ಆಮ್ ಆದ್ಮಿ ಪಕ್ಷ ಸೇರಿದ ಕಾಂಗ್ರೆಸ್ ಮುಖಂಡ ಬ್ರಿಜೇಶ್ ಕಾಳಪ್ಪ
ಬೆಂಗಳೂರು ಸೆಪ್ಟಂಬರ್ 05: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸುಪ್ರೀಂಕೋರ್ಟ್ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ ಅವರು ಸೋಮವಾರ ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಮುಖಂಡರ ನೇತೃತ್ವದಲ್ಲಿ ಸೇರ್ಪಡೆಗೊಂಡರು.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಕ್ಷದ ಕರ್ನಾಟಕ ಉಸ್ತುವಾರಿ ದಿಲೀಪ್ ಪಾಂಡೆರವರು ಬ್ರಿಜೇಶ್ ಕಾಳಪ್ಪರವರನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.
ನಂತರ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ''ದೇಶದಲ್ಲಿ ಉತ್ತಮ ಬದಲಾವಣೆ ತರಬೇಕೆಂಬ ಹಂಬಲವಿರುವ ನಾಯಕರಲ್ಲಿ ಬ್ರಿಜೇಶ್ ಕಾಳಪ್ಪ ಅವರು ಸಹ ಒಬ್ಬರು. ರಾಜಕೀಯ ಹಾಗೂ ಆಡಳಿತದಲ್ಲಿ ಆಮ್ ಆದ್ಮಿ ಪಾರ್ಟಿಯು ಬದಲಾವಣೆ ತಂದಿರುವುದನ್ನು ಮನಗಂಡು ಅವರು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತಸ ತಂದಿದೆ'' ಎಂದರು.

ಎಎಪಿ ದೇಶಪರ ಕಾಳಜಿವುಳ್ಳವರ ವೇದಿಕೆ
ಜನಪರ ಕಾಳಜಿಯಿರುವವರಿಗೆ ಹಾಗೂ ದೇಶದ ಭವಿಷ್ಯಕ್ಕಾಗಿ ದುಡಿಯುವ ಹಂಬಲ ಇರುವವರಿಗೆ ಎಎಪಿಯು ಉತ್ತಮ ವೇದಿಕೆಯಾಗಿದೆ. ಇದನ್ನು ಇನ್ನಷ್ಟು ನಾಯಕರು ಸದುಪಯೋಗಪಡಿಸಿಕೊಳ್ಳಬೇಕು. ಈ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.

ಮೂರು ಪಕ್ಷದಿಂದ ಸಜ್ಜನ ನಾಯಕರು ಮೂಲೆಗುಂಪು
ಸಜ್ಜನ ನಾಯಕರನ್ನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ನಂತಹ ಪಕ್ಷಗಳು ಮೂಲೆಗುಂಪು ಮಾಡುತ್ತಿವೆ. ಅವುಗಳಿಗೆ ಕಮಿಷನ್ ರೂಪದಲ್ಲಿ ಜನರ ತೆರಿಗೆ ಹಣವನ್ನು ಕೊಳ್ಳೆಹೊಡೆಯುವ ನಾಯಕರು ಬೇಕೇ ವಿನಹ ಪ್ರಾಮಾಣಿಕರು ಬೇಡ. ಹಣಬಲ ಹಾಗೂ ತೋಳು ಬಲವಿಲ್ಲದ ಒಳ್ಳೆಯ ಜನರನ್ನು ಅಧಿಕಾರದಿಂದ ದೂರವಿಡಲು ಆ ಪಕ್ಷಗಳ ನಾಯಕರು ಸದಾ ಯೋಜನೆ ರೂಪಿಸುತ್ತಿರುತ್ತಾರೆ. ಇದರಿಂದಾಗಿ ಅನೇಕ ಸಜ್ಜನ ರಾಜಕಾರಣಿಗಳು ಆಮ್ ಆದ್ಮಿ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಎಎಪಿಯ ಸತ್ಯ ನಿಷ್ಠೆಯ ರಾಜಕಾರಣ ಹಾಗೂ ಕೊಟ್ಟ ಮಾತಿಗೆ ತಪ್ಪದಿರುವ ಗುಣವು ಒಳ್ಳೆಯ ಮನಸ್ಸುಗಳನ್ನು ಆಕರ್ಷಿಸುತ್ತಿದೆ ಎಂದು ಅವರು ತಿಳಿಸಿದರು.

ವಿವಿಧ ರಂಗದಲ್ಲಿ ಅನುಭವ ಹೊಂದಿರುವ ಬ್ರಿಜೇಶ್ ಕಾಳಪ್ಪ
ಬ್ರಿಜೇಶ್ ಕಾಳಪ್ಪನವರು ವಿದ್ಯಾರ್ಥಿಯಾಗಿದ್ದಾಗಲೇ ಸಾರ್ವಜನಿಕ ಜೀವನ ಪ್ರವೇಶಿಸಿ ಬಳಿಕ ಕಾಂಗ್ರೆಸ್ ನಾಯಕರಾದರು. ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಸುಪ್ರೀಂಕೋರ್ಟ್ ವಕೀಲರಾಗಿ, ಪತ್ರಕರ್ತರಾಗಿ ಅನುಭವುಳ್ಳವರು. ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರರಾಗಿ, ಹರಿಯಾಣ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಕಾರ್ಯ ನಿರ್ವಹಿಸಿದ ಸುದೀರ್ಘ ಅನುಭವ ಹೊಂದಿದ್ದಾರೆ.
ಕಾವೇರಿ, ಕೃಷ್ಣಾ, ಮಹದಾಯಿ ನದಿಗಳ ನೀರು ಹಂಚಿಕೆ ವಿವಾದಗಳಿಗೆ ಸಂಬಂಧಿಸಿ ಕರ್ನಾಟಕದ ಪರ ನ್ಯಾಯಾಲಯಗಳಲ್ಲಿ ವಕಾಲತ್ತು ವಹಿಸಿದ್ದಾರೆ. ಯಾವುದೇ ವಿಚಾರವನ್ನು ತಕ್ಷಣ ಗ್ರಹಿಸಿ, ಸೂಕ್ಷ್ಮ ವಿವೇಚನೆಯೊಂದಿಗೆ ಸತ್ಯಾಂಶವನ್ನು ಹೊರತೆಗೆಯುವ ವಿಶೇಷ ಗುಣವನ್ನು ಬ್ರಿಜೇಶ್ ಕಾಳಪ್ಪ ಹೊಂದಿದ್ದಾರೆ ಎಂದು ಪೃಥ್ವಿ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಎಎಪಿ ಗುಣಮಟ್ಟದ ಆಡಳಿತ ತೋರಿಸಿದೆ
ಆಮ್ ಆದ್ಮಿ ಪಕ್ಷ ಸೇರ್ಪಡೆ ನಂತರ ಮಾತನಾಡಿದ ಬ್ರಿಜೇಶ್ ಕಾಳಪ್ಪ, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರವು ಹೊಸಹೊಸ ಜನಪರ ಯೋಜನೆಗಳನ್ನು ನಿರಂತರವಾಗಿ ಜಾರಿಗೆ ತರುತ್ತಿದೆ. ಗುಣಮಟ್ಟ ಆಡಳಿತ ಹೇಗಿರುತ್ತದೆ ಎಂಬುದನ್ನು ಎಎಪಿ ದೇಶಕ್ಕೆ ತೋರಿಸಿಕೊಡುತ್ತಿದೆ. ಜನಸಾಮಾನ್ಯರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದೇ ದುರಾಡಳಿತ ನೀಡುತ್ತಿರುವ ಬಿಜೆಪಿಗೆ ಸೆಡ್ಡು ಹೊಡೆಯುವ ಸಾಮರ್ಥ್ಯವು ಆಮ್ ಆದ್ಮಿ ಪಕ್ಷಕ್ಕಿದೆ. ಮುಂಬರುವ ವಿವಿಧ ಚುನಾವಣೆಗಳಲ್ಲಿ ಎಎಪಿ ಜಯಗಳಿಸಿ ಅಧಿಕಾರ ಹಿಡಿದರೆ ಮಾತ್ರ ದೇಶದ ಭವಿಷ್ಯ ಬಲಗೊಳ್ಳಲಿದೆ ಎಂದು ಹೇಳಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಪಕ್ಷದ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಮಾಜಿ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಪಕ್ಷದ ಮಾಧ್ಯಮ ವಕ್ತಾರ ಕೆ. ಮಥಾಯಿ, ಪಕ್ಷದ ಮುಖಂಡರಾದ ಮೋಹನ್ ದಾಸರಿ, ಸಂಚಿತ್ ಸಹವಾನಿ, ಜಗದೀಶ್ ವಿ ಸದಂ, ಕುಶಲಸ್ವಾಮಿ, ಚನ್ನಪ್ಪಗೌಡ ನಲ್ಲೂರು, ಸುರೇಶ್ ರಾಥೋಡ್, ದರ್ಶನ್ ಜೈನ್ ಮತ್ತಿತರ ನಾಯಕರು, ಕಾರ್ಯಕರ್ತರು ಹಾಗೂ ಬ್ರಿಜೇಶ್ ಕಾಳಪ್ಪರವರ ಅನೇಕ ಬೆಂಬಲಿಗರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications