ನಟಿ ಸಂಯುಕ್ತಾ ಹೆಗ್ಡೆ ಜತೆ ಕಿರಿಕ್: ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಬಂಧನ
ಬೆಂಗಳೂರು, ಸೆಪ್ಟೆಂಬರ್ 8: ಸರ್ಜಾಪುರ ರಸ್ತೆಯ ಅಗರ ಕೆರೆಯ ಉದ್ಯಾನದಲ್ಲಿ ಶುಕ್ರವಾರ ನಡೆದ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಅವರನ್ನು ಬಂಧಿಸಲಾಗಿದೆ. ನಟಿ ಸಂಯುಕ್ತಾ ಹೆಗ್ಡೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ಉಡುಪು ಧರಿಸಿ ವರ್ಕೌಟ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಆಕ್ಷೇಪಿಸಿದ್ದರು. ಇದು ಅವರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿತ್ತು. ಸಂಯುಕ್ತಾ ಸ್ನೇಹಿತೆಯ ಹಲ್ಲೆ ನಡೆಸಲೂ ಕವಿತಾ ಮುಂದಾಗಿದ್ದರು.
Recommended Video
ಈ ಸಂಬಂಧ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಸಂಯುಕ್ತಾ ಹೆಗ್ಡೆ ದೂರು ಸಲ್ಲಿಸಿದ್ದರು. ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿ ಕವಿತಾ ರೆಡ್ಡಿ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿತ್ತು. ಮಂಗಳವಾರ ಅವರನ್ನು ಬಂಧಿಸಲಾಗಿದೆ.
ಎರಡನೆಯ ಆರೋಪಿ ಅನಿಲ್ ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ಸಂಯುಕ್ತಾ ಹೆಗ್ಡೆ ಮನವಿ ಮಾಡಿದ್ದರು. ಆರೋಪಿ ಅನಿಲ್ ರೆಡ್ಡಿ ನಾಪತ್ತೆಯಾಗಿದ್ದಾರೆ.

ಸಂಯುಕ್ತಾ ಹೆಗ್ಡೆ ಮತ್ತು ಸ್ನೇಹಿತೆಯ ವಿರುದ್ಧದ ನೈತಿಕ ಪೊಲೀಸ್ ಗಿರಿ ತೀವ್ರ ವಿವಾದ ಸೃಷ್ಟಿಸಿತ್ತು. ಆರಂಭದಲ್ಲಿ ಅದನ್ನು ಸಮರ್ಥಿಸಿಕೊಂಡಿದ್ದ ಕವಿತಾ ರೆಡ್ಡಿ, ಬಳಿಕ ಸಂಯುಕ್ತಾ ಹೆಗ್ಡೆ ಬಳಿ ಬಹಿರಂಗ ಕ್ಷಮೆ ಕೋರಿದ್ದರು. ಇಬ್ಬರ ನಡುವೆ ರಾಜಿ ಸಂಧಾನ ಮಾಡಲಾಗಿತ್ತು. ಆದರೆ ರಾಜಿಗೆ ತಮ್ಮ ಒಪ್ಪಿಗೆ ಇಲ್ಲ. ಒತ್ತಾಯಪೂರ್ವಕವಾಗಿ ಸಹಿ ಹಾಕುತ್ತಿದ್ದೇನೆ ಎಂದು ಸಂಯುಕ್ತಾ ಹೆಗ್ಡೆ ಹೇಳಿದ್ದರು. ಹೀಗಾಗಿ ಕವಿತಾ ರೆಡ್ಡಿ ಅವರನ್ನು ಬಂಧಿಸಲಾಗಿದೆ.
ಕವಿತಾ ರೆಡ್ಡಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 264 B, 323, 224, 504, 509, 506ರ ಅಡಿ ಎಫ್ಐಆರ್ ದಾಖಲು ಮಾಡಿದ್ದರು.
-
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ











Click it and Unblock the Notifications