ಪೌರತ್ವ ಕಾನೂನು; ಸಿಎಂ ಇಬ್ರಾಹಿಂ ಸಿಡಿಸಿದ್ರು ನಗೆ ಬಾಂಬ್!
ಬೆಂಗಳೂರು, ಡಿಸೆಂಬರ್ 21: ರಾಷ್ಟ್ರೀಯ ಪೌರತ್ವ ಕಾನೂನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ತಮ್ಮನ್ನೆ ತಾವು ವಿಡಂಬನೆ ಮಾಡಿಕೊಳ್ಳುವ ಮೂಲಕ ನಗೆ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮೋದಿ, ಅಮಿತ್ ಷಾ, ಪಾಕಿಸ್ತಾನ, ಬಾಂಗ್ಲಾದಿಂದ ಬಂದವರನ್ನು ಹಿಡಿದು ದಾಖಲೆ ಕೇಳಲಿ, ಅದು ಬಿಟ್ಟು ಇಲ್ಲಿರುವ ಸಾಬರಿಗೆ (ಮುಸ್ಲಿಂರಿಗೆ) ದಾಖಲೆ ಕೊಡು ಅಂತಾ ಕೇಳಿದ್ರೆ ಎಲ್ಲಿಂದ ತಂದು ಕೊಡುವುದು, ಇವಾಗ ಯಾರಾದರೂ ನನಗೇ ಎಷ್ಟು ಮಕ್ಕಳು ಅಂತಾ ಕೇಳಿದರೆ, ಸರಿಯಾಗಿ ಗೊತ್ತಿಲ್ಲ ನೋಡಿ' ಎನ್ನೋ ಮೂಲಕ ತಮ್ಮನ್ನೇ ತಾವು ವಿಡಂಬನೆ ಮಾಡಿಕೊಂಡು ಪೌರತ್ವ ಕಾನೂನನ್ನು ಖಂಡಿಸಿದ್ದಾರೆ.
'ಅಮಿತ ಷಾ, ಪ್ರಧಾನಿ ಮೋದಿ ದಾರಿ ತಪ್ಪಿಸುತ್ತಿದ್ದಾರೆ. ಮಾಡಲು ಕೆಲಸವಿಲ್ಲದೇ ಈ ಕಾನೂನನ್ನು ತಂದಿದ್ದಾರೆ. ಹಾಗೆ ನೋಡಿದರೆ, ದ್ರಾವಿಡರು ಭಾರತದ ಮೂಲ ನಿವಾಸಿಗಳು. ಆರ್ಯರೇ ಹೊರಗಿನವರು. ಬೇಕಾದರೆ ಅವರೇ ನಮ್ಮ ದೇಶ ಬಿಟ್ಟು ಹೋಗಲಿ. ಹಿಂದೂ ಮುಸ್ಲಿಂ ಎಲ್ಲರೂ ಭಾರತೀಯರು. ನಾವೆಲ್ಲ ಸಹೋದರರು. ಕಾನೂನನ್ನು ರದ್ದು ಮಾಡಬೇಕು' ಎಂದು ಹೇಳಿದರು.

'ತರಕಾರಿ, ದಿನಸಿ ಬೆಲೆಗಳ ಜಾಸ್ತಿ ಆಗಿವೆ. ಉದ್ಯೋಗಗಳು ಇಲ್ಲ. ಜಿಡಿಪಿ ಕುಸಿದಿದೆ, ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ಇವುಗಳ ಬಗ್ಗೆ ತಲೆಕೆಡಿಸಿಕೊಳ್ಳದ ಮೋದಿಯವರು ಕೆಲಸಕ್ಕೆ ಬಾರದ ಕಾಯ್ದೆ ಕಾನೂನುಗಳನ್ನು ಮಾಡಿಕೊಂಡು ಯಾವಾಗಲೂ ಅಧಿಕಾರದಲ್ಲಿ ಉಳಿಯಬೇಕು ಎಂಬ ದುರಾಲೋಚನೆಯಲ್ಲಿ ಇದ್ದಾರೆ' ಎಂದು ಖಂಡಿಸಿದರು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications