ್ ಎನ್ನಲಾಗುತ್ತಿದೆ. ವಿಧಾನಸೌಧದ ಮುಂದೆ ಫ್ಲೆಕ್ಸ್ಗೆ ಅನುಮತಿಯನ್ನು ನೀಡಿದ್ದೇ ಆದರೆ ದಿನಕ್ಕೆ ಇಂಥ ನೂರಾರು ಫ್ಲೆಕ್ಸ್ಗಳು ತಲೆಎತ್ತಲಿವೆ.
Recommended Video
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ












Click it and Unblock the Notifications