'ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ 500 ಕೋಟಿ ಖರ್ಚಾಗಿಲ್ಲ'- ಎಚ್ ಕೆ ಪಾಟೀಲ್
ಬೆಂಗಳೂರು, ಜೂನ್ 30: ಕರ್ನಾಟಕದಲ್ಲಿ ಕೊರೊನಾ ವೈರಸ್ ವಿಚಾರದಲ್ಲಿ ಭ್ರಷ್ಟಚಾರ ಆಗ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಚ್ ಕೆ ಪಾಟೀಲ್ ಆರೋಪಿಸಿದ್ದಾರೆ.
Recommended Video
ಇಂದು ವಿಧಾನಸೌದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ ಕೊರೊನಾ ವೈರಸ್ ನಿರ್ವಹಣೆ, ಚಿಕಿತ್ಸೆ ಬಗ್ಗೆ ಚರ್ಚೆ ಮಾಡಲಾಗಿದೆ. ಈ ವೇಳೆ ರಾಜ್ಯದಲ್ಲಿ ಭ್ರಷ್ಟಚಾರ ಆಗಿದೆ ಎಂಬ ವಿಚಾರ ಗಮನಕ್ಕೆ ಬಂದಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಹೇಳಿದ್ದಾರೆ.
'ಕರ್ನಾಟಕದಲ್ಲಿ ಗುಣಮಟ್ಟದ ಸೇವೆಯ ಕೊರತೆ ಆಗ್ತಿದೆ. ಕೊರೊನಾ ಮೃತರ ಅಂತ್ಯಕ್ರಿಯೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಎಚ್.ಕೆ ಪಾಟೀಲ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಮುಂದೆ ಓದಿ....

ಕೊರೊನಾ ಚಿಕಿತ್ಸೆಗೆ 500 ಕೋಟಿ ಸಹ ಖರ್ಚಾಗಿಲ್ಲ
''ಕೊರೊನಾ ಚಿಕಿತ್ಸೆಗೆ 500 ಕೋಟಿ ಸಹ ಖರ್ಚಾಗಿಲ್ಲ. ಸರ್ಕಾರ ಏನ್ ಮಾಡ್ತಿದೆ, ಹಣಕಾಸು ವೆಚ್ಚ ಯಾವ ರೀತಿ ಮಾಡ್ತಿದೆ? 15 ಸಾವಿರ ಕೊರೊನಾ ಪರೀಕ್ಷೆಗಳ ಫಲಿತಾಂಶ ಬಾಕಿ ಇವೆ. ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಇದೆ. ಈಗ ಹಾಸಿಗೆಗಳ ಅರೇಂಜ್ಮೆಂಟ್ ಮಾಡಲು ಹೊರಟಿದೆ ಸರ್ಕಾರ. ಆಸ್ಪತ್ರೆಗಳಲ್ಲೇ ಯಾಕೆ ಬೆಡ್ ಗಳ ವ್ಯವಸ್ಥೆ ಮಾಡ್ತಿಲ್ಲ ಸರ್ಕಾರ? ಕೊರೊನಾ ನಿರ್ವಹಣೆಯಲ್ಲಿ ಲೋಪ ಆಗಿದೆ'' ಎಂದು ಎಚ್ ಕೆ ಪಾಟೀಲ್ ಆರೋಪ ಮಾಡಿದ್ದಾರೆ.

ಶವಾಗಾರದಲ್ಲಿ ಶವ ಇಟ್ಟುಕೊಳ್ಳಲಾಗಿದೆ
''ಕೊವಿಡ್ ನಿಯಂತ್ರಣಕ್ಕೆ ಏನು ವ್ಯವಸ್ಥೆ ಮಾಡಬೇಕು, ಅದರಲ್ಲಿ ಸರ್ಕಾರದಿಂದ ಲೋಪ ಆಗಿದೆ. 15,000 ಕೊವಿಡ್ ಪರೀಕ್ಷಾ ರಿಸಲ್ಟ್ ಬರಲು ಬಾಕಿ ಇದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಪರೀಕ್ಷಾ ವರದಿಯನ್ನು ನೀಡಲು ವಾರಗಟ್ಟೆಲೆ ತೆಗೆದುಕೊಳ್ಳಲಾಗಿದೆ. ಮೃತಪಟ್ಟವರ ಕೊವಿಡ್ ಟೆಸ್ಟಿಂಗ್ ವರದಿ ಬರದೆ ವಾರಗಟ್ಟೆಲೆ ಶವಾಗಾರದಲ್ಲಿ ಇಟ್ಟುಕೊಳ್ಳಲಾಗಿದೆ. ಅದು ಅತ್ಯಂತ ಆತಂಕಕಾರಿ ವಿಚಾರವಾಗಿದೆ'' ಎಂದು ವಾಗ್ದಾಳಿ ನಡೆಸಿದ್ದಾರೆ.

ಸತ್ತವರನ್ನು ಹೂಳಲು ಜಾಗ ಇಲ್ಲ
''ಪ್ರತಿ ದಿನಾ 10-15 ಸಾವಿರ ಟೆಸ್ಟಿಂಗ್ ಮಾಡಿ ವರದಿ ತಕ್ಷಣಕ್ಕೆ ನೀಡುವ ವ್ಯವಸ್ಥೆ ಮಾಡಬೇಕು. ಕೊವಿಡ್ ನಿಂದ ಮೃತಪಟ್ಟವರನ್ನು ಜಾನುವಾರು ತರ ನೋಡಲಾಗುತ್ತಿದೆ. ಬಳ್ಳಾರಿಯಲ್ಲಿ ಮೃತರ ಶವಗಳನ್ನು ಕಸದ ರೀತಿ ಕನಿಷ್ಟ ಗೌರವ ನೀಡದೆ ಬಿಸಾಡಲಾಗಿದೆ. ಇದು ಅತ್ಯಂತ ಖಂಡನೀಯ ವಿಚಾರವಾಗಿದೆ. ಸತ್ತವರನ್ನು ಹೂಳಲು ಜಾಗ ಸಿಗುತ್ತಿಲ್ಲ. ಆ ರೀತಿ ಮಾಡಬಾರದು'' ಎಂದು ಖಂಡಿಸಿದ್ದಾರೆ.

ಮುಂದಿನವಾರ ವಿವರ ಸಿಗಲಿದೆ
''ಆರೋಗ್ಯ ಇಲಾಖೆ ಉಪಕರಣ, ಇತರೆ ಖರೀದಿಯಲ್ಲಿ ಭ್ರಷ್ಟಾಚಾರದ ದೂರಿನ ಬಗ್ಗೆ ಅಧಿಕಾರಿಗಳು ಮುಂದಿನ ವಾರ ವಿವರ ನೀಡುವುದಾಗಿ ತಿಳಿಸಿದ್ದಾರೆ. ಕೊವಿಡ್ ಹಿನ್ನೆಲೆ ಒಂದು ತಿಂಗಳು ಪಿಎಸಿ ಸಭೆ ನಡೆಸಬಾರದು ಎಂದು ತೀರ್ಮಾನಿಸಲಾಗಿದೆ. ಸಾಧ್ಯವಾದರೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ'' ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications