6 ವರ್ಷಕ್ಕೆ ಒಂದನೇ ತರಗತಿ: ಸರ್ಕಾರದ ಗೊಂದಲದ ನಿರ್ಧಾರಕ್ಕೆ ಕಾಂಗ್ರೆಸ್ ಗರಂ
ಬೆಂಗಳೂರು ಜುಲೈ 28: ಮಕ್ಕಳಿಗೆ 6 ವರ್ಷ ತುಂಬಿದ ಬಳಿಕ ಒಂದನೇ ತರಗತಿ ದಾಖಲಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ವಿರುದ್ಧ ಕಾಂಗ್ರೆಸ್ ಕಿಡಿ ಕಾರಿದೆ. ರಾಜ್ಯದೆಲ್ಲೆಡೆ ಶಾಲಾ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಈ ಆದೇಶಕ್ಕೂ ಮುನ್ನ ಶಿಕ್ಷಣ ಇಲಾಖೆ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದಿಲ್ಲ. ಹೀಗಾಗಿ ಪೋಷಕರನ್ನು ಗೊಂದಲಕ್ಕೆ ದೂಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ರಾಜ್ಯ ಸರ್ಕಾರ 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಮೇ ತಿಂಗಳಿನಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಘೋಷಿಸಿದ್ದು, ಈಗಾಗಲೇ ತ್ರೈಮಾಸಿಕ ಅವಧಿ ಮುಕ್ತಾಯವಾಗಿದೆ. ಈ ಆದೇಶ ಈ ವರ್ಷವೇ ಅನ್ವಯವಾಗುವುದೋ ಅಥವಾ ಮುಂದಿನ ವರ್ಷ ಜಾರಿಯಾಗುತ್ತದಾ ಎಂಬ ಸ್ಪಷ್ಟನೆಯನ್ನೂ ನೀಡಿಲ್ಲ ಎಂದು ಕಾಂಗ್ರೆಸ್ ಕೂ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.
Koo Appರಾಜ್ಯ ಸರ್ಕಾರ 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಮೇ ತಿಂಗಳಿನಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಘೋಷಿಸಿದ್ದು, ಈಗಾಗಲೇ ತ್ರೈಮಾಸಿಕ ಅವಧಿ ಮುಕ್ತಾಯವಾಗಿದೆ. ಈ ಆದೇಶ ಈ ವರ್ಷವೇ ಅನ್ವಯವಾಗುವುದೋ, ಮುಂದಿನ ವರ್ಷ ಜಾರಿಯಾಗುತ್ತದಾ ಎಂಬ ಸ್ಪಷ್ಟನೆಯನ್ನೂ ನೀಡಿಲ್ಲ. -@RameshBabuKPCC - ಕರ್ನಾಟಕ ಕಾಂಗ್ರೆಸ್ (@inckarnataka) 28 July 2022
ಪ್ರಸ್ತುತ ಇರುವ ಕಾನೂನಿನಂತೆ 5 ವರ್ಷ 5 ತಿಂಗಳ ಮಗು ಶಾಲೆಗೆ ದಾಖಲಾತಿ ಪಡೆಯಬಹುದು. ಈಗಾಗಲೇ ರಾಜ್ಯದೆಲ್ಲೆಡೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಲಾಗಿದೆ.
Koo Appಪ್ರಸ್ತುತ ಇರುವ ಕಾನೂನಿನಂತೆ 5 ವರ್ಷ 5 ತಿಂಗಳ ಮಗು ಶಾಲೆಗೆ ದಾಖಲಾತಿ ಪಡೆಯಬಹುದು. ಈಗಾಗಲೇ ರಾಜ್ಯದೆಲ್ಲೆಡೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಈ ಸಂದರ್ಭದಲ್ಲಿ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಲಾಗಿದೆ. - @RameshBabuKPCC - ಕರ್ನಾಟಕ ಕಾಂಗ್ರೆಸ್ (@inckarnataka) 28 July 2022
ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಪರೀಕ್ಷಾ ಮಂಡಳಿಯ ಮೂಲಕ ಖಾಸಗಿ ಸಂಸ್ಥೆ ಬಳಸಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಇಲಾಖೆಯ ಹಣವನ್ನು ವೈಯಕ್ತಿಕ ಹಾಗೂ ಪಕ್ಷದ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿ ಸಚಿವರಿಂದ ಆ ಹಣವನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.