ಪೌರತ್ವ ಕಾನೂನು; ಸಿಎಂ ಇಬ್ರಾಹಿಂ ಸಿಡಿಸಿದ್ರು ನಗೆ ಬಾಂಬ್!
ಬೆಂಗಳೂರು, ಡಿಸೆಂಬರ್ 21: ರಾಷ್ಟ್ರೀಯ ಪೌರತ್ವ ಕಾನೂನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ತಮ್ಮನ್ನೆ ತಾವು ವಿಡಂಬನೆ ಮಾಡಿಕೊಳ್ಳುವ ಮೂಲಕ ನಗೆ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮೋದಿ, ಅಮಿತ್ ಷಾ, ಪಾಕಿಸ್ತಾನ, ಬಾಂಗ್ಲಾದಿಂದ ಬಂದವರನ್ನು ಹಿಡಿದು ದಾಖಲೆ ಕೇಳಲಿ, ಅದು ಬಿಟ್ಟು ಇಲ್ಲಿರುವ ಸಾಬರಿಗೆ (ಮುಸ್ಲಿಂರಿಗೆ) ದಾಖಲೆ ಕೊಡು ಅಂತಾ ಕೇಳಿದ್ರೆ ಎಲ್ಲಿಂದ ತಂದು ಕೊಡುವುದು, ಇವಾಗ ಯಾರಾದರೂ ನನಗೇ ಎಷ್ಟು ಮಕ್ಕಳು ಅಂತಾ ಕೇಳಿದರೆ, ಸರಿಯಾಗಿ ಗೊತ್ತಿಲ್ಲ ನೋಡಿ' ಎನ್ನೋ ಮೂಲಕ ತಮ್ಮನ್ನೇ ತಾವು ವಿಡಂಬನೆ ಮಾಡಿಕೊಂಡು ಪೌರತ್ವ ಕಾನೂನನ್ನು ಖಂಡಿಸಿದ್ದಾರೆ.
'ಅಮಿತ ಷಾ, ಪ್ರಧಾನಿ ಮೋದಿ ದಾರಿ ತಪ್ಪಿಸುತ್ತಿದ್ದಾರೆ. ಮಾಡಲು ಕೆಲಸವಿಲ್ಲದೇ ಈ ಕಾನೂನನ್ನು ತಂದಿದ್ದಾರೆ. ಹಾಗೆ ನೋಡಿದರೆ, ದ್ರಾವಿಡರು ಭಾರತದ ಮೂಲ ನಿವಾಸಿಗಳು. ಆರ್ಯರೇ ಹೊರಗಿನವರು. ಬೇಕಾದರೆ ಅವರೇ ನಮ್ಮ ದೇಶ ಬಿಟ್ಟು ಹೋಗಲಿ. ಹಿಂದೂ ಮುಸ್ಲಿಂ ಎಲ್ಲರೂ ಭಾರತೀಯರು. ನಾವೆಲ್ಲ ಸಹೋದರರು. ಕಾನೂನನ್ನು ರದ್ದು ಮಾಡಬೇಕು' ಎಂದು ಹೇಳಿದರು.

'ತರಕಾರಿ, ದಿನಸಿ ಬೆಲೆಗಳ ಜಾಸ್ತಿ ಆಗಿವೆ. ಉದ್ಯೋಗಗಳು ಇಲ್ಲ. ಜಿಡಿಪಿ ಕುಸಿದಿದೆ, ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ಇವುಗಳ ಬಗ್ಗೆ ತಲೆಕೆಡಿಸಿಕೊಳ್ಳದ ಮೋದಿಯವರು ಕೆಲಸಕ್ಕೆ ಬಾರದ ಕಾಯ್ದೆ ಕಾನೂನುಗಳನ್ನು ಮಾಡಿಕೊಂಡು ಯಾವಾಗಲೂ ಅಧಿಕಾರದಲ್ಲಿ ಉಳಿಯಬೇಕು ಎಂಬ ದುರಾಲೋಚನೆಯಲ್ಲಿ ಇದ್ದಾರೆ' ಎಂದು ಖಂಡಿಸಿದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications