ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ಕುಮಾರಸ್ವಾಮಿಯನ್ನು ಮಾತಿನಲ್ಲೇ 'ತಿವಿದ' ಚೆಲುವರಾಯಸ್ವಾಮಿ

|
Google Oneindia Kannada News

ಬೆಂಗಳೂರು, ಸೆ 15: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಟೀಕಿಸುವ ಪರಿಪಾಠವನ್ನು, ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಚೆಲುವರಾಯಸ್ವಾಮಿ ಮುಂದುವರಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ, ಒಕ್ಕಲಿಗರ ಸಂಘ ಪ್ರತಿಭಟನಾ ರ‍್ಯಾಲಿಯನ್ನು ಆಯೋಜಿಸಿತ್ತು. " ನನಗೆ ಆಮಂತ್ರಣವಿರಲಿಲ್ಲ" ಎಂದು ಕುಮಾರಸ್ವಾಮಿ ಇದರಲ್ಲಿ ಭಾಗವಹಿಸಿರಲಿಲ್ಲ.

ಮಂಡ್ಯದಲ್ಲಿ ಗೌಡ್ರ ಗದ್ದಲ ಜೋರು: ಅವನೊಬ್ಬ ರಾಜಕೀಯ ವ್ಯಭಿಚಾರಿ!ಮಂಡ್ಯದಲ್ಲಿ ಗೌಡ್ರ ಗದ್ದಲ ಜೋರು: ಅವನೊಬ್ಬ ರಾಜಕೀಯ ವ್ಯಭಿಚಾರಿ!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೆಲುವರಾಯಸ್ವಾಮಿ, " ಆಮಂತ್ರಣ ನೀಡಿ ಕರೆಯಲು ಅದೇನು ಬೀಗರ ಊಟವೇ" ಎಂದು ಲೇವಡಿ ಮಾಡಿದ್ದಾರೆ.

Congress Leader Cheluvarayaswamy Lambasted Former CM HD Kumaraswamy

" ಸಮುದಾಯದ ಹೋರಾಟಕ್ಕೆ ನೈತಿಕ ಬೆಂಬಲ ನೀಡುವುದು ನಮ್ಮೆಲ್ಲರ ಕರ್ತವ್ಯ" ಎಂದು ಚೆಲುವರಾಯಸ್ವಾಮಿ, ಕುಮಾರಸ್ವಾಮಿಯವರ ಕಾಲೆಳೆದಿದ್ದಾರೆ.

" ಪ್ರತಿಭಟನೆಯಲ್ಲಿ ಭಾಗವಹಿಸಲು ನಮಗೂ ಆಹ್ವಾನವಿರಲಿಲ್ಲ. ಆದರೆ, ಒಗ್ಗಟ್ಟು ಎದುರಿಸಬೇಕಾಗಿರುವ ಈ ಸಮಯದಲ್ಲಿ ಪ್ರತಿಷ್ಠೆ ಒಳ್ಲೆಯದಲ್ಲ" ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ನಲ್ಲೂ ಜೆಡಿಎಸ್ ನಲ್ಲೂ "ಸಮಾನ ಮನಸ್ಕ ಅತೃಪ್ತ ಶಾಸಕರು": 2ನೇ ವಿಕೆಟ್ ಡೌನ್?

" ಕುಮಾರಸ್ವಾಮಿಯವರ ಸರಕಾರವನ್ನು ಉಳಿಸಲು, ಡಿಕೆಶಿ ಎಷ್ಟೆಲ್ಲಾ ಪ್ರಯತ್ನ ಪಟ್ಟಿದ್ದರು ಎನ್ನುವುದನ್ನು ನಾವು ಮರೆಯಬಾರದು" ಎಂದು ಚೆಲುವರಾಯಸ್ವಾಮಿ, ಕುಮಾರಸ್ವಾಮಿಯವರ ವಿರುದ್ದ ಕಿಡಿಕಾರಿದ್ದಾರೆ.

English summary
Senior Congress Leader Cheluvarayaswamy Lambasted Former CM HD Kumaraswamy Over His Absent In D K Shivakumar Arrest Against Protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X